MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ವಿಜಯಪುರ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು 'ಜೀವಂತ ಸಮಾಧಿ'; ಮಳೆ ಅಬ್ಬರಕ್ಕೆ ನಲುಗಿದ ಆಲಮೇಲ!

ವಿಜಯಪುರ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು 'ಜೀವಂತ ಸಮಾಧಿ'; ಮಳೆ ಅಬ್ಬರಕ್ಕೆ ನಲುಗಿದ ಆಲಮೇಲ!

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ, ಭಾರೀ ಮಳೆಗೆ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ತಮ್ಮ ಸ್ವಂತ ಮನೆಯ ದುರಸ್ತಿ ಹಿನ್ನೆಲೆಯಲ್ಲಿ ಬಾಡಿಗೆ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ.

1 Min read
Author : Sathish Kumar KH
Published : May 15 2026, 09:21 AM IST
Share this Photo Gallery
  • FB
  • TW
  • Linkdin
  • Whatsapp
16
ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ
Image Credit : Asianet News

ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ

ವಿಜಯಪುರ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಗಾಳಿ ಸಹಿತ ಮಳೆ ದೊಡ್ಡ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಸಂಭವಿಸಿದೆ.

Add Asianetnews Kannada as a Preferred SourcegooglePreferred
26
ಮೃತರ ವಿವರ
Image Credit : Asianet News

ಮೃತರ ವಿವರ

ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರು (28) ಹಾಗೂ ಅವರ ಮಕ್ಕಳಾದ ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ.

Related Articles

Related image1
Shivamogga: ಒಂದೇ ಕುಟುಂಬದ ನಾಲ್ವರು ನೀರುಪಾಲು: ಮಕ್ಕಳೊಂದಿಗೆ ತವರಿಗೆ ಬಂದಿದ್ದ ಮಗಳು
Related image2
ಕೆ.ಆರ್. ನಗರ ಉರುಸ್ ಸಂಭ್ರಮದ ನಡುವೆ ಕಾವೇರಿ ನದಿಯಲ್ಲಿ ದುರಂತ; ಒಂದೇ ಕುಟುಂಬದ ಆರು ಮಂದಿ ನೀರುಪಾಲು!
36
ಘಟನೆಯ ಹಿನ್ನೆಲೆ
Image Credit : Asianet News

ಘಟನೆಯ ಹಿನ್ನೆಲೆ

ಬಡಿಗೇರ ಕುಟುಂಬದವರು ಮೊರಟಗಿ ಗ್ರಾಮದ ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ವಾಸವಿದ್ದರು. ತಮ್ಮ ಸ್ವಂತ ಮನೆಯ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ, ತಾತ್ಕಾಲಿಕವಾಗಿ ಈ ಹಳೆಯ ಮನೆಗೆ ವಾಸ್ತವ್ಯ ಬದಲಿಸಿದ್ದರು. ಆದರೆ ವಿಧಿಯ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ. ಈ ವೇಳೆ ಅವರು ವಾಸವಿದ್ದ ಹಳೆಯ ಮನೆಯ ಮೇಲ್ಚಾವಣಿ ದಿಢೀರ್ ಎಂದು ಕುಸಿದು ಬಿದ್ದಿದೆ.

46
ಅವಶೇಷಗಳಡಿ ಸಿಲುಕಿದ ಮೃತದೇಹ
Image Credit : Asianet News

ಅವಶೇಷಗಳಡಿ ಸಿಲುಕಿದ ಮೃತದೇಹ

ಗಾಢ ನಿದ್ರೆಯಲ್ಲಿದ್ದ ಕುಟುಂಬದ ಸದಸ್ಯರಿಗೆ ತಪ್ಪಿಸಿಕೊಳ್ಳಲು ಸಮಯವೇ ಸಿಗಲಿಲ್ಲ. ಮೇಲ್ಚಾವಣಿಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ದಂಪತಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

56
ಸ್ಥಳಕ್ಕೆ ಅಧಿಕಾರಿಗಳ ಭೇಟಿ:
Image Credit : Asianet News

ಸ್ಥಳಕ್ಕೆ ಅಧಿಕಾರಿಗಳ ಭೇಟಿ:

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ನಾಲ್ವರ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

66
ಗ್ರಾಮದಲ್ಲಿ ಆಕ್ರಂದನ:
Image Credit : Asianet News

ಗ್ರಾಮದಲ್ಲಿ ಆಕ್ರಂದನ:

ಸ್ವಂತ ಮನೆಯ ಕೆಲಸ ಮುಗಿಸಿ ಶೀಘ್ರದಲ್ಲೇ ಅಲ್ಲಿಗೆ ಹೋಗಬೇಕೆಂಬ ಕನಸು ಕಂಡಿದ್ದ ಕುಟುಂಬ ಈಗ ಅಕಾಲಿಕವಾಗಿ ಸಾವನ್ನಪ್ಪಿರುವುದು ಸ್ಥಳೀಯರ ಕಣ್ಣೀರಿಗೆ ಕಾರಣವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಳೆಯ ಮನೆಗಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗಿದ್ದು, ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ವಿಜಯಪುರ
ಕರ್ನಾಟಕ ಮಳೆ
ಕರ್ನಾಟಕ ಸುದ್ದಿ
ಮನೆ
ಕುಟುಂಬ

Latest Videos
Recommended Stories
Recommended image1
ಆಸ್ತಿ ಬೇಕು, ತಾಯಿ ಬೇಡ! ಅಮ್ಮನ ನೋಡಿಕೊಳ್ಳದ ಮಗಳಿಗೆ ಹೈಕೋರ್ಟ್ ತಪರಾಕಿ, ದಾನಪತ್ರ ರದ್ದು, ಏನಿದು ಪ್ರಕರಣ?
Recommended image2
Karnataka Hijab controversy: ಭುಗಿಲೆದ್ದ ರಾಜಕೀಯ, 'ಕೇಸರಿ ಅಲೆ'ಗೆ ದಾರಿಯಾಗಲಿದೆಯಾ? ಈಶ್ವರಪ್ಪ ಸ್ಫೋಟಕ ಹೇಳಿಕೆ!
Recommended image3
Karnataka rains: ರಾಜ್ಯದ ಈ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ! ಈ ಪಟ್ಟಿಯಲ್ಲಿ ನಿಮ್ಮ ಜಿಲ್ಲೆ ಇದೆಯಾ?
Related Stories
Recommended image1
Shivamogga: ಒಂದೇ ಕುಟುಂಬದ ನಾಲ್ವರು ನೀರುಪಾಲು: ಮಕ್ಕಳೊಂದಿಗೆ ತವರಿಗೆ ಬಂದಿದ್ದ ಮಗಳು
Recommended image2
ಕೆ.ಆರ್. ನಗರ ಉರುಸ್ ಸಂಭ್ರಮದ ನಡುವೆ ಕಾವೇರಿ ನದಿಯಲ್ಲಿ ದುರಂತ; ಒಂದೇ ಕುಟುಂಬದ ಆರು ಮಂದಿ ನೀರುಪಾಲು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved