MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
IPL Auction Update
Karnataka Weather Update
PM Narendra Modi Birthday
Karnataka Cabinet Meeting
UPI Payment Charges
Nelamangala Metro Connectivity
Karnataka Congress District Presidents
Dharwad Tehsildar
Bengaluru PVR INOX Fined 75K
Gadag's Bhishma Lake
Koppal Ancient Inscription
Coastal Karnataka Railway Connectivity
Sakleshpur Railway Project
  • Home
  • Karnataka Districts
  • ನವೆಂಬರ್‌ ವೇಳೆಗೆ ಎತ್ತಿನಹೊಳೆ ನೀರು ತುಮಕೂರಿಗೆ ತರುತ್ತೇವೆ; ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ನವೆಂಬರ್‌ ವೇಳೆಗೆ ಎತ್ತಿನಹೊಳೆ ನೀರು ತುಮಕೂರಿಗೆ ತರುತ್ತೇವೆ; ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಗುಬ್ಬಿ ತಾಲೂಕಿನಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಪರಿಶೀಲಿಸಿದರು. ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ನೀರು ಹರಿಸುವ ಭರವಸೆ ನೀಡಿದ ಅವರು, ಅರಣ್ಯ ಇಲಾಖೆಯ ಅನುಮತಿ ಶೀಘ್ರದಲ್ಲೇ ದೊರೆಯಲಿದೆ ಎಂದು ಸ್ಪಷ್ಟಪಡಿಸಿದರು.

2 Min read
Author : Sathish Kumar KH
Published : Sep 17 2026, 05:47 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ತುಮಕೂರು (ಸೆ.17): ನವೆಂಬರ್ ಅಂತ್ಯದೊಳಗೆ ಎತ್ತಿನಹೊಳೆ ಯೋಜನೆಯ ಮೂಲಕ ತುಮಕೂರಿಗೆ ನೀರು ಹರಿಸಲಾಗುತ್ತದೆ. ಒಂದೆಡೆ ಮೇಕೆದಾಟು ಯೋಜನೆಗೆ ಪ್ರಯತ್ನ ಮುಂದುವರಿದಿದ್ದರೆ, ಮತ್ತೊಂದೆಡೆ ತುಮಕೂರಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಗುರುವಾರ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ 'ಪ್ಯಾಕೇಜ್ 11'ರ ಕಾಮಗಾರಿ ಸ್ಥಳಕ್ಕೆ ಸಚಿವ ಎನ್. ಚಲುವರಾಯಸ್ವಾಮಿ ಖುದ್ದು ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಅರಣ್ಯ ಅನುಮತಿ ಶೀಘ್ರವೇ ಲಭ್ಯ:

ಕಾಮಗಾರಿ ಸ್ಥಳದಲ್ಲಿ ಎದುರಾಗಿರುವ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸಚಿವರು ತುರ್ತು ಹೆಜ್ಜೆ ಇಟ್ಟಿದ್ದಾರೆ. ಕಂಚಿಗಾನಹಳ್ಳಿಯ ಅರಣ್ಯ ಇಲಾಖೆಗೆ ಸೇರಿದ 1.9 ಕಿ.ಮೀ ಜಾಗವನ್ನು ಪರಿಶೀಲಿಸಿದ ಅವರು, ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ 2ನೇ ಹಂತದ (ಸ್ಟೇಜ್ 2) ಅನುಮತಿಗೆ ಸಂಬಂಧಿಸಿದ ಕಡತಗಳು ಈಗಾಗಲೇ ನವದೆಹಲಿಗೆ ತಲುಪಿವೆ ಎಂದು ಸ್ಪಷ್ಟಪಡಿಸಿದರು. ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ದೆಹಲಿಗೆ ಅರ್ಜಿ ಸಲ್ಲಿಸಿದ್ದು, ಸತತ ಪ್ರಯತ್ನದ ಫಲವಾಗಿ ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ ಒಪ್ಪಿಗೆ ದೊರೆಯುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

Related Articles

Related image1
Yettinahole Water Project: 11 ವರ್ಷ ಬಳಿಕ ಎತ್ತಿನಹೊಳೆ ಯೋಜನೆಗೆ ಟ್ರಯಲ್ ರನ್! ಅಕ್ಟೋಬರ್‌ನಲ್ಲಿ ತುಮಕೂರಿಗೆ ನೀರು
Related image2
ಬರಿದಾದ ಕೆರೆಗೆ ಜೀವಕಳೆ: ಎತ್ತಿನಹೊಳೆ ವ್ಯರ್ಥ ನೀರೇ ಆಸರೆ; ದೇಣಿಗೆ ಸಂಗ್ರಹಿಸಿ ಕೆರೆ ತುಂಬಿಸಿದ ಎರಡು ಗ್ರಾಮಸ್ಥರು..!
35
Image Credit : Asianet News

ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ:

ಗುರುತ್ವಾಕರ್ಷಣಾ ಕಾಲುವೆ (ಗ್ರಾವಿಟಿ ಕೆನಾಲ್) ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಅತ್ಯುನ್ನತ ಆದ್ಯತೆ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದರು. 28 ಮೀಟರ್ ಆಳದ ಭೂಮಿಯನ್ನು ಅಗೆಯಬೇಕಿರುವ ಸ್ಥಳದಲ್ಲಿ (ಡೀಪ್ ಕಟ್) ಮಣ್ಣು ಕುಸಿಯದಂತೆ ಅತ್ಯಂತ ಎಚ್ಚರಿಕೆಯಿಂದ 'ಕಟ್ ಅಂಡ್ ಕವರ್' ತಂತ್ರಜ್ಞಾನದ ಮೂಲಕ ಗುಣಮಟ್ಟದ ಕೆಲಸ ನಡೆಯಬೇಕು ಎಂದು ನಿರ್ದೇಶಿಸಿದರು. ಎರಡು ಕಡೆ ಕಾಲುವೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಅಕ್ಟೋಬರ್ 15ರ ಒಳಗಾಗಿ ತುಮಕೂರು ಭಾಗದ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಹಾಗೂ ಶೇಕಡಾ 100ರಷ್ಟು ನೀರು ಪೂರೈಸುವುದು ನಿಶ್ಚಿತ ಎಂದು ಭರವಸೆ ನೀಡಿದರು.

45
Image Credit : Asianet News

ಯೋಜನಾ ವೆಚ್ಚ ಏರಿಕೆ & ಬಿಕ್ರೆಗುಡ್ಡೆ ಯೋಜನೆ ಲೋಕಾರ್ಪಣೆ:

ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, ಎತ್ತಿನಹೊಳೆ ಯೋಜನೆಯು ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪ್ರಾರಂಭವಾದ ಕನಸಿನ ಯೋಜನೆ ಎಂದರು. ಆರಂಭದಲ್ಲಿ 8 ಸಾವಿರ ಕೋಟಿ ರೂ.ಗಳಷ್ಟಿದ್ದ ಯೋಜನಾ ವೆಚ್ಚವು ಪ್ರಸ್ತುತ 23 ಸಾವಿರ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಆದರೂ ರೈತರ ಹಿತದೃಷ್ಟಿಯಿಂದ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಇದರ ಜೊತೆಗೆ, ಅನಿವಾರ್ಯ ಕಾರಣಗಳಿಂದ ವಿಳಂಬವಾಗಿದ್ದ 'ಬಿಕ್ಕೆಗುಡ್ಡ ಯೋಜನೆ'ಯನ್ನೂ ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

55
Image Credit : Asianet News

ರೈತರ ಹಿತರಕ್ಷಣೆ ನಮ್ಮ ಬದ್ಧತೆ:

ಹೇಮಾವತಿ ಲಿಂಕ್ ಕೆನಾಲ್ ಕೈಬಿಡುವಂತೆ ಬಂದಿರುವ ರೈತರ ಮನವಿ ಕುರಿತು ಪ್ರತಿಕ್ರಿಯಿಸಿದ ಸಚಿವರು, 'ತುಮಕೂರು ಮತ್ತು ರಾಮನಗರ ಎರಡೂ ಭಾಗದ ರೈತರು ನಮಗೆ ಸಮಾನರು. ಯಾರೊಬ್ಬರಿಗೂ ಅನ್ಯಾಯವಾಗದಂತೆ ಮುಖ್ಯಮಂತ್ರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು' ಎಂದರು. ಇದೇ ವೇಳೆ ರೈತರು ಮೈಕ್ರೋ ಫೈನಾನ್ಸ್ (ಕಿರು ಸಾಲ) ಮೊರೆ ಹೋಗಿ ಆರ್ಥಿಕವಾಗಿ ಶೋಷಣೆಗೆ ಒಳಗಾಗಬಾರದು ಎಂದು ಸಚಿವರು ಕಳಕಳಿಯ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಗುಬ್ಬಿ ಕ್ಷೇತ್ರದ ಶಾಸಕರೂ ಆದ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಪಿ. ವಾಸು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ತುಮಕೂರು
ಕರ್ನಾಟಕ ಸುದ್ದಿ
ಎನ್. ಚಲುವರಾಯಸ್ವಾಮಿ
 

Latest Videos
Recommended Stories
Recommended image1
ಹೋರಾಟಗಾರರ ತ್ಯಾಗ ಮುಂದಿನ ಪೀಳಿಗೆಗೆ ತಿಳಿಯಬೇಕು: 'ಕನ್ನಡಪ್ರಭ' ಪುರವಣಿ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ
Recommended image2
Bengaluru: GST ಕಚೇರಿಯಲ್ಲಿ ಲೋಕಾಯುಕ್ತರ ಮಹತ್ವದ ಬೇಟೆ, ಲಕ್ಷ ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸೂಪರಿಂಟೆಂಡೆಂಟ್ ಅರೆಸ್ಟ್
Recommended image3
ನೆಲಮಂಗಲದ ಮಂಡಿಗೆರೆಯಲ್ಲಿ ಕ್ರಿ.ಶ.1050ರ ಚೋಳ ಸಾಮ್ರಾಜ್ಯದ ರಾಜಾಧಿರಾಜನ ಶಾಸನ ಪತ್ತೆ!
Related Stories
Recommended image1
Yettinahole Water Project: 11 ವರ್ಷ ಬಳಿಕ ಎತ್ತಿನಹೊಳೆ ಯೋಜನೆಗೆ ಟ್ರಯಲ್ ರನ್! ಅಕ್ಟೋಬರ್‌ನಲ್ಲಿ ತುಮಕೂರಿಗೆ ನೀರು
Recommended image2
ಬರಿದಾದ ಕೆರೆಗೆ ಜೀವಕಳೆ: ಎತ್ತಿನಹೊಳೆ ವ್ಯರ್ಥ ನೀರೇ ಆಸರೆ; ದೇಣಿಗೆ ಸಂಗ್ರಹಿಸಿ ಕೆರೆ ತುಂಬಿಸಿದ ಎರಡು ಗ್ರಾಮಸ್ಥರು..!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved