ಸಂಸತ್ತಿನಲ್ಲಿ ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ ನಮ್ಮ ಸಂಸದರು!
17ನೇ ಲೋಕಸಭೆಯ ಮೊಟ್ಟ ಮೊದಲ ಅಧಿವೇಶನ ಆರಂಭವಾಗಿದೆ. ಈ ನಡುವೆ ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರಾದ ಸದಾನಂದ ಗೌಡ, ಸುರೇಶ್ ಅಂಗಡಿ, ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ ಸೇರಿದಂತೆ ಬಹುತೇಕ ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ ಮೊದಲಾದವರು ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ್ದಾರೆ. ಇಲ್ಲಿದೆ ನೋಡಿ ಒಂದು ಝಲಕ್
ಸಾಂಪ್ರದಾಯಿಕ ಕೊಡಗು ಶೈಲಿಯ ಉಡುಗೆಯಲ್ಲಿ ಮಿಂಚಿದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ
ರೇಶ್ಮೆ ಪಂಚೆ ಹಾಗೂ ಶಲ್ಯದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿ ಇದೇ ಮೊದಲ ಬಾರಿ ಸಂಸತ್ತಿಗೆ ಪ್ರವೇಶಿಸಿದ ತೇಜಸ್ವಿ ಸೂರ್ಯ.
ಸಂಸತ್ತಿನಲ್ಲಿ ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯೊಂದಿಗೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ
ಸಂಸತ್ತಿನೆಡೆ ಹೆಜ್ಜೆ ಹಾಕಿದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್
ಲೋಕಸಭಾ ಸ್ಪೀಕರ್ ವೀರೇಂದ್ರ ಕುಮಾರ್ರನ್ನು ಸಂಸತ್ತಿಗೆ ಸ್ವಾಗತಿಸುತ್ತಿರುವ ಧಾರವಾಡ ಕ್ಷೇತ್ರದ ಸಂಸದ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
ಸಂಸತ್ ಭವನದ ಹೊರಗೆ ಫೋಟೋಗೆ ಫೋಸ್ ನೀಡಿದ ತೇಜಸ್ವಿ ಸೂರ್ಯ.
ಸಾಂಸ್ಕೃತಿಕ ಉಡುಗೆಯಲ್ಲಿ ಗೆಳೆಯರಾದ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ.
ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಜೊತೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ