ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್
ರಾಜ್ಯ ರಾಜಕೀಯದಲ್ಲಿ ಅತೃಪ್ತ ಶಾಸಕರ ಪ್ರಹಸನ ಮುಗಿದು ಮೈತ್ರಿ ಸರ್ಕಾರ ಪತನವಾಗಿ ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದೆ. ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದ್ದ ಆನಂದ್ ಸಿಂಗ್ ಇದೀಗ ರಾಜಕೀಯದಿಂದ ದೂರ ಉಳಿದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.
ಬೆಂಬಲಿಗರೊಂದಿಗೆ ತಿರುಪತಿ ತಿರುಮಲ ಬೆಟ್ಟ ಹತ್ತಿ ವೆಂಕಟೇಶ್ವರನ ದರ್ಶನ ಪಡೆದ ಆನಂದ್ ಸಿಂಗ್
ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್
ಅತೃಪ್ತ ಶಾಸಕರ ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದವರು ಆನಂದ್ ಸಿಂಗ್
ಜಿಂದಾಲ್ಗೆ ಭೂಮಿ ಮಾರಾಟ ಮಾಡುತ್ತಿರುವ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಖಂಡಿಸಿ ರಾಜೀನಾಮೆ ನೀಡಿದ್ದರು.
ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು.
ರಾಜೀನಾಮೆ ಸಮಯದಲ್ಲಿ ಆಪರೇಶನ್ ಕಮಲಕ್ಕೆ ಒಳಗಾಗಿದ್ದರು ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದನ್ನು ಆನಂದ್ ಸಿಂಗ್ ಅಲ್ಲಗಳೆದಿದ್ದಾರೆ.