MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • News
  • ‘ಕಾಂತಾರ’ ವಿವಾದಕ್ಕೆ ಬಿಗ್ ಟ್ವಿಸ್ಟ್: ನಟ ರಣವೀರ್ ಸಿಂಗ್ ಚಾವುಂಡಿ ದೈವಕ್ಕೆ ಬಂದು ಕ್ಷಮೆ ಕೇಳಲಿದ್ದಾರೆ-ಹೈಕೋರ್ಟ್

‘ಕಾಂತಾರ’ ವಿವಾದಕ್ಕೆ ಬಿಗ್ ಟ್ವಿಸ್ಟ್: ನಟ ರಣವೀರ್ ಸಿಂಗ್ ಚಾವುಂಡಿ ದೈವಕ್ಕೆ ಬಂದು ಕ್ಷಮೆ ಕೇಳಲಿದ್ದಾರೆ-ಹೈಕೋರ್ಟ್

ಕಾಂತಾರ ಚಾಪ್ಟರ್-1 ಸಿನಿಮಾ ಕುರಿತ ಹೇಳಿಕೆಯಿಂದ ಕಾನೂನು ಸಂಕಷ್ಟಕ್ಕೆ ಸಿಲುಕಿರುವ ನಟ ರಣವೀರ್ ಸಿಂಗ್, ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದೂರುದಾರರು, ರಣವೀರ್ ದೇವಸ್ಥಾನಕ್ಕೆ ಬಂದು ದೈವದ ಮುಂದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದರು. ಇದಕ್ಕೆ ನಟನ ಪರ ವಕೀಲರು ಒಪ್ಪಿಕೊಂಡಿದ್ದಾರೆ.

2 Min read
Author : Sathish Kumar KH
Published : Mar 24 2026, 05:16 PM IST
Share this Photo Gallery
  • FB
  • TW
  • Linkdin
  • Whatsapp
16
ದೇವಸ್ಥಾನಕ್ಕೆ ಬಂದು ಪಶ್ಚಾತ್ತಾಪ ಪಡಬೇಕು
Image Credit : Instagram

ದೇವಸ್ಥಾನಕ್ಕೆ ಬಂದು ಪಶ್ಚಾತ್ತಾಪ ಪಡಬೇಕು

ಬೆಂಗಳೂರು (ಮಾ.24): ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ ಚಾಪ್ಟರ್-1' ಚಿತ್ರದ ಪಾತ್ರವೊಂದಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಅವರಿಗೆ ಕಾನೂನು ಸಂಕಷ್ಟ ತಂದೊಡ್ಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್ (FIR) ರದ್ದು ಕೋರಿ ರಣವೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ. ಕೇವಲ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದರೆ ಸಾಲದು, ದೇವಸ್ಥಾನಕ್ಕೆ ಬಂದು ಪಶ್ಚಾತ್ತಾಪ ಪಡಬೇಕು ಎಂಬ ವಾದ ಹೈಕೋರ್ಟ್‌ನಲ್ಲಿ ಕೇಳಿಬಂದಿದೆ.

26
ಏನಿದು ವಿವಾದ?
Image Credit : Instagram

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಸಂದರ್ಶನವೊಂದರಲ್ಲಿ ‘ಕಾಂತಾರ ಚಾಪ್ಟರ್-1’ ಚಿತ್ರದ ಪಾತ್ರವೊಂದರ ಬಗ್ಗೆ ರಣವೀರ್ ಸಿಂಗ್ ನೀಡಿದ್ದ ಹೇಳಿಕೆ ದೈವಾರಾಧನೆ ಮತ್ತು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪ್ರಶಾಂತ್ ಮೆತಾಲ್ ಎಂಬುವವರು ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದರು. ಈ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ನಟ ಹೈಕೋರ್ಟ್ ಮೆಟ್ಟಿಲೇರಿದ್ದರು.

Related Articles

Related image1
ಕಾಂತಾರ ದೈವವನ್ನು 'ದೆವ್ವ' ಎಂದು ಅವಹೇಳನ.. ರಣವೀರ್ ಸಿಂಗ್ ವಿರುದ್ಧ ಭುಗಿಲೆದ್ದ ಆಕ್ರೋಶ!
Related image2
'ಕಾಂತಾರ' ದೈವಕ್ಕೆ ರಣವೀರ್ ಸಿಂಗ್ ಅವಮಾನ: ಕೂಡಲಸಂಗಮದಲ್ಲಿ ಸಪ್ತಮಿ ಗೌಡ ಎಂಥ ಮಾತು ಹೇಳಿದ್ರು ನೋಡಿ!
36
ಟ್ವೀಟ್ ಮೂಲಕ ಕ್ಷಮೆ ಕೇಳಿದ ರಣವೀರ್
Image Credit : Instagram

ಟ್ವೀಟ್ ಮೂಲಕ ಕ್ಷಮೆ ಕೇಳಿದ ರಣವೀರ್

ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ತಾವು ಕ್ಷಮೆ ಕೇಳುವುದಾಗಿ ರಣವೀರ್ ಸಿಂಗ್ ಈಗಾಗಲೇ ‘ಎಕ್ಸ್’ (ಟ್ವಿಟರ್) ಮೂಲಕ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ನ್ಯಾಯಾಲಯಕ್ಕೂ ಕ್ಷಮೆಯಾಚನೆಯ ಪ್ರಮಾಣಪತ್ರ ಸಲ್ಲಿಸುವುದಾಗಿ ರಣವೀರ್ ಪರ ವಕೀಲರು ತಿಳಿಸಿದ್ದಾರೆ. ಆದರೆ, ದೂರುದಾರ ಪ್ರಶಾಂತ್ ಮೆತಾಲ್ ಮಾತ್ರ ನಟನ ಕೇವಲ ಲಿಖಿತ ಕ್ಷಮೆಯಾಚನೆಗೆ ತೃಪ್ತರಾಗಿಲ್ಲ.

46
ಚಾವುಂಡಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಒತ್ತಾಯ
Image Credit : Instagram

ಚಾವುಂಡಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಒತ್ತಾಯ

ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ ದೂರುದಾರರ ಪರ ವಕೀಲರು ಕಠಿಣ ಪಟ್ಟು ಹಿಡಿದರು. 'ನಟ ರಣವೀರ್ ಸಿಂಗ್ ಕೇವಲ ನ್ಯಾಯಾಲಯಕ್ಕೆ ಪೇಪರ್‌ನಲ್ಲಿ ಕ್ಷಮೆ ಸಲ್ಲಿಸಿದರೆ ಸಾಲದು. ಅವರಲ್ಲಿ ನೈಜ ಪಶ್ಚಾತ್ತಾಪ ಇರಬೇಕು. ಹೀಗಾಗಿ ಅವರು ದಕ್ಷಿಣ ಕನ್ನಡ ಅಥವಾ ಉಡುಪಿ ಭಾಗದ ಚಾವುಂಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿ ದೈವದ ಮುಂದೆ ಕ್ಷಮೆ ಕೇಳಬೇಕು' ಎಂದು ಪ್ರಶಾಂತ್ ಮೆತಾಲ್ ಪರ ವಾದ ಮಂಡಿಸಲಾಯಿತು.

56
ವಕೀಲರ ಒಪ್ಪಿಗೆ, ಏಪ್ರಿಲ್ 10ಕ್ಕೆ ವಿಚಾರಣೆ ಮುಂದೂಡಿಕೆ
Image Credit : Instagram

ವಕೀಲರ ಒಪ್ಪಿಗೆ, ಏಪ್ರಿಲ್ 10ಕ್ಕೆ ವಿಚಾರಣೆ ಮುಂದೂಡಿಕೆ

ದೂರುದಾರರ ಈ ಬೇಡಿಕೆಗೆ ಪ್ರತಿಕ್ರಿಯಿಸಿದ ರಣವೀರ್ ಸಿಂಗ್ ಪರ ವಕೀಲರು, ನಟರು ದೇವಸ್ಥಾನಕ್ಕೆ ಭೇಟಿ ನೀಡಲು ಮತ್ತು ಅಲ್ಲಿ ಕ್ಷಮೆ ಕೇಳಲು ಸಿದ್ಧರಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ನ್ಯಾಯಾಲಯಕ್ಕೆ ಅಧಿಕೃತವಾಗಿ ಕ್ಷಮೆಯಾಚನೆಯ ಪ್ರಮಾಣಪತ್ರವನ್ನೂ ಸಲ್ಲಿಸುವುದಾಗಿ ಭರವಸೆ ನೀಡಿದರು. ಉಭಯ ಪಕ್ಷಗಳ ವಾದವನ್ನು ಆಲಿಸಿದ ಹೈಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 10ಕ್ಕೆ ಮುಂದೂಡಿದೆ.

66
ನ್ಯಾಯಾಲಯ ತೀರ್ಪಿಗೆ ಕಾತರ
Image Credit : instagram

ನ್ಯಾಯಾಲಯ ತೀರ್ಪಿಗೆ ಕಾತರ

ಒಟ್ಟಾರೆಯಾಗಿ, ಕಾಂತಾರ ಸಿನಿಮಾ ಮತ್ತು ದೈವಾರಾಧನೆಯ ವಿಷಯದಲ್ಲಿ ಕರ್ನಾಟಕದ ಜನತೆ ಎಷ್ಟು ಭಾವನಾತ್ಮಕವಾಗಿದ್ದಾರೆ ಎಂಬುದು ಈ ಪ್ರಕರಣದಿಂದ ಮತ್ತೊಮ್ಮೆ ಸಾಬೀತಾಗಿದೆ. ಬಾಲಿವುಡ್‌ನ ಖ್ಯಾತ ನಟರೊಬ್ಬರು ಈಗ ತಮ್ಮ ಹೇಳಿಕೆಗೆ ದಕ್ಷಿಣದ ದೇವಸ್ಥಾನಕ್ಕೆ ಬಂದು ಕ್ಷಮೆ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಏಪ್ರಿಲ್ 10ರಂದು ನ್ಯಾಯಾಲಯವು ಎಫ್‌ಐಆರ್ ರದ್ದುಗೊಳಿಸುತ್ತದೆಯೇ ಅಥವಾ ಹೊಸ ಷರತ್ತುಗಳನ್ನು ವಿಧಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್
ಕಾಂತಾರ ಚಲನಚಿತ್ರ
ರಣವೀರ್ ಸಿಂಗ್
ರಿಷಬ್ ಶೆಟ್ಟಿ
Latest Videos
Recommended Stories
Recommended image1
ಇಳಯರಾಜಾ ಬೇಡಿಕೊಂಡರೂ ಹಾಡಲು ಒಪ್ಪದ ಯೇಸುದಾಸ್: ಇಲ್ಲಿದೆ ಆ ಮಾಸ್ಟರ್‌ಪೀಸ್ ಹಾಡು ಹುಟ್ಟಿದ ಕಥೆ!
Recommended image2
Dhurandhar 2 ನೋಡಿ ರಜನಿಕಾಂತ್ ಫಿದಾ: ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ ಎಂದ ತಲೈವಾ
Recommended image3
ಬಟ್ಟೆ ಅಂಗಡಿ, ಸ್ಟಾರ್‌ಬಕ್ಸ್‌ನಲ್ಲಿ ಕೆಲಸ, ಲ್ಯಾಪ್‌ಟಾಪ್‌ ಬಳಸೋಕೆ ಬರಲ್ಲ: ಮುಗಿಲ್‌ಪೇಟೆ ನಟಿ ಕಯಾದು ಲೋಹರ್
Related Stories
Recommended image1
ಕಾಂತಾರ ದೈವವನ್ನು 'ದೆವ್ವ' ಎಂದು ಅವಹೇಳನ.. ರಣವೀರ್ ಸಿಂಗ್ ವಿರುದ್ಧ ಭುಗಿಲೆದ್ದ ಆಕ್ರೋಶ!
Recommended image2
'ಕಾಂತಾರ' ದೈವಕ್ಕೆ ರಣವೀರ್ ಸಿಂಗ್ ಅವಮಾನ: ಕೂಡಲಸಂಗಮದಲ್ಲಿ ಸಪ್ತಮಿ ಗೌಡ ಎಂಥ ಮಾತು ಹೇಳಿದ್ರು ನೋಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved