MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • News
  • ಕಮಲ್ ಹಾಸನ್ ಕ್ಷಮೆ ಕೇಳಿದ್ದಾರಾ? ಅವರೇನು ಇತಿಹಾಸಕಾರರೇ? ನ್ಯಾಯಾಲಯ ತರಾಟೆ

ಕಮಲ್ ಹಾಸನ್ ಕ್ಷಮೆ ಕೇಳಿದ್ದಾರಾ? ಅವರೇನು ಇತಿಹಾಸಕಾರರೇ? ನ್ಯಾಯಾಲಯ ತರಾಟೆ

ಕಮಲ್ ಹಾಸನ್ ಅವರ ಹೊಸ ಸಿನಿಮಾ ಬಿಡುಗಡೆಗೆ ಭದ್ರತೆ ಕೋರಿದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸುವಂತೆ ಸೂಚಿಸಿದ್ದಾರೆ.

3 Min read
Gowthami K
Published : Jun 03 2025, 12:16 PM IST| Updated : Jun 03 2025, 12:45 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : ANI

ತಮಿಳು ನಟ ಮತ್ತು ನಿರ್ಮಾಪಕ ಕಮಲ್ ಹಾಸನ್ ಅವರು ತಮ್ಮ ಹೊಸ ಸಿನಿಮಾ ಥಗ್ ಲೈಫ್ ಸಿನೆಮಾ ಬಿಡುಗಡೆಗೆ ಭದ್ರತೆ ನೀಡುವಂತೆ ಕೋರಿ  ಡಿಜಿಐಜಿಪಿ, ಪೊಲೀಸ್ ಆಯುಕ್ತರಿಗೆ ನಿರ್ದೇಶನ  ನೀಡುವಂತೆ ಸಲ್ಲಿಸಿರುವ ಅರ್ಜಿ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆಗೆ ಒಳಪಟ್ಟಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿ ಕಮಲ್ ಹಾಸನ್‌  ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ವಿಚಾರಣೆ ನಾಳೆಗೆ ಮುಂದೂಡುವಂತೆ ಸರ್ಕಾರದ ಪರ ವಕೀಲ ಭಾನುಪ್ರಕಾಶ್ ಮನವಿ ಮಾಡಿದರು.

26
Image Credit : instagram

ಕಮಲ್ ಹಾಸನ್ ಅವರು ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗೆ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಇದೇ ಕಾರಣದಿಂದಾಗಿ ಸಿನಿಮಾಕ್ಕೆ ವಿರೋಧ ಉಂಟಾಗಿದೆ. ವಿಚಾರಣೆ ವೇಳೆ ಕಮಲ್‌ ಹಾಸನ್‌ ರನ್ನು ನ್ಯಾಯಾಧೀಶರು ತೀವ್ರ ತರಾಟೆಗೆ ತೆಗೆದುಕೊಂಡರು. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದದ್ದೆಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದಾರೆ. ಅವರು ಇತಿಹಾಸಕಾರರೇ? ಇಂತಹ ಹೇಳಿಕೆಗಳಿಂದ ಕನ್ನಡಿಗರ ಭಾವನೆಗೆ ಧಕ್ಕೆ ಉಂಟಾಗುತ್ತದೆ. ಕಮಲ್ ಹಾಸನ್ ಅವರು ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆ ಕೇಳಬೇಕು ಎಂದು ನ್ಯಾಯಾಧೀಶರು ಹೇಳಿದರು. ಕ್ಷಮೆ ಕೇಳಿದ್ರೆ ಅವರ ಮನವಿ ಪರಿಗಣಿಸಲಾಗುವುದು. ಜಲ, ನೆಲ, ಭಾಷೆ ಬಗ್ಗೆ ಭಾವನೆ ಹೊಂದಿದ್ದಾರೆ. ರಾಜ್ಯದಲ್ಲಿ ಭಾಷೆ ಪ್ರಮುಖವಾದುದು. ಯಾವುದೇ ಭಾಷೆ ಆಗಲಿ. ಒಂದು ಭಾಷೆ ಹುಟ್ಟಿದೆ ಎಂದರೆ ಹೇಗೆ?  ಕ್ಷಮೆ ಕೇಳಲಿ, ಆ ನಂತರ ಅವರ ಮನವಿ ಪರಿಗಣಿಸಲಾಗುವುದು ಎಂದರು.

36
Image Credit : Instagram

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಅನ್ನೋದಕ್ಕೆ ಅವರೇನು ಇತಿಹಾಸಕರರೇ? ಈ ಹಿಂದೆ ರಾಜಗೋಪಾಲಾಚಾರ್ಯ ಕೂಡ ಕ್ಷಮೆ ಕೇಳಿದ್ರು, ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ. ಆದರೆ ಕ್ಷಮೆ ಕೇಳದೇ ಆ್ಯಟಿಡ್ಯೂಡ್ ತೋರಿಸ್ತಾ ಇದ್ದೀರಿ. ಈ ರೀತಿಯ ಹೇಳಿಕೆ ನೀಡಬಾರದು. ನೀವೇ ಈ ಪರಿಸ್ಥಿತಿ ನಿರ್ಮಾಣ ಮಾಡಿ ಭದ್ರತೆ ಕೋರುತ್ತಿದ್ದೀರಿ. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್. ಕಮಲ್‌ಹಾಸನ್ ತಮ್ಮ ಹೇಳಿಕೆ ತಿರಸ್ಕರಿಸುತ್ತಿಲ್ಲ, ಜೊತೆಗೆ ಹೇಳಿದ್ದು ಸರಿ ಅಂತ ಹೇಳ್ತಾ ಇದ್ದೀರಿ. ಈಗ ನಿಮ್ಮ ಸಿನಿಮಾ ರನ್ ಆಗಬೇಕು ಅಂತ ಈ ರೀತಿ ಕೇಳ್ತಾ ಇದ್ದೀರಿ.ನೀವು ಹಲವು ಕೋಟಿ ಹೂಡಿಕೆ ಮಾಡಿರಬಹುದು, ಆದ್ರೆ, ಕನ್ನಡಿಗರ ಭಾವನೆಗೆ ಧಕ್ಕೆ ಆಗಿದೆ ಎಂದು ಖಾರವಾಗಿ ನ್ಯಾಯಾಧೀಶರು ಪ್ರತಿಕ್ರಿಯೆ ನೀಡಿದ್ದಾರೆ.

46
Image Credit : instagram

ಅಭಿವ್ಯಕ್ತಿ ಸ್ವಾತಂತ್ರ್ಯ ಮಹತ್ವದ್ದಾಗಿದ್ದರೂ, ಅದು ಇನ್ನೊಬ್ಬರ ಭಾವನೆಗೆ ಧಕ್ಕೆ ತರುವಂತಿರಬಾರದು. ಈ ಪರಿಸ್ಥಿತಿಗೆ ಕಾರಣನಾಗಿರುವ ನೀವು ಈಗ ಭದ್ರತೆ ಕೋರುತ್ತಿದ್ದೀರಿ.  ನೀವು ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿರಬಹುದು, ಆದರೆ ಕನ್ನಡಿಗರ ಭಾವನೆ ಅವುಗಳಿಗಿಂತ ಉನ್ನತವಾದದ್ದು, ಕಮಲ್ ಹಾಸನ್ ಅವರು ಸಾಮಾನ್ಯ ವ್ಯಕ್ತಿಯಲ್ಲ, ಅವರು ಸಾರ್ವಜನಿಕ ವ್ಯಕ್ತಿ. ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳುತ್ತಿಲ್ಲ, ಬದಲಿಗೆ ಹೇಳಿದ್ದು ಸರಿಯೆಂದು ಮತ್ತೊಮ್ಮೆ ಹೇಳುತ್ತಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಕನ್ನಡದ ಭಾವನೆಗೆ ಧಕ್ಕೆ ತರೋದನ್ನ ಒಪ್ಪುವುದಿಲ್ಲ. ಹೀಗಿದ್ದರೆ, ಕರ್ನಾಟಕ ಯಾಕೆ ನಿಮಗೆ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. 

56
Image Credit : our own

ಇಂದು ನಿರ್ಮಾಪಕರು ಕೋರ್ಟ್ ಮುಂದೆ ಇದ್ದಾರೆ ಎಂದು ಕಮಲ್ ಪರ ವಕೀಲರು ಹೇಳಿದ್ದಕ್ಕೆ, ಯಾರು ನಿರ್ಮಾಪಕರು ಕಮಲ್‌ಹಾಸನ್ ನಿರ್ಮಾಪಕರು ಎಂದ ಜಡ್ಜ್ ಕಮಲ್‌ಹಾಸನ್ ಹೇಳಿಕೆ ಆಡಿಯೋ ಕೇಳಿ ಇದು ತಪ್ಪು ಎಂದರು. ಕಮಲ್ ಹಾಸನ್ ಪರ ವಕೀಲರಾದ ಧ್ಯಾನ್ ಚಿನ್ನಪ್ಪ ಅವರು, ಸಿನಿಮಾ ನೋಡುವುದು ಪ್ರತಿ ವ್ಯಕ್ತಿಯ ಮೂಲಭೂತ ಹಕ್ಕು. ಈ ಕಾರಣಕ್ಕಾಗಿ ಚಿತ್ರಕ್ಕೆ ಭದ್ರತೆ ನೀಡಬೇಕು" ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಭದ್ರತೆ ನೀಡಬೇಕೆ ಅಥವಾ ಬೇಡವೇ ಎಂಬುದನ್ನು ಕೋರ್ಟ್ ನಿರ್ಧರಿಸುತ್ತದೆ. ಆದರೆ ಅದಕ್ಕೂ ಮೊದಲು, ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕಾಗಿದೆ. ಒಬ್ಬ ಇತಿಹಾಸಕಾರ ಪ್ರಾಮಾಣಿಕ ದಾಖಲೆಗಳೊಂದಿಗೆ ಹೇಳಿದ್ದರೆ, ಈ ವಿಷಯ ಚರ್ಚೆಗೆ ಒಳಪಟ್ಟಿರುತ್ತಿತ್ತು. ಆದರೆ ಈಗ ಕಮಲ್ ಹಾಸನ್ ಮಾತನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ. ಕ್ಷಮೆ ಕೇಳದ ಹೊರತು ಹೇಳಿಕೆ ಹಿಂಪಡೆಯಲು ಸಾಧ್ಯವಿಲ್ಲ.

66
Image Credit : our own

ಕೆಲವು ವಿಚಾರ ಔಟ್ ಆಫ್ ಸಿಲೆಬಸ್‌ ಹೋಗ್ತಾ ಇದೆ. ಇಂತಹದ್ದೇ ಅನುಭವ 'ಕಾಲ' ಸಿನಿಮಾ ಬಂದಾಗಲೂ ನಡೆದಿತ್ತು. ಆಗಲೂ ಹೈಕೋರ್ಟ್ ಭದ್ರತೆ ನೀಡುವಂತೆ ಆದೇಶಿಸಿತ್ತು ಎಂದು ವಾದಿಸಿದ ಧ್ಯಾನ್ ಚಿನ್ನಪ್ಪ ಅವರ ಮಾತಿಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಹೌದು ಇರಬಹುದು, ಕೆಲವರ ಭಾವನೆಗೆ ಧಕ್ಕೆಯಾಗಿದೆ. ನಿಮ್ಮ ಹೇಳಿಕೆಯಿಂದ ನಟ ಶಿವರಾಜ್ ಕುಮಾರ್ ಅವರಿಗೂ ಸಮಸ್ಯೆ ಉಂಟಾಗಿದೆ. ಕ್ಷಮೆ ಕೇಳುವುದರ ಬಗ್ಗೆ ಯೋಚಿಸಿ, ಮಧ್ಯಾಹ್ನ 2.30ಕ್ಕೆ ಹಾಜರಾಗಿರಿ. ನಾನು ಕೂಡ ಥಗ್ ಲೈಫ್ ಚಿತ್ರವನ್ನು ನೋಡಲು ಇಚ್ಛಿಸಿದ್ದೆ. ಆದರೆ ಈ ವಿವಾದದಿಂದ ನೋಡಲು ಸಾಧ್ಯವಿಲ್ಲ ಯಾರೊಬ್ಬರ ಭಾವನೆಯ ಮೇಲೆ ಸವಾರಿ ಮಾಡಬಾರದು ಎಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕಮಲ್ ಹಾಸನ್
ಹೈಕೋರ್ಟ್
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
ಕನ್ನಡ ಭಾಷೆ
ಕನ್ನಡ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved