MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ವರ್ಷಪೂರ್ತಿ ಹಣ್ಣು ಬಿಡುವ ವಿದೇಶಿ ಮಾವು ಬೆಳೆದ ಬಿಸಿಲನಾಡು ವಿಜಯಪುರದ ಯುವ ರೈತ!

ವರ್ಷಪೂರ್ತಿ ಹಣ್ಣು ಬಿಡುವ ವಿದೇಶಿ ಮಾವು ಬೆಳೆದ ಬಿಸಿಲನಾಡು ವಿಜಯಪುರದ ಯುವ ರೈತ!

vijayapura mango farmer ವಿಜಯಪುರದ ಪದವೀಧರ ಯುವ ರೈತ ನವೀನ ಮಂಗಾನವರ, ಥೈಲ್ಯಾಂಡ್ ಮೂಲದ ಮಾವನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬೆಳೆದು ಯಶಸ್ಸು ಕಂಡಿದ್ದಾರೆ. ವರ್ಷಪೂರ್ತಿ ಇಳುವರಿ ನೀಡುವ ಈ ಮಾವಿಗೆ ನೇರ ಮಾರುಕಟ್ಟೆ ಸೃಷ್ಟಿಸಿಕೊಂಡು, ಸಚಿವರಿಂದ ಹಾಗೂ ಥಾಯ್ ರೈತರಿಂದಲೂ ಮೆಚ್ಚುಗೆ ಗಳಿಸಿದ್ದಾರೆ.

2 Min read
Author : Gowthami K
Published : Sep 23 2025, 09:14 PM IST
Share this Photo Gallery
  • FB
  • TW
  • Linkdin
  • Whatsapp
17
ಪದವೀಧರ ಯುವ ಪ್ರಗತಿಪರ ರೈತ
Image Credit : Asianet News

ಪದವೀಧರ ಯುವ ಪ್ರಗತಿಪರ ರೈತ

ವರದಿ: ಷಡಕ್ಷರಿ‌ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಸೆ.23) : ಜಿಲ್ಲೆಯ ಪದವೀಧರ ಯುವ ಪ್ರಗತಿಪರ ರೈತರೊಬ್ಬರು ಥೈಲ್ಯಾಂಡ್ ಮೂಲದ ಮಾವು ಬೆಳೆದು ಯಶಸ್ಸು ಸಾಧಿಸಿದ್ದಾರೆ. ಹಣ್ಣಿನ ಸ್ವಾದ ಸವಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಪ್ರಗತಿಪರ ಯುವರೈತ ನವೀನ್ ನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು. ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದ ಪದವೀಧರ ಯುವ ಪ್ರಗತಿಪರ ರೈತ ನವೀನ ರಾವುತಪ್ಪ ಮಂಗಾನವರ ಮಂಗಳವಾರ ತಾವು ಬೆಳೆದ ಮಾವಿನೊಂದಿಗೆ ಸಚಿವ ಶಿವಾನಂದ ಪಾಟೀಲ ಅವರ ಭೇಟಿಗೆ ಬಂದಿದ್ದರು.

27
ವಿಷಮುಕ್ತ ಥೈ ಮಾವು ಬೆಳೆ
Image Credit : Asianet News

ವಿಷಮುಕ್ತ ಥೈ ಮಾವು ಬೆಳೆ

ನವೀನ್ ಶಿವಣಗಿ ಗ್ರಾಮದ ತಮ್ಮ 8 ರಲ್ಲಿ 7 ಎಕರೆ ಪ್ರದೇಶದಲ್ಲಿ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಥೈಲ್ಯಾಂಡ್ ಮೂಲದ ಮಾವು ಬೆಳೆದಿದ್ದಾರೆ. ಈ ಮಾವಿನ ವಿಶೇಷ ಏನೆಂದರೆ ವರ್ಷಪೂರ್ತಿ ಹಣ್ಣು ಬಿಡುತ್ತದೆ ಎಂದು ಸಚಿವರಿಗೆ ವಿವರಿಸಿದರು. 2011 ಡಿಸೆಂಬರ್ ತಿಂಗಳಲ್ಲಿ ಥೈಲ್ಯಾಂಡ್ ಪ್ರವಾಸಕ್ಕೆ ಹೋಗಿದ್ದ ನವೀನ ಚಳಿಗಾಲದಲ್ಲಿ ವೈವಿಧ್ಯಮಯ ಗಾತ್ರ, ಬಣ್ಣ, ಸ್ವಾದಗಳ ಮಾವಿನ ಹಣ್ಣುಗಳನ್ನು ಕಂಡು ಅಚ್ಚರಿಗೊಂಡು, ಈ ಹಣ್ಣಿನ ಬಗ್ಗೆ ಕುತೂಹಲ ಬೆಳೆಸಿಕೊಂಡರು.

Related Articles

Related image1
ಸಿರಿಧಾನ್ಯ, ಮಾವು,ಮೀನು ಸೇರಿ ಉತ್ಪನ್ನಗಳ ರಫ್ತು, ಭಾರತ-ಯುಕೆ ಫ್ರೀ ಟ್ರೇಡ್‌ ಪ್ರಯೋಜನವೇನು?
Related image2
ಮಾವು ಬೆಳೆ ನಷ್ಟ: ಕೇಂದ್ರದ ಜತೆ ಚರ್ಚೆಗೆ ಚಲುವಗೆ ಸಿಎಂ ಸಿದ್ದರಾಮಯ್ಯ ಸೂಚನೆ
37
ಸತತ 6 ಬಾರಿ ಥೈಲ್ಯಾಂಡಗೆ ಭೇಟಿ
Image Credit : Asianet News

ಸತತ 6 ಬಾರಿ ಥೈಲ್ಯಾಂಡಗೆ ಭೇಟಿ

ಇದಕ್ಕಾಗಿ ಸತತ 6 ವರ್ಷಗಳ ಕಾಲ ಬೇರೆಬೇರೆ ಋತುಮಾನದಲ್ಲಿ ಥ್ಯೈಲೆಂಡಗೆ ಭೇಟಿ ನೀಡಿ, ವರ್ಷಪೂರ್ತಿ ಇಳುವರಿ ಕೊಡುವ ಮಾವಿನ ಅಸಲೀಯತ್ ಏನಿದೆ ಎಂಬ ಮಾಹಿತಿ ಸಂಗ್ರಹಿಸಿದರು. ಅಂತಿಮವಾಗಿ 2021 ರಲ್ಲಿ ವರ್ಷಪೂರ್ತಿ ಇಳುವರಿ ಕೊಡುವ ಥೈಲ್ಯಾಂಡ್ ಮೂಲದ ವಿವಿಧ 20 ತಳಿಯ 5500 ಮಾವಿನ ಸಸಿಗಳನ್ನು ವಿಜಯಪುರದ ಶಿವಣಗಿ ತೋಟಕ್ಕೆ ತಂದು ನಾಟಿ ಮಾಡಿದರು. ಒಂದೂ ವರೆ ವರ್ಷದಲ್ಲಿ ಇಳುವರಿ ಆರಂಭಗೊಂಡರೂ ಸಂತೃಪ್ತನಾಗದ ಪ್ರಯೋಗಶೀಲ ಯುವ ರೈತ, ಪ್ರತಿ ತಳಿಯ ಬಣ್ಣ, ಗಾತ್ರ, ಸ್ವಾದಗಳ ಅವಲೋಕನದಲ್ಲಿ ತೊಡಗಿದರು. ಇದಕ್ಕಾಗಿ 5 ವರ್ಷ ಕಾಲ ಪ್ರತಿ ಗಿಡದ ಹಣ್ಣಿನ ಸ್ವಾದ ಪರೀಕ್ಷಿಸಿದ ಸಾವಯವ ಪ್ರಗತಿಪರ ರೈತ ನವೀನ ಗರಿಷ್ಠ ಗುಣಮಟ್ಟ ಹಾಗೂ ಗ್ರಾಹಕರ ಆಕರ್ಷಣೆಯ ತಳಿಯನ್ನು ಉಳಿಸಿಕೊಂಡು ಬಂದಿದ್ದಾಗಿ ಹಾಗೂ ಸ್ವಾದ ರಹಿತ ಗಿಡಗಳನ್ನು ಕಿತ್ತು ಹಾಕಿ ಗುಣಮಟ್ಟದ ಉತ್ಕೃಷ್ಟತೆಗೆ ಆದ್ಯತೆ ನೀಡಿದ್ದಾಗಿ ವಿವರ ನೀಡಿದರು.

47
ನೇರ ಮಾರುಕಟ್ಟೆ
Image Credit : Asianet News

ನೇರ ಮಾರುಕಟ್ಟೆ

ವರ್ಷಪೂರ್ತಿ ಫಲ ನೀಡುವ ಥೈಲ್ಯಾಂಡ್ ಮಾವಿನ ಮಾರಾಟಕ್ಕೆ ಮಧ್ಯವರ್ತಿ ಬದಲಾಗಿ ತಾವೇ ನೇರ ಮಾರುಕಟ್ಟೆ ಕಂಡುಕೊಂಡಿದ್ದಾರೆ. ವರ್ಷಪೂರ್ತಿ ಫಲ ನೀಡುವ ಈ ವಿದೇಶಿ ಹಣ್ಣಿಗೆ ವರ್ಷದುದ್ದಕ್ಕೂ 1200 ರೂ. ದರ ಇರಿಸಿದ್ದಾರೆ. ವಿಜಯಪುರ ಮಾತ್ರವಲ್ಲದೆ ಬೆಂಗಳೂರು, ಹೈದರಾಬಾದ್ ನಲ್ಲೂ ವಿಶಿಷ್ಟ ಸ್ವಾದದ ಮಾವಿನ ಹಣ್ಣಿಗೆ ಗ್ರಾಹಕರನ್ನು ಸೃಷ್ಟಿಸಿಕೊಂಡಿದ್ದಾಗಿ ಸಚಿವರಿಗೆ ಮಾಹಿತಿ ನೀಡಿದರು.

57
ಶಿವಣಗಿ ಬರ್ತಾರಂತೆ ಥೈ ರೈತರು!
Image Credit : Asianet News

ಶಿವಣಗಿ ಬರ್ತಾರಂತೆ ಥೈ ರೈತರು!

ಭಾರತದ ವಿಜಯಪುರ ಜಿಲ್ಲೆಯ ಗರಿಷ್ಠ ಉಷ್ಣ ಪ್ರದೇಶದ ಶಿವಣಗಿ ಗ್ರಾಮದಲ್ಲಿ ಬೆಳೆದ ತಮ್ಮ ದೇಶದ ಮಾವಿನ ಹಣ್ಣಿನ ರುಚಿ ಆಸ್ವಾದಿಸಿರುವ ಥೈಲ್ಯಾಂಡ್ ರೈತರಿಗೂ ಮುಟ್ಟಿಸಿದ್ದಾರೆ. ಬಸವನಾಡಿನ ಮಣ್ಣು, ನೀರು, ಹವಾಗುಣದಲ್ಲಿ ಬೆಳೆದಿರುವ ಥೈಲ್ಯಾಂಡ್ ಮಾವು ಮೂಲ ನೆಲದಲ್ಲಿಗಿಂತ ಇಲ್ಲಿ ಅತಿ ಉತ್ಕೃಷ್ಟ ರುಚಿ-ಸ್ವಾದ ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶೀಘ್ರವೇ ಶಿವಣಗಿ ಗ್ರಾಮದ ತಮ್ಮ ಮಾವಿನ ತೋಟಕ್ಕೆ ಥೈಲ್ಯಾಂಡ್ ರೈತರು ಭೇಟಿ ನೀಡಲು ಯೋಜಿಸಿದ್ದಾಗಿ ನವೀನ್ ಮಂಗಾನವರ ಅವರು ಸಚಿವ ಶಿವಾನಂದ ಪಾಟೀಲ ಅವರಿಗೆ ವಿವರಿಸಿದರು.

67
ನೋ ಕೆಮಿಕಲ್, ನೈಸರ್ಗಿಕ ಗೊಬ್ಬರ ಬಳಕೆ!
Image Credit : Asianet News

ನೋ ಕೆಮಿಕಲ್, ನೈಸರ್ಗಿಕ ಗೊಬ್ಬರ ಬಳಕೆ!

ಮೇಲು ಗೊಬ್ಬರವಾಗಿ ಎರೆಹುಳು ಗೊಬ್ಬರ, ತಾಪಮಾನ ತಡೆಯಲು ಪಾಚಿ ಮುಚ್ಚಿಗೆ, ಚಳಿ ತಡೆಯಲು ಪಾರಿವಾಳದ ಹಿಕ್ಕೆ, ಸಾವಯವ ಬೆಲ್ಲ, ಕಡಲೆ ಹಿಟ್ಟನ್ನು ಗೋಮೂತ್ರದಲ್ಲಿ ಬೆರೆಸಿ ನೀಡುತ್ತಿರುವ ಸಹೋದರ ನವೀನನ ಪ್ರಯೋಗಶೀಲತೆ, ವಿಶಿಷ್ಟ ಸಾವಯವ ಕೃಷಿ ವಿಧಾನದ ಕುರಿತು ಶಿಕ್ಷಕರಾಗಿರುವ ಪ್ರಗತಿಪರ ರೈತ ಶಿವಾನಂದ ಮಂಗಾನವರ ಸಚಿವ ಶಿವಾನಂದ ಪಾಟೀಲ ಅವರ ಎದುರು ಬಿಚ್ಚಿಟ್ಟರು.

77
ಯುವ ರೈತ ವಿನಯ ಕಾರ್ಯಕ್ಕೆ ಸಚಿವರಿಂದ ಶ್ಲಾಘನೆ..!
Image Credit : Asianet News

ಯುವ ರೈತ ವಿನಯ ಕಾರ್ಯಕ್ಕೆ ಸಚಿವರಿಂದ ಶ್ಲಾಘನೆ..!

ಹತ್ತಾರು ಎಕರೆ ಜಮೀನು, ನೀರು ಇದ್ದರೂ ಯುವ ರೈತರು ಹಲವು ಕಾರಣಗಳಿಂದ ಸೋಲು ಎದುರಿಸಲಾಗದೇ ನಗರೀಕರಣದತ್ತ ವಲಸೆ ಹೊರಟಿದ್ದಾರೆ. ಆದರೆ ಬಿ.ಎ. ಪದವಿ ಪಡೆದಿರುವ ಯುವ ರೈತ ನವೀನ ವಿಷಮುಕ್ತ ತೋಟಗಾರಿಕೆಯಲ್ಲಿ ತೊಡಗಿದ್ದಾರೆ. ಕೃಷಿಯಿಂದ ವಿಮುಖರಾಗಿರುವ ರೈತರ ಮಧ್ಯೆ ಸಾಹಸಿ ಯುವಕೃಷಿಕ ನವೀನ ವಿಭಿನ್ನವಾಗಿ ಸಾಧನೆ ಮಾಡಿದ್ದಾರೆ. ಸಾವಯವ ಕೃಷಿಕ ಪ್ರಗತಿಪರ ಯುವ ರೈತ ನವೀನ ಮಾದರಿ ಹಾಗೂ ಅನುಕರಣೀಯ ಎನಿಸಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ಶ್ಲಾಘಿಸಿದರು. ಸ್ವಯಂ ದ್ರಾಕ್ಷಿ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಾರರಾದ ಸಚಿವ ಶಿವಾನಂದ ಪಾಟೀಲ ಅವರನ್ನು ತಮ್ಮ ತೋಟಕ್ಕೆ ಭೇಟಿ ನೀಡುವಂತೆ ನವೀನ್ ಆಹ್ವಾನಿಸಿದಾಗ ಸಚಿವರು ಸಮ್ಮತಿಸಿದರು

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಮಾವು
ರೈತರು
ವಿಜಯಪುರ

Latest Videos
Recommended Stories
Recommended image1
ಒಣಬೇಸಾಯ ಜಾಗದಲ್ಲಿ ಡ್ರ್ಯಾಗನ್ ಫ್ರುಟ್ ಬೆಳೆದು ಯಶಸ್ವಿಯಾದ ಪದವೀಧರೆ; 10 ಟನ್‌ಗೂ ಅಧಿಕ ಇಳುವರಿ
Recommended image2
ಇಡೀ ಊರಿಗೆ ಊಟ ಹಾಕಿಸಿ ಎತ್ತಿನ ಹುಟ್ಟುಹಬ್ಬ ಆಚರಿಸಿದ ರೈತ; ಗ್ರಾಮದಲ್ಲಿ ಹಬ್ಬದ ವಾತಾವರಣ
Recommended image3
Rain: ಚರಂಡಿಯಲ್ಲಿ ಕೊಚ್ಚಿ ಹೋಗ್ತಿದ್ದ ಐದು ಪುಟ್ಟ ನಾಯಿ ಮರಿಗಳನ್ನು ರಕ್ಷಿಸಿದ ಮಕ್ಕಳು
Related Stories
Recommended image1
ಸಿರಿಧಾನ್ಯ, ಮಾವು,ಮೀನು ಸೇರಿ ಉತ್ಪನ್ನಗಳ ರಫ್ತು, ಭಾರತ-ಯುಕೆ ಫ್ರೀ ಟ್ರೇಡ್‌ ಪ್ರಯೋಜನವೇನು?
Recommended image2
ಮಾವು ಬೆಳೆ ನಷ್ಟ: ಕೇಂದ್ರದ ಜತೆ ಚರ್ಚೆಗೆ ಚಲುವಗೆ ಸಿಎಂ ಸಿದ್ದರಾಮಯ್ಯ ಸೂಚನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved