ಗಾಂಧಿ @150: REVA ವಿವಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಹಾಗೂ ಜಾಗೃತಿ ಅಭಿಯಾನ!
ಗಾಂಧಿ ಜಯಂತಿಯನ್ನು ದೇಶಾದ್ಯಂತ ಭಿನ್ನ, ವಿಭಿನ್ನವಾಗಿ ಆಚರಿಸಲಾಗಿದೆ. ರಾಜ್ಯದಲ್ಲೂ ಸ್ವಚ್ಛ ಭಾರತ, ಶ್ರಮದಾನ ಹೀಗೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ರಾಷ್ಟ್ರಪಿತನ ಜನ್ಮ ದಿನ ಆಚರಿಸಲಾಯ್ತು. ಇಲ್ಲಿದೆ ಒಂದು ಝಲಕ್
ಗಾಂಧಿ ಜಯಂತಿ ಪ್ರಯುಕ್ತ ರೇವಾ ವಿಶ್ವವಿದ್ಯಾಲಯದ 500ಕ್ಕೂ ಅಧಿಕ ಮಂದಿಯಿಂದ ಶ್ರಮದಾನ
ಲಾಲ್ಬಾಗ್ನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ವಿದ್ಯಾರ್ಥಿಗಳು ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸಿದರು.
ಜಾಗತಿಕ ತಪಮನದಿಂದ ಎದುರಾಗುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಕಲ್ಬುರ್ಗಿ ನಗರದಲ್ಲಿ ಶ್ರಮದಾನ ಕಾರ್ಯಕ್ರಮ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ NNC ಕೆಡೆಟ್ಗಳು
ಕಲ್ಬುರ್ಗಿಯ ಸಾರ್ವಜನಿಕ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್
ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ
ಹಾವೇರಿಯಲ್ಲಿ ಗಾಂಧಿ ಜಯಂತಿ ನಿಮಿತ್ತ ಹೊರತಂದಿರುವ ಗಾಂಧಿ ಯಾನ 150 ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಳಗಾವಿ: ಮಾರವಾಡಿ ಯುವ ಮಂಚ ವತಿಯಿಂದ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ
ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಆಂದೋಲನ
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಹತ್ಮಾ ಗಾಂಧೀಜಿ ಜನ್ಮದಿನಾಚರಣೆ ಕಾರ್ಯಕ್ರಮ
ಹುಬ್ಬಳ್ಳಿ ಕಿಮ್ಸ್ ಎದುರಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಐಎಎಸ್ ಪ್ರೊಬೆಷನರಿ ಅಧಿಕಾರಿ ಆಕೃತಿ ಬನ್ಸಾಲ್
ಹುಬ್ಬಳ್ಳಿ: ಗಾಂಧಿ ಜಯಂತಿಯ ಸಭಾ ಕಾರ್ಯಕ್ರಮ. ಸಚಿವ ಜಗದೀಶ್ ಶೆಟ್ಟರ್ ಮಾತು
ಗಾಂಧಿ ಜಯಂತಿ ಅಂಗವಾಗಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದಿಂದ ಪ್ರಜಾ ಸ್ನೇಹಿ ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರ ಕುರಿತು ಕಾರ್ಯಾಗಾರ ಹಾಗೂ ಅಭಿನಂದನಾ ಸಮಾರಂಭ.
ಕೊಪ್ಪಳದಲ್ಲಿ ಕಾಂಗ್ರೆಸ್ ಪಾದಯಾತ್ರೆ
ಧಾರವಾಡ ಜಿಲ್ಲಾ ನ್ಯಾಯಾಲಯ ಹಾಗೂ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಧೀಶರು, ಸಿಬ್ಬಂದಿ ವರ್ಗದವರು ಸ್ವಚ್ಚತಾ ಹೀ ಸೇವಾ ಆಂದೋಲನ ಹಾಗೂ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ಮಾಡಿದರು.
ಹುಬ್ಬಳ್ಳಿ ಪ್ಲಾಸ್ಟಿಕ್ ಮುಕ್ತ ಅಭಿಯಾನ. ಜಿಲ್ಲಾಧಿಕಾರಿ ದೀಪಾ ಚೋಳನ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಸೇರಿದಂತೆ ಹಲವರು ಭಾಗಿ. ಪ್ಲಾಸ್ಟಿಕ್ ಸಂಗ್ರಹಕ್ಕೆ ಚಾಲನೆ