MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಅಂಗನವಾಡಿ ಶಾಲೆ ಬಳಿ ಆಲದ ಮರ ಕುಸಿತ: ಗರ್ಭಿಣಿ ಸಾವು, 4 ಮಕ್ಕಳಿಗೆ ಗಾಯ

ಅಂಗನವಾಡಿ ಶಾಲೆ ಬಳಿ ಆಲದ ಮರ ಕುಸಿತ: ಗರ್ಭಿಣಿ ಸಾವು, 4 ಮಕ್ಕಳಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಆಲದ ಮರ ಕುಸಿದು ಐದು ತಿಂಗಳ ಗರ್ಭಿಣಿ ಮಹಿಳೆ ಸಾವಿಗೀಡಾಗಿದ್ದು, ಐದು ಮಕ್ಕಳು ಗಾಯಗೊಂಡಿದ್ದಾರೆ. ಡೊಮಗೇರಿ-ಕಿರವತ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ಹೆಸ್ಕಾಂ ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸಿದರು.

2 Min read
Sathish Kumar KH
Published : Sep 08 2025, 08:07 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಡೊಮಗೇರಿ-ಕಿರವತ್ತಿಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಂಗನವಾಡಿಯಿಂದ ಮನೆಗೆ ಮರಳುತ್ತಿದ್ದಾಗ ಏಕಾಏಕಿ ಆಲದ ಮರ ಕುಸಿದು ಬಿದ್ದ ಪರಿಣಾಮ 5 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 5 ಮಕ್ಕಳು ಸೇರಿದಂತೆ ಹಲವರಿಗೆ ಗಾಯಗಳಾಗಿವೆ.

26
Image Credit : Asianet News

ದುರಂತದ ವಿವರಗಳು

ಡೊಮಗೇರಿ-ಕಿರವತ್ತಿ ಗ್ರಾಮದ '28 ವರ್ಷದ ಸಾವಿತ್ರಿ ಬಾಬು ಖರಾತ್' ಎಂಬ ಗರ್ಭಿಣಿ ಅಂಗನವಾಡಿಯಲ್ಲಿದ್ದ ಕೆಲಸವನ್ನು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಹಳೆಯ ಆಲದ ಮರವೊಂದು ಇದ್ದಕ್ಕಿದ್ದಂತೆ ಅವರ ಮೇಲೆ ದೊಪ್ಪನೆ ಕುಸಿದು ಬಿದ್ದಿದೆ.

Related Articles

Related image1
ಅನುಪಮಾ ಪರಮೇಶ್ವರನ್ ಗರ್ಭಿಣಿ ಚಿತ್ರ ಒಟಿಟಿಯಲ್ಲಿ ಭಾರೀ ಸದ್ದು, ಅಭಿಮಾನಿಗಳಲ್ಲಿ ಕುತೂಹಲ!
Related image2
7ನೇ ಕ್ಲಾಸ್ ಹುಡುಗಿಗೂ 8ನೇ ಕ್ಲಾಸ್‌ ಹುಡುಗನಿಗೂ ಲವ್, ಬಾಲಾಪರಾಧ ಮಾಡಿ ಬಾಲಕಿ ಈಗ ಗರ್ಭಿಣಿ!
36
Image Credit : Asianet News

ಮರದಡಿ ಸಿಲುಕಿದ ಸಾವಿತ್ರಿ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾವಿತ್ರಿ ಅವರ ಮೇಲೆಯೇ ಮರದ ಕೊಂಬೆಯಿಂದ ಬಿದ್ದಿದ್ದು, ಅದರಡಿ ಸಿಲುಕಿ ಅಪ್ಪಚ್ಚಿ ಆಗಿದ್ದಾರೆ. ಇನ್ನು ಅವರ ಹೊಟ್ಟೆಯಲ್ಲಿದ್ದ ಮಗುವೂ ಕೂಡ ಸ್ಥಳದಲ್ಲಿಯೇ ಅಸುನೀಗಿದೆ.

46
Image Credit : Asianet News

ಗಾಯಾಳುಗಳು ಮತ್ತು ಪರಿಹಾರ ಕಾರ್ಯಗಳು:

ಸಾವಿತ್ರಿ ಅವರೊಂದಿಗೆ ಇದ್ದ ಇನ್ನೂ 4 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರಲ್ಲಿ ಸ್ವಾತಿ ಬಾಬು ಖರಾತ್ (17), ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಮತ್ತು ಶಾಂಭವಿ ಬಾಬು ಖರಾತ್ (4) ಸೇರಿದ್ದಾರೆ. 

ಅವರನ್ನು ಕೂಡಲೇ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪ್ರಾಥಮಿಕ ಚಿಕಿತ್ಸೆಯ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

56
Image Credit : Asianet News

ಇನ್ನು ಸಾನ್ವಿ ಬಾಬು ಕೊಕರೆ (5), ವಿನಯ ಲಕ್ಕು ಕೊಕರೆ (5) ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಪಿಐ ರಮೇಶ್ ಹಾನಾಪುರ ಅವರ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

66
Image Credit : Asianet News

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಸಿದ ಮರ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಹೆಸ್ಕಾಂ ಸಿಬ್ಬಂದಿಯೂ ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಚರಣೆ ನಡೆಸಿದರು. ಈ ದುರ್ಘಟನೆ ಇಡೀ ಗ್ರಾಮದಲ್ಲಿ ದುಃಖದ ವಾತಾವರಣವನ್ನು ಸೃಷ್ಟಿಸಿದೆ. ಅಧಿಕಾರಿಗಳು ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಗರ್ಭಿಣಿ ಮಹಿಳೆ
ಉತ್ತರ ಕನ್ನಡ
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved