ಜಮೀರ್ ಅಹ್ಮದ್ ಖಾನ್ ಜನ್ಮದಿನ ಸಂಭ್ರಮ: ನಾಯಕರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ
Zameer Ahmed Khan Birthday: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಭಿಮಾನಿಗಳು, ಪಕ್ಷದ ಮುಖಂಡರು ಹಾಗೂ ಗಣ್ಯರ ಸಮ್ಮುಖದಲ್ಲಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡರು.

ಹುಟ್ಟುಹಬ್ಬ ಸಂಭ್ರಮ
ಬೆಂಗಳೂರು (ಆ.01): ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಭಿಮಾನಿಗಳು ಹಾಗೂ ಮುಖಂಡರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು.
ಶುಭಾಶಯಗಳ ಸುರಿಮಳೆ
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಕೆ. ಎಚ್. ಮುನಿಯಪ್ಪ, ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಹೌಸಿಂಗ್ ಬೋರ್ಡ್ ಅಧ್ಯಕ್ಷ ಶಿವಲಿಂಗೇ ಗೌಡ, ಶಾಸಕ ರಾದ ಅಸೀಫ್ ಸೇಠ್, ಶಿವಣ್ಣ, ಪರಿಷತ್ ಸದಸ್ಯ ರವಿ, ಮಾಜಿ ಸದಸ್ಯ ಎಂ. ಸಿ. ವೇಣುಗೋಪಾಲ್, ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಕೆ ಎಂ ಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ತಿಗಳರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಲ್. ಎ. ಮಂಜುನಾಥ್, ಸೇರಿದಂತೆ ರಾಜ್ಯದ ಎಲ್ಲೆಡೆಯಿಂದ ಆಗಮಿಸಿದ್ದ ಮುಖಂಡರು ಜಮೀರ್ ಅಹ್ಮದ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.
ರಾಜ್ಯಾದ್ಯಂತ ಅನ್ನದಾನ, ರಕ್ತದಾನ, ಆರೋಗ್ಯ ಶಿಬಿರ
ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಚಾಮರಾಜಪೇಟೆ, ಚಿತ್ರದುರ್ಗ, ದಾವಣಗೆರೆ, ಹೊಸಪೇಟೆ, ಬಳ್ಳಾರಿ, ಹುಬ್ಬಳ್ಳಿ -ಧಾರವಾಡ, ಬೀದರ್, ಕಲಬುರಗಿ, ಹಾವೇರಿ ಸೇರಿದಂತೆ ರಾಜ್ಯದ ವಿವಿಡೆದೆ ಅರೋಗ್ಯ ಶಿಬಿರ, ರಕ್ತದಾನ, ಅನ್ನದಾನ, ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

