ರಾಜ್ಯದಲ್ಲಿ ನಾಮಪತ್ರ ಸಲ್ಲಿಸಿದ ಘಟಾನುಘಟಿಗಳು...
ಕರ್ನಾಟಕದಲ್ಲಿ ನಡೆಯುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾ.26 ಕಡೆಯ ದಿನವಾಗಿದ್ದು, ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸೇರಿ ಅನೇಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೋಯ್ಲಿ.
ಚಾಮರಾಜನಗರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆರ್.ಧ್ರುವನಾರಾಯಣ್.
ಚಿಕ್ಕಬಳ್ಳಾಪುರದಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿ ದ್ವಾರಕನಾಥ್.
ಚಿತ್ರದುರ್ಗ ಚಂದ್ರಪ್ಪ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ವಿಶೇಷ ಪೂಜೆ ಸಲ್ಲಿಸಿದರು.
ತುಮಕೂರಿನಲ್ಲಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲು ಹೊರಟ ದೇವೇಗೌಡರು.
ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ತುಮಕೂರಿನಲ್ಲಿ ದೇವೇಗೌಡರು ನಾಮಪತ್ರ ಸಲ್ಲಿಸಿದರು.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಮಿಥುನ್ ರೈ.
ಕೋಲಾರ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ.
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ.
ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು.
ಮಂಡ್ಯದಲ್ಲಿ ಸಿಎಂ ಪುತ್ರ ಕುಮಾರಸ್ವಾಮಿಯಿಂದ ನಾಮಪತ್ರ ಸಲ್ಲಿಕೆ.
ಉಡುಪಿ-ಚಿಕ್ಕಮಗಳೂರು ಜೆಡಿಎಸ್-ಕೈ ಅಭ್ಯರ್ಥಿಯಿಂದ ಶ್ರೀ ಕೃಷ್ಣ ದರ್ಶನ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಕೆ.
ಕೈ ಮುಖಂಡರೊಂದಿಗೆ ರಿಜ್ವಾನ್ ಅರ್ಷದ್ ಬೆ.ಸೆಂಟ್ರಲ್ಗೆ ಉಮೇದುವಾರಿಕೆ ಸಲ್ಲಿಸಿದರು.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ತುಮಕೂರಿನಿಂದ ಮುದ್ದೆ ಹನುಮೇಗೌಡ ನಾಮಪತ್ರ ಸಲ್ಲಿಸಿದರು.
ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯ್ ಶಂಕರ್ ನಾಮಪತ್ರ ಸಲ್ಲಿಸಿದರು.