MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Mysuru
  • ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ, ಸಲೀಂ ಮೇಲೆ ಅನುಮಾನ

ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ, ಸಲೀಂ ಮೇಲೆ ಅನುಮಾನ

ಮೈಸೂರಿನಲ್ಲಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ಇದೇ ವೇಳೆ ಮೃತ ವ್ಯಾಪಾರಿ ಸಲೀಂ ಮೇಲೆ ಅನುಮಾನಗಳು ಹೆಚ್ಚುತ್ತಿದೆ. ಇದಕ್ಕೆ ಕೆಲ ಕಾರಣಗಳು ಇವೆ.

2 Min read
Chethan Kumar
Published : Dec 26 2025, 10:22 PM IST
Share this Photo Gallery
  • FB
  • TW
  • Linkdin
  • Whatsapp
15
ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
Image Credit : Asianet News

ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ನಿನ್ನೆ (ಡಿ.25) ಕ್ರಿಸ್ಮಸ್ ಹಬ್ಬದ ದಿನ ಸಂಭವಿಸಿದ ಬಲೂನ್ ವ್ಯಾಪಾರಿಯ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಸಾವಿನ ಬೆನ್ನಲ್ಲೇ ಬೆಂಗಳೂರಿನ ನಿವಾಸಿ ಲಕ್ಷ್ಮಿ ಕೂಡ ಮೃತಪಟ್ಟಿದ್ದಾರೆ. ಚಿಕಿತ್ಸೆ ಪಲಕಾರಿಯಾಗಿ ಲಕ್ಷ್ಮಿ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

25
ಮೈಸೂರು ಪ್ರವಾಸಕ್ಕೆ ಬಂದಿದ್ದ ಲಕ್ಷ್ಮಿ
Image Credit : Asianet News

ಮೈಸೂರು ಪ್ರವಾಸಕ್ಕೆ ಬಂದಿದ್ದ ಲಕ್ಷ್ಮಿ

ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ಲಕ್ಷ್ಮಿ ಕ್ರಿಸ್ಮಸ್ ಹಬ್ಬದ ಕಾರಣ ಕುಟುಂಬ ಸಮೇತ ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಬಲೂನ್‌ಗೆ ಹೀಲಿಯಂ ತುಂಬಿಸುತ್ತಿದ್ದ ವೇಳೆ ವ್ಯಾಪಾರಿ ಬಳಿ ಇದ್ದ ಸಿಲಿಂಡರ್ ಸ್ಫೋಟಗೊಂಡು ದುರ್ಘಟನ ನಡೆದಿತ್ತು. ಈ ಘಟನೆಯಲ್ಲಿ ಲಕ್ಷ್ಮಿ ತೀವ್ರವಾಗಿ ಗಾಯಗೊಂಡಿದ್ದರು.

Related Articles

Related image1
ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ, ಬಲೂನ್ ವ್ಯಾಪಾರಿ ಸಾವು, ಕೆಲ ಪ್ರವಾಸಿಗರ ಸ್ಥಿತಿ ಗಂಭೀರ
Related image2
ಮೈಸೂರು: ಬಲೂನ್ ಹೀಲಿಯಂ ಸಿಲಿಂಡರ್ ಸ್ಫೋಟ; ಮೃತ ಸಲೀಂ ವಿರುದ್ಧ ಎಫ್‌ಐಆರ್ ದಾಖಲು
35
ಮೃತ ವ್ಯಾಪಾರಿ ಸಲೀಂ ಮೇಲೆ ಅನುಮಾನ
Image Credit : our own

ಮೃತ ವ್ಯಾಪಾರಿ ಸಲೀಂ ಮೇಲೆ ಅನುಮಾನ

ಕ್ರಿಸ್​ಮಸ್ ರಜೆ ಸಂದರ್ಭದಲ್ಲಿ ನಡೆದಿರುವ ಈ ಸ್ಪೋಟ ಉದ್ದೇಶಪೂರ್ವಕ ಸ್ಫೋಟಕ್ಕೆ ಸಂಚು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಸಲೀಂ 15 ದಿನಗಳ ಹಿಂದೆ ಉತ್ತರ ಪ್ರದೇಶದಿಂದ ಮೈಸೂರಿಗೆ ಬಂದಿದ್ದ. ಆತನ ಸಹೋದದರು, ಸ್ನೇಹಿತರ ಜೊತೆಗೆ ಲಷ್ಕರ್ ಮೊಹಲ್ಲಾದ ಷರೀಫ್ ಲಾಡ್ಜ್‌ನಲ್ಲಿ ಸಲೀಂ ಉಳಿದುಕೊಂಡಿದ್ದ. ಒಂದು ವಾರದಿಂದಲೂ ಅರಮನೆ ಸುತ್ತಮುತ್ತ ಹೀಲಿಯಂ ಗ್ಯಾಸ್ ತುಂಬಿಸಿ ಬಲೂನ್ ಮಾರುತ್ತಿದ್ದ. ಆದರೆ ನಿನ್ನೆ ಜಯ ಮಾರ್ತಾಂಡ ದ್ವಾರದ ಬಳಿ‌ ಆತ ಬಂದಿದ್ದು, ಬರುತ್ತಿದ್ದಂತೆ ಸಿಲಿಂಡರ್ ಸ್ಪೋಟಗೊಂಡಿದೆ. ಮತ್ತೊಂದೆಡೆ ನಿತ್ಯ ಮೂರು ಜನ ಒಟ್ಟಿಗೆ ಬಲೂನ್ ಮಾರಾಟ ಮಾಡಲು ಬರುತ್ತಿದ್ದವರು, ಗುರುವಾರ ಮಾತ್ರ ಒಬ್ಬನೇ ಬಂದಿರೋದು ಕೂಡ ಹಲವು ಅನುಮಾನ ಹುಟ್ಟುಹಾಕಿದೆ. ಈಗಾಗಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಎನ್.ಐ.ಎ ತನಿಖೆ ನಢಸುವ ಸಾಧ್ಯತೆಗಳು ಹೆಚ್ಚಿದೆ.

45
ಮೃತ ಸಲೀಂ ವಿರುದ್ಧ ಎಫ್ಐಅರ್
Image Credit : stockPhoto

ಮೃತ ಸಲೀಂ ವಿರುದ್ಧ ಎಫ್ಐಅರ್

ಹೀಲಿಯಂ ಸಿಲಿಂರ್ ಸ್ಫೋಟ ಪ್ರಕರಣದಲ್ಲಿ ಮೃತ ವ್ಯಾಪಾರಿ ಸಲೀಂ ವಿರುದ್ದ ಎಫ್ಐಎರ್ ದಾಖಲಾಗಿದೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.ಮೃತ ವ್ಯಾಪಾರಿ ಸಲೀಂ ಅರಮನೆಯೊಳಗೆ ಹೋಗಿ ಫೋಟೊ ತೆಗೆಸಿಕೊಂಡಿದ್ದಾನೆ. ವ್ಯಾಪಾರದ ನಡುವೆ ಅರಮನೆಯೊಳಗೆ ಸಲೀಂ ಯಾವಗ ಹೋದ ಅನ್ನೋ ಕುರಿತು ತನಿಖೆ ನಡೆಯುತ್ತಿದೆ.

ಮೃತ ಸಲೀಂ ವಿರುದ್ಧ ಎಫ್ಐಅರ್

55
ಸಲೀಂ ಹಿನ್ನಲೆ ತನಿಖೆ
Image Credit : Asianet News

ಸಲೀಂ ಹಿನ್ನಲೆ ತನಿಖೆ

ಸಲೀಂ ಕೇವಲ ಬಲೂನ್ ಮಾರಾಟ ಮಾಡುತಿದ್ನ ಅಥವಾ ಬೇರೆ ಯಾವ ಕೆಲಸ ಮಾಡುತ್ತಿದ್ದ ಎಂಬ ತನಿಖೆ ನಡೆಯುತ್ತಿದೆ. ನಿನ್ನೆಯೇ ಮೊದಲ ಬಾರಿಗೆ ಅರಮನೆಯ ಬಳಿ ಬಂದು ಬಲೂನ್ ಮಾರಾಟ ಮಾಡುತ್ತಿದ್ದ . ಆದರೆ ಸ್ಪೋಟಕ್ಕೆ ಅರ್ಥ ಗಂಟೆ ಮುಂಚೆ ಅರಮನೆ ಬಳಿ ಬಂದಿದ್ದ . ಜಯಮಾರ್ತಾಂಡ ಗೇಟ್ ಬಳಿ ಬಂದ ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ.

ಸಲೀಂ ಹಿನ್ನಲೆ ತನಿಖೆ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಮೈಸೂರು

Latest Videos
Recommended Stories
Recommended image1
ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸ್ಫೋಟದ ಮೃತರ ಸಂಖ್ಯೆ 2ಕ್ಕೆ ಏರಿಕೆ; ಗಾಯಾಳು ಮಂಜುಳಾ ಕೊನೆಯುಸಿರು!
Recommended image2
ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಹೆರಿಗೆ & ಮಕ್ಕಳ ಘಟಕ ಚೆಲುವಾಂಬದಲ್ಲಿ 20 ಹಾಸಿಗೆ ಭಸ್ಮ!
Recommended image3
ಮೈಸೂರು: ಬಲೂನ್ ಹೀಲಿಯಂ ಸಿಲಿಂಡರ್ ಸ್ಫೋಟ; ಮೃತ ಸಲೀಂ ವಿರುದ್ಧ ಎಫ್‌ಐಆರ್ ದಾಖಲು
Related Stories
Recommended image1
ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ, ಬಲೂನ್ ವ್ಯಾಪಾರಿ ಸಾವು, ಕೆಲ ಪ್ರವಾಸಿಗರ ಸ್ಥಿತಿ ಗಂಭೀರ
Recommended image2
ಮೈಸೂರು: ಬಲೂನ್ ಹೀಲಿಯಂ ಸಿಲಿಂಡರ್ ಸ್ಫೋಟ; ಮೃತ ಸಲೀಂ ವಿರುದ್ಧ ಎಫ್‌ಐಆರ್ ದಾಖಲು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved