MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಹುಲಿ ಹಿಡಿಯಲು ವಿಫಲವಾದ ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಬೋನಿಗೆ ಹಾಕಿದ ಕಾಡಂಚಿನ ಜನ!

ಹುಲಿ ಹಿಡಿಯಲು ವಿಫಲವಾದ ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಬೋನಿಗೆ ಹಾಕಿದ ಕಾಡಂಚಿನ ಜನ!

ಚಾಮರಾಜನಗರದ ಬೊಮ್ಮಲಾಪುರದಲ್ಲಿ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಬೇಸತ್ತ ಗ್ರಾಮಸ್ಥರು ಅರಣ್ಯ ಸಿಬ್ಬಂದಿಯನ್ನು ಬೋನಿಗೆ ಕೂಡಿಹಾಕಿ ಪ್ರತಿಭಟನೆ ನಡೆಸಿದ್ದಾರೆ.

1 Min read
Sathish Kumar KH
Published : Sep 09 2025, 03:41 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಚಾಮರಾಜನಗರ (ಸೆ.09): ಕಳೆದ ಒಂದು ತಿಂಗಳಿನಿಂದ ಕಾಡಿನಿಂದ ನಾಡಿಗೆ ಬಂದು ಜನರಲ್ಲಿ ಭೀತಿ ಹುಟ್ಟಿಸಿರುವ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಅರಣ್ಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.

25
Image Credit : Asianet News

ಈ ಘಟನೆಯ ಹಿನ್ನೆಲೆ ಏನು?

ಕಳೆದ ಒಂದು ತಿಂಗಳಿನಿಂದ ಬೊಮ್ಮಲಾಪುರ ಗ್ರಾಮದ ಜಮೀನುಗಳಲ್ಲಿ ಹುಲಿ ಸಂಚಾರ ಮಾಡುತ್ತಿದೆ. ಇದರಿಂದ ಭಯಗೊಂಡ ಗ್ರಾಮಸ್ಥರು ಕೂಲಿ ನಾಟಿಗೆ ಹೋಗಲು, ರಾತ್ರಿ ಹೊತ್ತು ಹೊರಗೆ ಬರಲು ಹೆದರುತ್ತಿದ್ದಾರೆ. ಕೂಡಲೇ ಹುಲಿಯನ್ನು ಸೆರೆ ಹಿಡಿದು ತಮ್ಮನ್ನು ರಕ್ಷಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದರು.

Related Articles

Related image1
ಹುಲಿ ಯೋಜನೆಗೆ ದಲಿತರ ಹಣ ಏಕೆ? ಹುಲಿ ಜಾತಿ ಹುಡುಕಬೇಕಾ: ಆರ್‌.ಅಶೋಕ್‌ ಪ್ರಶ್ನೆ
Related image2
ಒಂದೇ ಫ್ರೇಮ್‌ನಲ್ಲಿ ರಾಷ್ಟ್ರೀಯ ಪ್ರಾಣಿ ಹುಲಿ ಮತ್ತು ರಾಷ್ಟ್ರೀಯ ಪಕ್ಷಿ ನವಿಲು: ಅಪರೂಪದ ದೃಶ್ಯ ವೈರಲ್!
35
Image Credit : Asianet News

ಗ್ರಾಮಸ್ಥರ ತೀವ್ರ ಒತ್ತಡಕ್ಕೆ ಮಣಿದ ಅರಣ್ಯ ಇಲಾಖೆ ಅಧಿಕಾರಿಗಳು, ಒಂದು ಬೋನನ್ನು ಅಳವಡಿಸಿ ತಮ್ಮ ಜವಾಬ್ದಾರಿಯನ್ನು ಮುಗಿಸಿಕೊಂಡರು. ಆದರೆ, ಒಂದು ತಿಂಗಳಾದರೂ ಹುಲಿಯನ್ನು ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ. ಇದು ಕೇವಲ ಜನರನ್ನು ಸಮಾಧಾನಪಡಿಸಲು ಇಲಾಖೆ ನಡೆಸಿದ 'ಕಣ್ಣೊರೆಸುವ ತಂತ್ರ' ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

45
Image Credit : Asianet News

ಪ್ರತಿಭಟನೆ ಏಕೆ?

ಅರಣ್ಯ ಇಲಾಖೆಯ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತ ಗ್ರಾಮಸ್ಥರು, ಇಂದು ಅರಣ್ಯ ಸಿಬ್ಬಂದಿಯನ್ನು ಬೋನಿಗೆ ಕೂಡಿಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ತಕ್ಷಣ ಹುಲಿಯನ್ನು ಸೆರೆ ಹಿಡಿಯುವಂತೆ ಹಾಗೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದರು.

55
Image Credit : Asianet News

ಇದೇ ರೀತಿ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮುಂದುವರೆದರೆ ಉಗ್ರ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಈ ಘಟನೆಯು ಸ್ಥಳೀಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ನಡುವಿನ ಹದಗೆಡುತ್ತಿರುವ ಸಂಬಂಧವನ್ನು ತೋರಿಸುತ್ತದೆ, ಈ ಸಮಸ್ಯೆಯನ್ನು ಬಗೆಹರಿಸಲು ತಕ್ಷಣದ ಕ್ರಮದ ಅಗತ್ಯವಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಚಾಮರಾಜನಗರ
ಹುಲಿ
ಅರಣ್ಯ
ಪ್ರತಿಭಟನೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved