MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Mysuru
  • ಪತ್ನಿ, ಮಕ್ಕಳ ಬಾಯಿಗೆ ಪ್ಲಾಸ್ಟರ್‌ ಹಚ್ಚಿ ಕೊಂದ ಪತಿ.. ಮೈಸೂರಲ್ಲಿ ಪಾಪದ ಕೃತ್ಯ

ಪತ್ನಿ, ಮಕ್ಕಳ ಬಾಯಿಗೆ ಪ್ಲಾಸ್ಟರ್‌ ಹಚ್ಚಿ ಕೊಂದ ಪತಿ.. ಮೈಸೂರಲ್ಲಿ ಪಾಪದ ಕೃತ್ಯ

ಮೈಸೂರು ಜಿಲ್ಲೆಯ ಹುಣಸೂರಿನ ನ್ಯೂ ಮಾರುತಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ, ತಾನೂ ಆತ್ಮ*ತ್ಯೆ ಮಾಡಿಕೊಂಡಿದ್ದಾನೆ. ಈ ಕೃತ್ಯಕ್ಕೆ ಕೌಟುಂಬಿಕ ಕಲಹ ಅಥವಾ ಆರ್ಥಿಕ ಸಂಕಷ್ಟ ಕಾರಣವಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

2 Min read
Author : Ganesh Mabla Gowda
Published : Jul 21 2026, 02:33 PM IST
Share this Photo Gallery
  • FB
  • TW
  • Linkdin
  • Whatsapp
14
ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ
Image Credit : Asianet News

ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೌಟುಂಬಿಕ ಕಲಹವೋ ಅಥವಾ ಮತ್ಯಾವುದೋ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು, ತಾನೂ ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ.

ಘಟನೆಯ ವಿವರ

ನ್ಯೂ ಮಾರುತಿ ಬಡಾವಣೆಯ ನಿವಾಸಿ ಹರೀಶ್ (40) ಎಂಬಾತನೇ ಈ ಕೃತ್ಯ ಎಸಗಿದ ವ್ಯಕ್ತಿ. ಹರೀಶ್ ತನ್ನ ಪತ್ನಿ ನಿಶ್ಚಿತಾ (36), ಮಕ್ಕಳಾದ ನೆಕ್ಸಾ (13) ಮತ್ತು ರಕ್ಷಾ (6) ಎಂಬುವವರನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ. ರಕ್ಷಾ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಯಾರಿಗೂ ಸಂಶಯ ಬಾರದಂತೆ ಸ್ಕೆಚ್
Image Credit : Asianet News

ಯಾರಿಗೂ ಸಂಶಯ ಬಾರದಂತೆ ಸ್ಕೆಚ್

ಹರೀಶ್ ಈ ಕೃತ್ಯ ಎಸಗುವ ಮುನ್ನ ವ್ಯವಸ್ಥಿತವಾಗಿ ಸ್ಕೆಚ್ ಹಾಕಿದ್ದ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮನೆಯಲ್ಲಿ ಹರೀಶ್ ತಾಯಿ ಕೂಡ ವಾಸವಾಗಿದ್ದರು. ಮೂರು ದಿನಗಳ ಹಿಂದೆಯೇ ಹರೀಶ್ ತನ್ನ ತಾಯಿಯನ್ನು ಅಜ್ಜಿ ಮನೆಗೆ ಕಳುಹಿಸಿಕೊಟ್ಟಿದ್ದ. ಮನೆಯಲ್ಲಿ ತಾಯಿ ಇಲ್ಲದ ಸಮಯ ನೋಡಿಕೊಂಡು ಈ ಘೋರ ಕೃತ್ಯ ಎಸಗಿದ್ದಾನೆ.

Related Articles

Related image1
ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್ ಶಾಕ್ - ಕೋರ್ಟ್‌ನಿಂದ ಸಮನ್ಸ್..!
Related image2
ಚೂಡಿದಾರ್ ಒಳಗಿತ್ತು 26 ಕೋಟಿ ರೂ. ಮೌಲ್ಯದ ಸಾವಿನ ಪುಡಿ! ಬೆಚ್ಚಿಬಿದ್ದ ಬೆಂಗಳೂರು
34
ಬಾಯಿ-ಮೂಗಿಗೆ ಪ್ಲಾಸ್ಟರ್ ಹಚ್ಚಿ ಕ್ರೌರ್ಯ
Image Credit : Asianet News

ಬಾಯಿ-ಮೂಗಿಗೆ ಪ್ಲಾಸ್ಟರ್ ಹಚ್ಚಿ ಕ್ರೌರ್ಯ

ಹರೀಶ್ ತನ್ನ ಪತ್ನಿ ಮತ್ತು ಮಕ್ಕಳನ್ನು ಕೊಲೆ ಮಾಡಲು ಆರಿಸಿಕೊಂಡ ಹಾದಿ ಅತ್ಯಂತ ಕ್ರೂರವಾಗಿದೆ. ಪತ್ನಿ ಮತ್ತು ಮಕ್ಕಳ ಬಾಯಿ ಹಾಗೂ ಮೂಗಿಗೆ ಪ್ಲಾಸ್ಟರ್ ಅಂಟಿಸಿ, ಅವರು ಕಿರುಚದಂತೆ ಮತ್ತು ಉಸಿರಾಡಲು ಸಾಧ್ಯವಾಗದಂತೆ ಮಾಡಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಮನೆಯ ಮೊದಲ ಮಹಡಿಯ ಕೊಠಡಿಯಲ್ಲಿ ಈ ಮೂವರ ಮೃತದೇಹಗಳು ಪತ್ತೆಯಾಗಿವೆ. ಕುಟುಂಬಸ್ಥರನ್ನು ಕೊಂದ ಬಳಿಕ ಹರೀಶ್ ಕೂಡ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

44
ಪೊಲೀಸರಿಂದ ತನಿಖೆ
Image Credit : Asianet News

ಪೊಲೀಸರಿಂದ ತನಿಖೆ

ಸ್ಥಳಕ್ಕೆ ಹುಣಸೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಒಂದು ನೋಟ್ ಪತ್ತೆಯಾಗಿದ್ದು, ಅದರಲ್ಲಿ ಏನಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಹರೀಶ್ ಈ ನಿರ್ಧಾರ ತೆಗೆದುಕೊಳ್ಳಲು ಆರ್ಥಿಕ ಸಂಕಷ್ಟ ಕಾರಣವೇ ಅಥವಾ ಕೌಟುಂಬಿಕ ಕಲಹವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರೀಶ್ ಅವರ ತಂದೆ ಕೋಡಿ ಸತ್ಯನಾರಾಯಣ್ ಅವರು ಸ್ಥಳಕ್ಕೆ ಆಗಮಿಸಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಇಡೀ ಬಡಾವಣೆಯಲ್ಲಿ ಶೋಕದ ಛಾಯೆ ಆವರಿಸಿದೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

About the Author

GM
Ganesh Mabla Gowda
ಮೈಸೂರು
ಕ್ರೈಮ್ ನ್ಯೂಸ್
ಸುದ್ದಿ
ನ್ಯೂಸ್‌ ರೌಂಡ್‌ಅಪ್
ಗಂಡ
ಪತ್ನಿ

Latest Videos
Recommended Stories
Recommended image1
ಉತ್ಖನನ ವೇಳೆ 30ಕ್ಕೂ ಅಧಿಕ ರಾವಣನ ವಿಗ್ರಹಗಳು ಪತ್ತೆ! ಇತಿಹಾಸ ತಜ್ಞರಲ್ಲಿ ಆಶ್ಚರ್ಯ
Recommended image2
ಮೈಸೂರು: ಗಿರ್ ಹಸುವೊಂದು ಎರಡು ತಲೆ, ಎರಡು ಬಾಲದ ಹೆಣ್ಣು ಕರುವಿಗೆ ಜನ್ಮ ನೀಡಿ ಅಚ್ಚರಿ!
Recommended image3
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಎಂಟ್ರಿ-ಎಕ್ಸಿಟ್‌ ಪಾಯಿಂಟ್‌ ಬಂದ್: NHAI ನಿರ್ಧಾರಕ್ಕೆ ಸ್ಥಳೀಯರ ತೀವ್ರ ಆಕ್ರೋಶ!
Related Stories
Recommended image1
ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್ ಶಾಕ್ - ಕೋರ್ಟ್‌ನಿಂದ ಸಮನ್ಸ್..!
Recommended image2
ಚೂಡಿದಾರ್ ಒಳಗಿತ್ತು 26 ಕೋಟಿ ರೂ. ಮೌಲ್ಯದ ಸಾವಿನ ಪುಡಿ! ಬೆಚ್ಚಿಬಿದ್ದ ಬೆಂಗಳೂರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved