MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಚಿತ್ರದುರ್ಗ 2ನೇ ಮದುವೆಯಾಗ್ತಿದ್ದ ಗಂಡನಿಗೆ ಮೊದಲ ಹೆಂಡ್ತಿಯಿಂದ ಚಪ್ಪಲಿ ಏಟು!

ಚಿತ್ರದುರ್ಗ 2ನೇ ಮದುವೆಯಾಗ್ತಿದ್ದ ಗಂಡನಿಗೆ ಮೊದಲ ಹೆಂಡ್ತಿಯಿಂದ ಚಪ್ಪಲಿ ಏಟು!

ಚಿತ್ರದುರ್ಗದಲ್ಲಿ ವರದಕ್ಷಿಣೆಗಾಗಿ 2ನೇ ಮದುವೆಯಾಗಲು ಹೋದ ಗಂಡನಿಗೆ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ತನುಜಾ ಎಂಬ ಮಹಿಳೆ ತನ್ನ ಗಂಡ ಕಾರ್ತಿಕ್ 2ನೇ ಮದುವೆಗೆ ಮುಂದಾಗುತ್ತಿರುವುದನ್ನು ತಿಳಿದು ಮಂಟಪಕ್ಕೆ ನುಗ್ಗಿ ಚಪ್ಪಲಿಯಿಂದ ಹೊಡೆದಿದ್ದಾರೆ.

1 Min read
Author : Sathish Kumar KH
| Updated : Jun 08 2025, 11:45 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಚಿತ್ರದುರ್ಗ (ಜೂ.8): ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಒಂದು ವಿಚಿತ್ರ ಘಟನೆ ಶನಿವಾರ ನಡೆದಿದೆ. ತಮ್ಮ ಗಂಡ ಕಾರ್ತಿಕ್ ಅವರು ವರದಕ್ಷಿಣೆಯ ದುರಾಸೆಯಿಂದ ಬೇರೆ ಯುವತಿಯೊಂದಿಗೆ 2ನೇ ಮದುವೆಗೆ ಮುಂದಾಗುತ್ತಿರುವ ಮಾಹಿತಿ ತಿಳಿದ ತನುಜಾ ಎಂಬ ಮಹಿಳೆ ನೇರವಾಗಿ ಮಂಟಪಕ್ಕೆ ಬಂದು ಗಂಡನಿಗೆ ಎಲ್ಲರ ಮುಂದೆಯೇ ಚಪ್ಪಲಿ ಏಟು ಕೊಟ್ಟಿದ್ದಾರೆ.

25
Image Credit : Asianet News

ಘಟನೆಯ ವಿವರ:

ತನುಜಾ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳ ಗ್ರಾಮದವರು. ನಾಲ್ಕು ವರ್ಷಗಳ ಹಿಂದೆ ಅವರು ಚಿಕ್ಕಮಗಳೂರು ಜಿಲ್ಲೆ ಅರಸೀಕೆರೆಯ ತಿಪ್ಪಘಟ್ಟ ಗ್ರಾಮದ ಕಾರ್ತಿಕ್ ನಾಯ್ಕ್ ಅವರೊಂದಿಗೆ ವಿವಾಹವಾದರು. ಆದರೆ, ವೈವಾಹಿಕ ಜೀವನದಲ್ಲಿ ಅನೇಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿದ್ದರು ಎಂದು ಮೂಲಗಳು ತಿಳಿಸುತ್ತವೆ.

Related Articles

Related image1
Hindi Actress Nia Sharma: ಮದುವೆ ಯಾವಾಗ ಅಂತ ಕೇಳಿದ್ರೆ… ಶಾಕಿಂಗ್ ಉತ್ತರ ಕೊಟ್ಟ ಕಿರುತೆರೆಯ ಬೋಲ್ಡ್ ಬ್ಯೂಟಿ
Related image2
Actress Vaishnavi Gowda: ಮದುವೆ ದಿನಾಂಕವನ್ನು ನಟಿ Vaishnavi Gowda ಗುಟ್ಟಾಗಿ ಇಟ್ಟಿದ್ದೇಕೆ? ಎಲ್ಲಾ ಜ್ಯೋತಿಷದ ಮಹಿಮೆ?
35
Image Credit : Asianet News

ಆದರೆ ಕಾರ್ತಿಕ್, ತಾನು ಈಗಲೂ ವೈವಾಹಿಕ ಸಂಬಂಧದಲ್ಲಿದ್ದರೂ, ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮತ್ತೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದರು. ಈ ಸುದ್ದಿ ತಿಳಿದ ತನುಜಾ, ತಕ್ಷಣವೇ ತನ್ನ ಕುಟುಂಬದೊಂದಿಗೆ ಮಂಟಪಕ್ಕೆ ಬಂದಿದ್ದಾರೆ.

45
Image Credit : Asianet News

ಮದುವೆ ಮಂಟಪದ ವೇದಿಕೆಯಲ್ಲಿ ನಿಂತಿದ್ದ ಕಾರ್ತಿಕ್‌ಗೆ ಮಂಟಪದಲ್ಲೇ ಸಾರ್ವಜನಿಕವಾಗಿ ಚಪ್ಪಲಿ ಏಟು ಕೊಟ್ಟಿದ್ದಾರೆ. ಆ ವೇಳೆ ಅಲ್ಲಿ ಇದ್ದ ಎಲ್ಲಾ ಅತಿಥಿಗಳು ಹಾಗೂ 2ನೇ ವಧುವಿನ ಕಡೆಯವರು ಕಂಗಾಲಾಗಿದ್ದಾರೆ.

ತನುಜಾ ಅವರು ಈ ಕೃತ್ಯವನ್ನು ಮಹಿಳೆಯ ಹಕ್ಕಿಗಾಗಿ ನಡೆಸಿದ ಧೈರ್ಯಶಾಲಿ ಕ್ರಮವೆಂದು ಹಲವು ಜನರು ಶ್ಲಾಘಿಸಿದ್ದಾರೆ. ತನ್ನ ವೈವಾಹಿಕ ಹಕ್ಕುಗಳನ್ನು ಉಳಿಸಿಕೊಳ್ಳಲು, ಹಾಗೂ ಸಾಮಾಜಿಕ ಅನ್ಯಾಯವನ್ನು ತಡೆಗಟ್ಟಲು ತನುಜಾ ತೋರಿದ ತೀವ್ರ ಧೈರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ.

55
Image Credit : Asianet News

ಕಾನೂನು ಕ್ರಮ:

ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ತಿಕ್ ವಿರುದ್ಧ ತನುಜಾ ಹಾಗೂ ಅವರ ಕುಟುಂಬಸ್ಥರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 2ನೇ ಮದುವೆ ವಿರುದ್ಧ ಕಾನೂನು ಕ್ರಮ ಜರುಗುವ ಸಾಧ್ಯತೆ ಇದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಚಿತ್ರದುರ್ಗ
ಸಂಬಂಧಗಳು
ಪತ್ನಿ
ಮದುವೆ

Latest Videos
Recommended Stories
Recommended image1
'ನಮ್ಮ ಹನುಮ ಕನ್ನಡಿಗ' : ರಿಷಬ್ ಮಾತಿಗೆ ಜಗ್ಗೇಶ್ ರೋಮಾಂಚನ, ಏನು ಹೇಳಿದ್ರು ನೋಡಿ!
Recommended image2
Bengaluru Crime: ಕೈಮುಗಿದ್ರೂ ಬಿಡಲಿಲ್ಲ.. ತಲೆಗೆ ಹೊಡೆದು ಮದ್ಯ ಸುರಿದು ವಿಕೃತಿ! ಏನಾಗ್ತಿದೆ ರಾಜ್ಯದಲ್ಲಿ?
Recommended image3
ರಾಯರ ಸನ್ನಿಧಿಯಲ್ಲಿ ಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ ಕಿಡಿ: ದೇಶದಲ್ಲೇ ನಂಬರ್ 1 ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ!
Related Stories
Recommended image1
Hindi Actress Nia Sharma: ಮದುವೆ ಯಾವಾಗ ಅಂತ ಕೇಳಿದ್ರೆ… ಶಾಕಿಂಗ್ ಉತ್ತರ ಕೊಟ್ಟ ಕಿರುತೆರೆಯ ಬೋಲ್ಡ್ ಬ್ಯೂಟಿ
Recommended image2
Actress Vaishnavi Gowda: ಮದುವೆ ದಿನಾಂಕವನ್ನು ನಟಿ Vaishnavi Gowda ಗುಟ್ಟಾಗಿ ಇಟ್ಟಿದ್ದೇಕೆ? ಎಲ್ಲಾ ಜ್ಯೋತಿಷದ ಮಹಿಮೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved