MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಯೋಗೇಶ್ ಗೌಡ ಹತ್ಯೆ ಪ್ರಕರಣ: ಇನ್ಸ್‌ಪೆಕ್ಟರ್‌ ಟಿಂಗರಿಕರ್‌ರಿಂದ ನಕಲಿ ಸಾಕ್ಷಿ ಸೃಷ್ಟಿ, ಕೋರ್ಟ್‌ನಲ್ಲಿ ಸಿಬಿಐ ವಾದ

ಯೋಗೇಶ್ ಗೌಡ ಹತ್ಯೆ ಪ್ರಕರಣ: ಇನ್ಸ್‌ಪೆಕ್ಟರ್‌ ಟಿಂಗರಿಕರ್‌ರಿಂದ ನಕಲಿ ಸಾಕ್ಷಿ ಸೃಷ್ಟಿ, ಕೋರ್ಟ್‌ನಲ್ಲಿ ಸಿಬಿಐ ವಾದ

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ, ಆರಂಭಿಕ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಟಿಂಗರಿಕರ್ ನಕಲಿ ಸಾಕ್ಷಿ ಸೃಷ್ಟಿಸಿದ್ದಾರೆ ಎಂದು ಸಿಬಿಐ ಹೈಕೋರ್ಟ್‌ನಲ್ಲಿ ವಾದಿಸಿದೆ. ತಮ್ಮ 7 ವರ್ಷಗಳ ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಟಿಂಗರಿಕರ್ ಮೇಲ್ಮನವಿ ಸಲ್ಲಿಸಿದ್ದಾರೆ.

3 Min read
Author : Gowthami K
Published : May 27 2026, 02:36 PM IST
Share this Photo Gallery
  • FB
  • TW
  • Linkdin
  • Whatsapp
16
ಇನ್ಸ್‌ಪೆಕ್ಟರ್‌ ಟಿಂಗರಿಕರ್‌ರಿಂದ ನಕಲಿ ಸಾಕ್ಷಿ ಸೃಷ್ಟಿ
Image Credit : Asianet News

ಇನ್ಸ್‌ಪೆಕ್ಟರ್‌ ಟಿಂಗರಿಕರ್‌ರಿಂದ ನಕಲಿ ಸಾಕ್ಷಿ ಸೃಷ್ಟಿ

ಬೆಂಗಳೂರು: ಧಾರವಾಡದ ಬಿಜೆಪಿ‌ ಮುಖಂಡ ಯೋಗೀಶ್ ಗೌಡ ಕೊಲೆ ನಡೆದಾಗ ಆರಂಭದಲ್ಲಿ ತನಿಖೆ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನಕೇಶವ ಟಿಂಗರಿಕರ್, ನೈಜ ಆರೋಪಿಗಳನ್ನು ಪರಾರಿಯಾಗಲು ಬಿಟ್ಟು, ನಕಲಿ ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ.‌ ಕೊಲೆಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು, ಮರಣೋತ್ತರ ಪರೀಕ್ಷೆ ನಡೆಸಿದಾಗ ದೊರೆತ ರಕ್ತವನ್ನು ನಕಲಿ ಶಸ್ತ್ರಾಸ್ತ್ರಗಳಿಗೆ ಸವರುವ ಮೂಲಕ ಸ್ವತಃ ತಾವೇ ಸಾಕ್ಷಿ‌ ಸೃಷ್ಟಿಸಿದ್ದಾರೆ‌ ಎಂದು ಸಿಬಿಐ ಬಲವಾಗಿ ವಾದಿಸಿದೆ. ಸದರಿ ಪ್ರಕರಣದಲ್ಲಿ ತಮಗೆ ಏಳು ವರ್ಷ ಶಿಕ್ಷೆ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಟಿಂಗರಿಕರ್ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ. ಜತೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು‌‌‌‌ ಜಾಮೀನು ಮಂಜೂರು ಮಾಡಬೇಕು‌‌ ಎಂದು ಮಧ್ಯಂತರ‌‌ ಮನವಿ ಮಾಡಿದ್ದಾರೆ. ಈ ಪಕ್ರರಣದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ ಜಿ)‌ ಎಸ್‌.ವಿ.‌ ರಾಜು‌ ಈ ವಿಚಾರಗಳನ್ನು ಕೋರ್ಟ್‌ ಗಮನಕ್ಕೆ ತಂದರು.

Add Asianetnews Kannada as a Preferred SourcegooglePreferred
26
ಸಾಕ್ಷಿಗಳಿಗೆ ಬೆದರಿಕೆ
Image Credit : Asianet News

ಸಾಕ್ಷಿಗಳಿಗೆ ಬೆದರಿಕೆ

ಮೇಲ್ಮನವಿ ಸಂಬಂಧ ಸಿಬಿಐ ಪರ ವಾದ ಮಂಡಿಸಿದ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ ಜಿ)‌ ಎಸ್‌.ವಿ.‌ ರಾಜು‌ ಅವರು, ಯೋಗೀಶ್‌ಗೌಡ‌ಕೊಲೆ ಪ್ರಕರಣದಲ್ಲಿ ಟಿಂಗರಿಕರ್‌ ತನಿಖಾಧಿಕಾರಿಯಾಗಿದ್ದರು.‌ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದರೂ 7ರಿಂದ 14ನೇ ಆರೋಪಿಗಳನ್ನು ಮೊದಲು ಆರೋಪಿಗಳನ್ನಾಗಿಸಿಲ್ಲ. ಕಾಂಗ್ರೆಸ್‌ ಮುಖಂಡ ವಿನಯ್‌ ಕುಲಕರ್ಣಿ ಅವರ ಹೆಸರು ಹೇಳದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂದರು.

Related Articles

Related image1
ಯೋಗೇಶ್ ಗೌಡ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
Related image2
Breaking: ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೊಲೆಗಾರ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ
36
ಟಿಂಗರಿಕರ್‌ಗೆ ಗರಿಷ್ಠ 7 ವರ್ಷ ಶಿಕ್ಷೆ
Image Credit : Asianet News

ಟಿಂಗರಿಕರ್‌ಗೆ ಗರಿಷ್ಠ 7 ವರ್ಷ ಶಿಕ್ಷೆ

ಅಲ್ಲದೇ,‌ ಸಾಕ್ಷ್ಯ ನಾಶ ಅಪರಾಧಕ್ಕೆ ಐಪಿಸಿ ಸೆಕ್ಷನ್‌ 201 ಮತ್ತು 218 ಅಡಿ ಟಿಂಗರಿಕರ್‌ಗೆ ಗರಿಷ್ಠ 7 ವರ್ಷ ಶಿಕ್ಷೆ ವಿಧಿಸಲಾಗಿದೆ. ‌ಈ ಪ್ರಕರಣಕ್ಕೆ ಕಾನೂನಿನಲ್ಲಿ ಇನ್ನೂ ಹೆಚ್ಚಿನ ಪ್ರಮಾಣ ಶಿಕ್ಷೆ ವಿಧಿಸಲು ಅವಕಾಶವಿದ್ದರೆ ವಿಚಾರಣಾ ನ್ಯಾಯಾಲಯ ವಿಧಿಸುತ್ತಿತ್ತು. ಟೆಂಗರಿಕರ್‌ ಜೈಲಿನಲ್ಲಿ 70ಕ್ಕೂ ಹೆಚ್ಚು ದಿನ ಮಾತ್ರ ಕಳೆದಿದ್ದಾರೆ. ಈ ಹಂತದಲ್ಲಿ ಶಿಕ್ಷೆ ಅಮಾನತು ಮಾಡಿ ಜಾಮೀನು ಮಂಜೂರು ಮಾಡಬಾರದು. ಎರಡು ವರ್ಷದ ನಂತರ ಅರ್ಜಿ ಸಲ್ಲಿಸಲು ಆದೇಶಿಸಬೇಕು. ಮೇಲ್ನೋಟಕ್ಕೆ ಜಾಮೀನು ನೀಡುವ ಹಾಗೂ ಶಿಕ್ಷೆ ಅಮಾನತು ಮಾಡುವ ಪ್ರಕರಣ ಇದೆ ಎಂಬುದನ್ನು ಟೆಂಗರಿಕರ್‌ ನ್ಯಾಯಾಲಯಕ್ಕೆ ತೋರಿಸಬೇಕು ಎಂದು ವಾದಿಸಿದರು.

46
ಯೋಗೇಶ್ ಕೊಲೆ ಕೇಸಲ್ಲಿ ‘ಹೈ’ನಲ್ಲಿ ವಾದ
Image Credit : our own

ಯೋಗೇಶ್ ಕೊಲೆ ಕೇಸಲ್ಲಿ ‘ಹೈ’ನಲ್ಲಿ ವಾದ

ಟಿಂಗರಿಕರ್ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ, ‌ಇತರರ ಜೊತೆ ಪಿತೂರಿ ನಡೆಸಿದ ಹಾಗೂ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪ ಟೆಂಗರಿಕರ್‌ ವಿರುದ್ಧವಿದೆ. ಅದಕ್ಕೆ ಐಪಿಸಿ ಸೆಕ್ಷನ್‌ ಏಳು ವರ್ಷ ಶಿಕ್ಷೆ ವಿಧಿಸಲಾಗಿದೆ. ಇವು ಜಾಮೀನು ನೀಡಬಹುದಾದ ಪ್ರಕರಣಗಳಾಗಿವೆ. 2026ರ ಏ.15ರಿಂದ ಟಿಂಗರಿಕರ್‌ ಜೈಲಿನಲ್ಲಿರುವುದರಿಂದ ಸ್ವಯಂಚಾಲಿತವಾಗಿ ಅವರನ್ನು ಅಮಾನತಿನಲ್ಲಿ ಇಡಲಾಗಿದೆ‌ ಎಂದು ವಾದಿಸಿದರು.

ಪ್ರಕರಣದಲ್ಲಿ ಬಸವರಾಜ ಮುತ್ತಗಿ ಮತ್ತು 17ನೇ ಆರೋಪಿಯಾಗಿದ್ದ ಶಿವಾನಂದ ಬಿರಾದಾರ್‌ ಅವರು ಅಪ್ರೂವರ್‌ ಆಗಿದ್ದು, ಅವರ ಸಾಕ್ಷಿಯನ್ನು ಆಧರಿಸಿ ಟೆಂಗರಿಕರ್‌ಗೆ ಶಿಕ್ಷೆ ವಿಧಿಸಲಾಗಿದೆ.‌ ಹಾಗಾಗಿ, ಶಿಕ್ಷೆ ಅಮಾನತುಪಡಿಸಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು. ಈ ಮಧ್ಯೆ ಶಿಕ್ಷೆ ಅಮಾನತಿಗೆ ವಿರೋಧಿಸಿ ಮಧ್ಯಂತರ ಅರ್ಜಿಸಲ್ಲಿಸಿರುವ ಸಂತ್ರಸ್ತರ ಪರ ವಕೀಲರು, ತಾವು ಎಎಸ್‌ಜಿ ರಾಜು ಅವರ ವಾದವನ್ನು ಅಳವಡಿಸಿಕೊಳ್ಳುವುದಾಗಿ ತಿಳಿಸಿದರು. ವಾದ- ಪ್ರತಿವಾದ ಆಲಿಸಿದ ಪೀಠ ವಿಚಾರಣೆಯನ್ನು‌ ಶುಕ್ರವಾರಕ್ಕೆ ಮುಂದೂಡಿತು.

56
ವಿಚಾರಣೆ ಜೂ.2ಕ್ಕೆ ಮುಂದೂಡಿಕೆ
Image Credit : Asianet News

ವಿಚಾರಣೆ ಜೂ.2ಕ್ಕೆ ಮುಂದೂಡಿಕೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ  ಯೊಗೇಶ್ ಗೌಡರ್ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದು ಮಾಡುವಂತೆ ಕೋರಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಯನ್ನು ಹೈಕೋರ್ಟ್ ‌ಜೂ.2ಕ್ಕೆ ಮುಂದೂಡಿದೆ. ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ವಿನಯ್ ಹಾಗೂ ಇಂಡಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯನ್ನು ಅಮಾನತ್ತಿನಲ್ಲಿರಿಸಿ ಜಾಮೀನು ಮಂಜೂರು ಮಾಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.‌ ಮೇಲ್ಮನವಿಗಳು ನ್ಯಾ.ಸುನೀಲ್ ದತ್ ಯಾದವ್ ಮತ್ತು ನ್ಯಾ. ಎಸ್.ರಾಚಯ್ಯ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಮಧ್ಯಂತರ ಮನವಿ ಕುರಿತು ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಪೀಠವು ಜೂ.2ಕ್ಕೆ ಮುಂದೂಡಿತು.

66
ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌
Image Credit : X

ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌

ಇದಕ್ಕೂ‌‌ ಮುನ್ನ ವಿಚಾರಣೆ ವೇಳೆ ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ, ಶಿಕ್ಷೆಯಾಗಿರುವುದರಿಂದ ‌ಕುಲಕರ್ಣಿ‌ ಅವರ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸದ್ಯ ಖಾಲಿಯಿರುವ ಅವರ ಸ್ಥಾನಕ್ಕೆ ಮಧ್ಯಂತರ ಚುನಾವಣೆಯನ್ನು ಚುನಾವಣಾ ಆಯೋಗ ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಗಾಗಿ, ಚುನಾವಣೆ ಘೋಷಣೆ ಮಾಡುವುದನ್ನು ತಡೆಯೊಡ್ಡಬೇಕು. ‌ನಮ್ಮ‌ ಮೇಲ್ಮನವಿಗೆ ಸಿಬಿಐ ಇನ್ನೂ ಆಕ್ಷೇಪಣೆ ಸಲ್ಲಿಸಿಲ್ಲ‌ ಎಂದು ವಿವರಿಸಿದರು.

ವಿನಯ್ ಕುಲಕರ್ಣಿ ಪರ ಮತ್ತೊಬ್ಬ ಹಿರಿಯ ವಕೀಲ ಸಿ.ವಿ.‌ನಾಗೇಶ್‌, ಆಕ್ಷೇಪಣೆ ಸಲ್ಲಿಸದಿದ್ದರೆ ವಿಚಾರಣೆ ಮುಂದುವರಿಸಲಾಗುವುದು ಎಂಬುದಾಗಿ ನ್ಯಾಯಾಲಯ ಆದೇಶಿಸಬೇಕು ಎಂದು ಕೋರಿದರು.

ಸಿಬಿಐ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್ ಅವರು, ಆಕ್ಷೇಪಣೆಯನ್ನು ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಅದಕ್ಕೆ ಸಿ.ವಿ.ನಾಗೇಶ್‌, ಶಿಕ್ಷೆ ಅಮಾನತಿಗೆ ಮನವಿ ಮಾಡಲಾಗಿದೆ. ಸಿಬಿಐ ಆಕ್ಷೇಪಣೆ ಸಲ್ಲಿಸದಿದ್ದರೂ ನ್ಯಾಯಾಲಯ ವಿಚಾರಣೆ ಮುಂದುವರಿಸಬಹುದು‌ ಎಂದರು.

ಆಗ ಪ್ರತಿಕ್ರಿಯಿಸಿದ ಪೀಠ, ವಿನಯ್‌ ಕುಲಕರ್ಣಿ ಮತ್ತು ಚಂದ್ರಶೇಖರ್‌ ಇಂಡಿ ಅವರ ಶಿಕ್ಷೆ ಅಮಾನತು ಕೋರಿರುವ ಮನವಿಗಳನ್ನು ರಜಾಕಾಲ ಮುಗಿದ ಬಳಿಕ ವಿಚಾರಣೆ ನಡೆಸಬಹುದು. ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗುವುದು, ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಜೂ.2ಕ್ಕೆ ಮುಂದೂಡಿತು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಯೋಗೇಶ್ ಗೌಡ
ಕೊಲೆ
ಕರ್ನಾಟಕ ಸುದ್ದಿ
ವಿನಯ್ ಕುಲಕರ್ಣಿ
ಕೇಂದ್ರೀಯ ತನಿಖಾ ದಳ
ಧಾರವಾಡ

Latest Videos
Recommended Stories
Recommended image1
ಸಿಐಡಿ ಅರಣ್ಯ ವಿಭಾಗ ಮುಚ್ಚಲು ಪೊಲೀಸ್ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ, ಇದರ ಹಿಂದಿದೆಯೇ ಟಿಂಬರ್ ಮಾಫಿಯಾ?
Recommended image2
Karnataka Politics: 42 ಶಾಸಕರಿಗೆ ಸಂಪುಟ ದರ್ಜೆ, ಕ್ಯಾಬಿನೆಟ್ ಸ್ಥಾನ ಪ್ರಶ್ನಿಸಿದ್ದ ಅರ್ಜಿ ವಜಾ
Recommended image3
Siddaramaiah: ಸಿಎಂ ಆಗಿ ಇಂದಿನ ಕಾರ್ಯಕ್ರಮಗಳೇ ಕೊನೆ? ಸಿದ್ದರಾಮಯ್ಯ ಹೇಳಿದ ಆ ಮಾತಿನಿಂದ ಮತ್ತಷ್ಟು ಸಸ್ಪೆನ್ಸ್! (Video)
Related Stories
Recommended image1
ಯೋಗೇಶ್ ಗೌಡ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
Recommended image2
Breaking: ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೊಲೆಗಾರ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved