MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಈ ಪುಷ್ಪ ಫ್ಲವರ್‌ ಅಲ್ಲ, ಫಯರು..ಮಾತನ್ನೇ ನಿಜ ಮಾಡಿದ ನಿರ್ಮಾಪಕಿ ಪುಷ್ಪ ಅರುಣ್‌ಕುಮಾರ್‌!

ಈ ಪುಷ್ಪ ಫ್ಲವರ್‌ ಅಲ್ಲ, ಫಯರು..ಮಾತನ್ನೇ ನಿಜ ಮಾಡಿದ ನಿರ್ಮಾಪಕಿ ಪುಷ್ಪ ಅರುಣ್‌ಕುಮಾರ್‌!

ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ದೇವರಾಜ್ ನಡುವಿನ ವಿದ್ಯಾನಗರದ ಸೈಟ್ ವಿವಾದ ಮತ್ತೆ ಭುಗಿಲೆದ್ದಿದೆ. ವಿವಾದಿತ ಜಾಗದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ದೇವರಾಜ್ ಮುಂದಾದಾಗ, ಪುಷ್ಪಾ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. 

1 Min read
Author : Santosh Naik
Published : Feb 01 2026, 03:34 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : X

ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಜಿಪಿಎ ಹೋಲ್ಡರ್ ದೇವರಾಜ್ ನಡುವಿನ ವಿದ್ಯಾನಗರದ ಸೈಟ್ ವಿವಾದ ಶನಿವಾರ ಮತ್ತೆ ತಾರಕಕ್ಕೇರಿದೆ. ವಿವಾದಿತ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಲು ದೇವರಾಜ್ ಮುಂದಾದಾಗ ಪುಷ್ಪಾ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಬ್ಬರ ನಡುವೆ ಜಟಾಪಟಿ ನಡೆದಿದೆ.

27
Image Credit : X

ವಿಷಯ ತಿಳಿಯುತ್ತಿದ್ದಂತೆ ಎರಡೂ ಕಡೆಯ ಬೆಂಬಲಿಗರು ಸ್ಥಳದಲ್ಲಿ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ ಹೈಡ್ರಾಮಾವನ್ನು ಶಮನಗೊಳಿಸಿದರು.

Related Articles

Related image1
'ಏನ್‌ ರೌಡಿಸಂ ಮಾಡ್ತೀಯಾ..' ಬೋರ್ಡ್‌ ಕಿತ್ತು ಹಾಕಿ ಮತ್ತೆ ಕಂಪೌಂಡ್‌ ಹಾಕಲು ಬಂದ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌!
Related image2
'ಪೇಮೆಂಟ್‌ ಬಂದಿಲ್ಲ, ಪುಷ್ಪ ಅರುಣ್‌ಕುಮಾರ್‌ಗೆ ಹೇಳಿ ಪ್ಲೇಸ್':‌ ಕೊತ್ತಲವಾಡಿ ಸಿನಿಮಾ ನಟ ಮಹೇಶ್‌ ಗುರು
37
Image Credit : X

ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿರುವಾಗಲೇ ಕಾಮಗಾರಿ ನಡೆಸುತ್ತಿರುವುದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ, ಕೆಲಸಗಾರರನ್ನು ವಾಪಸ್ ಕಳಿಸಿದ್ದಾರೆ.

47
Image Credit : X

ಸದ್ಯ ಕಾಂಪೌಂಡ್ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದ್ದು, ದಾಖಲೆಗಳೊಂದಿಗೆ ಪೊಲೀಸ್ ಠಾಣೆಗೆ ಬರುವಂತೆ ಇಬ್ಬರಿಗೂ ಪೊಲೀಸರು ಸೂಚನೆ ನೀಡಿದ್ದಾರೆ. ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಪುಷ್ಪಾ ಅವರು ಮನೆ ಒಳಗೆ ತೆರಳಿದ್ದಾರೆ.

57
Image Credit : X

ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆಯಾಗಿದೆ. ಕೋರ್ಟ್‌ಅಲ್ಲಿ ಈ ಬಗ್ಗೆ ನಮಗೆ ಆದೇಶ ಆಗಿದೆ ಎಂದು ದೇವರಾಜ್‌ ಹೇಳಿದ್ದಕ್ಕೆ, ಅದರ ಆರ್ಡರ್‌ ಕಾಪಿ ಕೊಡು ಎಂದು ಪುಷ್ಪ ವೈಲೆಂಟ್‌ ಆಗಿ ಕೇಳಿದ್ದಾರೆ.

67
Image Credit : X

ಕಾಪಿ ಕೊಡೋಕೆ ಆಗಲಿಲ್ಲ ಅಂದಾದ್ರೆ ಇಲ್ಲಿಯೇ ಜಡ್ಜ್‌ನ ಕರೆಸು ಅಂತಾ ಪುಷ್ಪ ಹೇಳಿದ್ದಾರೆ. ಇದಕ್ಕೆ ದೇವರಾಜ್‌ ಅವರು ಜಡ್ಜ್‌ ಯಾರಾದ್ರೂ ಇಲ್ಲಿಗೆ ಬರ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪುಷ್ಪ ಜೊತೆಯಲ್ಲಿದ್ದ ಇನ್ನೊಬ್ಬ ವ್ಯಕ್ತಿ, ಈ ಜಾಗ ನಿಂದು ಅಂತಾದರೆ, ಅದರ ದಾಖಲೆಗಳನ್ನ ಕೊಡು ಅಂತಾ ಕೇಳಿದ್ದಾರೆ. ಅದಕ್ಕೆ ದೇವರಾಜ್‌, ಅವರ ವಕೀಲರಿಗೆ ಈ ದಾಖಲೆ ನೀಡಿದ್ದೇನೆ ಎಂದಿದ್ದಾರೆ.

77
Image Credit : X

ನೀನೇನು ಬಿಲ್ಡಪ್‌ ತಗೊಳ್ಳೋಕೆ ಬಂದಿದ್ದೀಯ. ಯಶ್‌ ಅವರ ಅಮ್ಮ ಅಂದ್ಕೊಂಡು ಬಿಲ್ಡಪ್‌ಗೆ ಬಂದಿದ್ದೀಯಾ ಎಂದು ರಾಂಗ್‌ ಆಗಿಯೇ ಪುಷ್ಪ ಅರುಣ್‌ ಕುಮಾರ್‌ ಹೇಳಿದ್ದಾರೆ. ಇಂಥ ಕೇಸ್‌ಗಳಲ್ಲಿ ನೀವು ಕ್ಯಾಮೆರಾ ಹಿಡೀತೀರೋ ಇಲ್ಲ, ಪೇಪರ್‌ ಕೇಳ್ತಿರೋ ಎಂದು ಮಾಧ್ಯಮದವರಿಗೆ ಪುಷ್ಪ ಅರುಣ್‌ಕುಮಾರ್‌ ಪ್ರಶ್ನಿಸಿದ್ದಾರೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಯಶ್
ಕರ್ನಾಟಕ ಸುದ್ದಿ
ಸ್ಯಾಂಡಲ್‌ವುಡ್
ವಿವಾದ
ಹಾಸನ

Latest Videos
Recommended Stories
Recommended image1
ಚಾಮರಾಜನಗರ ಸ್ಪರ್ಧೆ ಚರ್ಚೆಗೆ ತೆರೆ ಎಳೆದ-ನಿಖಿಲ್ ಕುಮಾರಸ್ವಾಮಿ! ಅಪ್ಪ, ಅಜ್ಜನ ಕರ್ಮಭೂಮಿ ಬಿಟ್ಟು ಬೇರೆಡೆ ಹೋಗಲ್ಲ!
Recommended image2
ಬೆಂಗಳೂರು ಉದ್ಯಮಿ ಸಿ.ಜೆ. ರಾಯ್ ಆತ್ಮ*ಹತ್ಯೆ ಪ್ರಕರಣ: ಡೆತ್ ನೋಟ್ ಬಗ್ಗೆ ಎಸ್‌ಐಟಿ ಮಹತ್ವದ ಮಾಹಿತಿ
Recommended image3
ದೈವ ನರ್ತಕನಿಗೆ 2.10 ಲಕ್ಷ ರು. ಮೌಲ್ಯದ ಕೃತಕ ಕಾಲು
Related Stories
Recommended image1
'ಏನ್‌ ರೌಡಿಸಂ ಮಾಡ್ತೀಯಾ..' ಬೋರ್ಡ್‌ ಕಿತ್ತು ಹಾಕಿ ಮತ್ತೆ ಕಂಪೌಂಡ್‌ ಹಾಕಲು ಬಂದ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌!
Recommended image2
'ಪೇಮೆಂಟ್‌ ಬಂದಿಲ್ಲ, ಪುಷ್ಪ ಅರುಣ್‌ಕುಮಾರ್‌ಗೆ ಹೇಳಿ ಪ್ಲೇಸ್':‌ ಕೊತ್ತಲವಾಡಿ ಸಿನಿಮಾ ನಟ ಮಹೇಶ್‌ ಗುರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved