MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • News
  • 'ನಯನತಾರಾ ಜಾತಕದಲ್ಲೇ ಇಲ್ಲ ಮಕ್ಕಳ ಭಾಗ್ಯ, ಇನ್ನೆಲ್ಲಿ ಆಕೆ ಗರ್ಭಿಣಿ ಆಗ್ತಾಳೆ..' ಬಾಡಿಗೆ ತಾಯ್ತನದ ಕಾರಣ ಬಿಚ್ಚಿಟ್ಟ ಜ್ಯೋತಿಷಿ!

'ನಯನತಾರಾ ಜಾತಕದಲ್ಲೇ ಇಲ್ಲ ಮಕ್ಕಳ ಭಾಗ್ಯ, ಇನ್ನೆಲ್ಲಿ ಆಕೆ ಗರ್ಭಿಣಿ ಆಗ್ತಾಳೆ..' ಬಾಡಿಗೆ ತಾಯ್ತನದ ಕಾರಣ ಬಿಚ್ಚಿಟ್ಟ ಜ್ಯೋತಿಷಿ!

ತನ್ನ ಬ್ಯೂಟಿ ಹಾಳಾಗುತ್ತದೆ ಎನ್ನುವ ಕಾರಣಕ್ಕೆ ನಯನತಾರಾ ಬಾಡಿಗೆ ತಾಯ್ತನಕ್ಕೆ ಮುಂದಾಗಿದ್ದಲ್ಲ. ಆಕೆ ಬಂಜೆ, ಮಗುವಿಗೆ ಜನ್ಮ ನೀಡುವ ಭಾಗ್ಯ ಆಕೆಯ ಜಾತಕದಲ್ಲಿಲ್ಲ ಎಂದು ಆಂಧ್ರದ ಜ್ಯೋತಿಷಿ ವೇಣು ಸ್ವಾಮಿ ಹೇಳಿರುವ ಮಾತು ಸಾಕಷ್ಟು ವೈರಲ್‌ ಆಗಿದೆ.

2 Min read
Author : Santosh Naik
| Updated : Apr 09 2024, 07:07 PM IST
Share this Photo Gallery
  • FB
  • TW
  • Linkdin
  • Whatsapp
115

ನಯನತಾರಾ ಮತ್ತು ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದಿದ್ದಾರೆ ಎಂದು ತಿಳಿದಿದೆ. ಜ್ಯೋತಿಷಿ ವೇಣುಸ್ವಾಮಿ ಇತ್ತೀಚೆಗೆ ಲೇಡಿ ಸೂಪರ್‌ಸ್ಟಾರ್ ಬಗ್ಗೆ ಸಂವೇದನಾಶೀಲ ಕಾಮೆಂಟ್‌ಗಳನ್ನು ಮಾಡಿದ್ದರು.

215

ಆದರೆ, ಜ್ಯೋತಿಷಿ ವೇಣುಸ್ವಾಮಿ ಇತ್ತೀಚೆಗೆ ಲೇಡಿ ಸೂಪರ್‌ಸ್ಟಾರ್ ಬಗ್ಗೆ ಆಡಿರುವ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ನಯನತಾರಾ ಸರೋಗಸಿ ಆಯ್ಕೆ ಮಾಡಿದ್ದರ ಹಿಂದಿನ ಕಾರಣವನ್ನು ಅವರು ತಿಳಿಸಿದ್ದಾರೆ.
 

315

ತಮಿಳು ಸಿನಿಮಾ ನಿರ್ದೇಶದ ವಿಘ್ನೇಶ್‌ ಶಿವನ್‌ ಅವರನ್ನು ಪ್ರೀತಿ ಮಾಡ್ತಿದ್ದ ನಯನತಾರಾ ಬಳಿಕ ಅವರನ್ನೇ ಮದುವೆಯಾಗಿ ಸುಖವಾಗಿ ಸಂಸಾರ ಮಾಡುತ್ತಿದ್ದಾರೆ. ಎರು ವರ್ಷಗಳ ಹಿಂದೆ ಇವರ ಮದುವೆ ನಡೆದಿತ್ತು.

415

ಮದುವೆಯಾದ ಕೆಲವೇ ತಿಂಗಳಲ್ಲಿ ತಾವಿಬ್ಬರೂ ತಂದೆ-ತಾಯಿ ಆಗಿರುವುದಾಗಿ ತಿಳಿಸಿದ್ದರು. ನಯನತಾರಾ ಹಾಗೂ ವಿಘ್ನೇಶ್‌ ಶಿವನ್‌ ಸರೋಗಸಿ ಅಂದರೆ ಬಾಡಿಗೆ ತಾಯ್ತನದ ಮೂಲಕ ಪೋಷಕರಾಗಿದ್ದರು.

515

ಆದರೆ, ಇದು ವಿವಾದಕ್ಕೆ ಕಾರಣವಾಗಿತ್ತು. ಕೇಸ್‌ಗಳಾದರೂ, ಇದರ ಬಗ್ಗೆ ಎಚ್ಚರಿಕೆಯಲ್ಲಿದ್ದ ಅವರು ಎಲ್ಲವನ್ನೂ ಸುಸೂತ್ರವಾಗಿ ಬಗೆಹರಿಸಿಕೊಂಡರು.

615

ತಮ್ಮ ಸೌಂದರ್ಯ ಹಾಳಾಗುತ್ತದೆ ಹಾಗೂ ಹಿಂದಿನ ಶೇಪ್‌ಗೆ ಬರೋಕೆ ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ನಯನತಾರಾ ಸರೋಗಸಿಯನ್ನು ಆಯ್ಕೆ ಮಾಡಿಕೊಂಡಿದ್ದರು ಎಂದು ವ್ಯಾಪಕವಾಗಿ ವರದಿಯಾಗಿತ್ತು.

715

ಬಾಡಿ ಶೇಪ್‌ ಚೇಂಜ್‌ ಆದರೆ, ಸೌಂದರ್ಯ ಕೂಡ ಹಾಳಾಗುತ್ತದೆ. ಸಿನಿಮಾದಲ್ಲಿ ಅವಕಾಶ ಕೂಡ ಕಡಿಮೆ ಆಗುತ್ತದೆ ಎನ್ನುವ ಕಾರಣಕ್ಕೆ ಸರೋಗಸಿಯನ್ನು ಆಯ್ಕೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಇದನ್ನು ಮಾಡುತ್ತಾರೆ.

815

ಈಗ ವಿವಾದಾತ್ಮಕ ಜ್ಯೋತಿಷಿ ವೇಣುಸ್ವಾಮಿ ನಯನತಾರಾ ಅವರ ವೈಯಕ್ತಿಕ ವಿಚಾರದ ಬಗ್ಗೆ ಬಾಂಬ್‌ ಎಸೆದಿದ್ದಾರೆ. ನಯನತಾರಾಗೆ ಮಕ್ಕಳನ್ನು ಹೆರುವ ಭಾಗ್ಯವೇ ಇಲ್ಲ ಎಂದಿದ್ದಾರೆ.

915


ಬಾಡಿ ಶೇಪ್‌ ಹಾಳಾಗುತ್ತದೆ, ಸೌಂದರ್ಯ ಕಡಿಮೆ ಆಗುತ್ತದೆ ಅನ್ನೋದಲ್ಲೆ ಸುಳ್ಳು, ಆಕೆ ಸರೋಗಸಿ ಆಯ್ಕೆ ಮಾಡಿಕೊಂಡಿರುವ ನಿಜವಾದ ಕಾರಣ ಬೇರೆಯದೇ ಇದೆ ಎಂದು ಹೇಳಿದ್ದಾರೆ.

1015
Nayanthara

Nayanthara

ವಿಚಾರವೇನೆಂದರೆ, ನಟಿ ನಯನತಾರಾ ಬಂಜೆ. ಫರ್ಟಿಲಿಟಿ ಟ್ರೀಟ್‌ಮೆಂಟ್‌ ಮಾಡಿಸಿಕೊಂಡರೂ ಮಕ್ಕಳಾಗುವ ಭಾಗ್ಯ ಆಕೆಗೆ ಸಿಕ್ಕಿರಲಿಲ್ಲ. ಅದಕ್ಕಾಗಿಯೇ ಅವರು ಸರೋಗಸಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

1115


ಇನ್ನು ಆಕೆಯ ಜಾತಕವನ್ನು ನೋಡಿದರೆ, ಆಕೆಗೆ ಮಕ್ಕಳನ್ನು ಹೆರುವ ಭಾಗ್ಯವೇ ಇಲ್ಲ. ಹೀಗಿದ್ದಾಗ ಅವಳಿಗೆ ಮಕ್ಕಳ ಭಾಗ್ಯ ಸಿಗೋದಿಲ್ಲ. ಅದರ ನಂತರವೇ ಆಕೆ ಸರೋಗಸಿ ಡ್ರಾಮಾ ಮಾಡಿದ್ದಾರೆ ಎಂದು ವೇಣುಸ್ವಾಮಿ ಹೇಳಿದ್ದಾರೆ.

1215

ನಟಿ ಕಾಜಲ್‌ ಅಗರ್ವಾಲ್‌ ಕೂಡ ಮದುವೆಯಾಗಿದ್ದಾರೆ. ಆ ಬಳಿಕ ಗರ್ಭಿಣಿಯೂ ಆದರು. ಈಗ ಅವರು ಸಿನಿಮಾದಲ್ಲಿ ನಟಿಸುತ್ತಿಲ್ಲವೇ? ಹಾಗಿದ್ದಾಗ ನಯನತಾರಾಗೆ ಏನು ಸಮಸ್ಯೆ ಆಗಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ.

1315

ನಮ್ಮಲ್ಲಿ ಈಗಾಗಲೇ ಸಾಕಷ್ಟು ನಟಿಯರು ಮದುವೆಯಾದ ಬಳಿಕವೂ ಸಿನಿಮಾ ಮಾಡಿಲ್ಲವೇ? ನಯನಾತಾರಾ ಹೇಳಿರೋದೆಲ್ಲ ಸುಳ್ಳು. ಆಕೆಗೆ ಗರ್ಭ ಧರಿಸಿ ಮಕ್ಕಳಿಗೆ ಜನ್ಮ ನೀಡುವ ಭಾಗ್ಯವಿಲ್ಲ ಅದಕ್ಕಾಗಿ ಸರೋಗಸಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

1415

ಯುಗಾದಿ ಸಮಯದಲ್ಲಿ ಕ್ಯೂಬ್‌ ಟಿವಿಗೆ ನೀಡಿರುವ ಸಂದರ್ಶನದಲ್ಲಿ ವೇಣುಸ್ವಾಮಿ ಆಡಿರುವ ಮಾತುಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿವೆ.

1515

ತೆಲುಗು ಚಿತ್ರ ಗಾಡ್‌ಫಾದರ್‌ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಯನತಾರಾ, ಪ್ರಸ್ತುತ ತಮಿಳು ಸಿನಿಮಾ ಟೆಸ್ಟ್‌ನಲ್ಲಿ ನಟಿಸುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಮಹಿಳೆಯರು
ಜ್ಯೋತಿಷ್ಯ
ನಯನತಾರ

Latest Videos
Recommended Stories
Recommended image1
ಇನ್ನೂರು ಜನರ ಮುಂದೆ ಮೊದಲ ಕಿಸ್ ಮಾಡಿದ್ದ ರಶ್ಮಿಕಾ.. ಆ 'Kiss' ವೈರಲ್ ಆಗಿತ್ತು; ಈಗ ವಿಜಯ್ ಜೊತೆ ಮದುವೆ!
Recommended image2
ವರನಟ ಡಾ.ರಾಜ್ ಅಪಹರಣ ಪ್ರಕರಣ, ಬರೋಬ್ಬರಿ 25 ವರ್ಷಗಳ ಬಳಿಕ 9 ಆರೋಪಿಗಳನ್ನು ಆರೋಪ ಮುಕ್ತಗೊಳಿಸಿದ ಮದ್ರಾಸ್ ಹೈಕೋರ್ಟ್!
Recommended image3
ವಿಜಯ್ ದೇವರಕೊಂಡ ಅತ್ತೆ-ಮಾವ ಯಾರು? ಕೊಡಗಿನ ಬೆಡಗಿಯ ಕಂಪ್ಲೀಟ್ ಡೀಟೇಲ್ಸ್, ನೋಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved