MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Mysuru
  • 2ನೇ ಪುತ್ರನಿಗೆ ಅರ್ಥಗರ್ಭಿತ ನಾಮಕರಣ ಮಾಡಿದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್

2ನೇ ಪುತ್ರನಿಗೆ ಅರ್ಥಗರ್ಭಿತ ನಾಮಕರಣ ಮಾಡಿದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು ಮಹಾರಾಜ, ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಎರಡನೇ ಮಗುವಿಗೆ ನಾಮಕರಣ ಮಾಡಿದ್ದಾರೆ. ಈ ವೇಳೆ ಅವರು ಮಗನಿಗೆ ಏನು ಹೆಸರಿಟ್ಟೆವು ಎಂದು ರಿವೀಲ್‌ ಮಾಡಿದ್ದಾರೆ. ಕಳೆದ ನವರಾತ್ರಿ ಸಮಯದಲ್ಲಿ ಮೈಸೂರು ಮಹಾರಾಜ ಹಾಗೂ ತ್ರಿಷಿಕಾ ಕುಮಾರಿ ಅವರು ಗಂಡು ಮಗುವನ್ನು ಬರಮಾಡಿಕೊಂಡಿದ್ದರು. 

1 Min read
Padmashree Bhat
Published : Feb 25 2025, 11:53 AM IST| Updated : Feb 25 2025, 12:00 PM IST
Share this Photo Gallery
  • FB
  • TW
  • Linkdin
  • Whatsapp
15

ಮೈಸೂರು ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರಿ ಅವರ ಎರಡನೇ ಮಗನ ಮುದ್ದಾದ ಫೋಟೋ ಇದು. 

25

ಮೈಸೂರಿನ ಅರಮನೆಯಲ್ಲಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರಿ ಅವರು ಎರಡನೇ ಮಗುವಿಗೆ ನಾಮಕರಣ ಮಾಡಿದ್ದಾರೆ. 

35

ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಎರಡನೇ ಮಗುವಿನ ಕಿವಿಯಲ್ಲಿ ಹೆಸರು ಹೇಳಿದ್ದಾರೆ. ಬಹಳ ಅರ್ಥಪೂರ್ಣವಾದ ಹೆಸರು ಇಟ್ಟಿದ್ದಾರೆ. “ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಅನುಗ್ರಹದಿಂದ ನಮ್ಮ ಎರಡನೇ ಮಗನಿಗೆ ಅರಮನೆಯ ಸಂಪ್ರದಾಯದಂತೆ ನಮ್ಮ ತಾಯಿಯವರಾದ ಶ್ರೀಮತಿ ಡಾ. ಪ್ರಮೋದಾ ದೇವಿ ಒಡೆಯರವರ ಆಧ್ವರ್ಯದಲ್ಲಿ ಚಿರಂಜೀವಿ ಶ್ರೀ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.ಈ ಸುಸಂದರ್ಭದಲ್ಲಿ ಪ್ರತಿಯೊಬ್ಬ ಹಿತೈಷಿಗಳಿಗೂ ನಮ್ಮ ಹೃತ್ಪೂರ್ವಕವಾದ ವಂದನೆಗಳನ್ನು ತಿಳಿಸುತ್ತೇವೆ. ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.

 

45

ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರ್‌, ಆ ಪುಟ್ಟ ಕಂದಮ್ಮನಿಗೆ ರಾಜಮಾತೆ ಆಶೀರ್ವಾದ ಮಾಡಿದ ಸುಂದರ ಕ್ಷಣ ಇದು. 

55

ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರಿ ಅವರ ಮೊದಲ ಪುತ್ರ ಆದ್ಯವೀರ್‌ ತನ್ನ ತಮ್ಮನನ್ನು ಮುದ್ದಾಡುತ್ತಿರುವ ದೃಶ್ಯ ಇದಾಗಿದೆ. 

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮೈಸೂರು
ಯದುವೀರ್ ಒಡೆಯರ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved