MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಸಿದ್ದರಾಮಯ್ಯ ಕುರ್ಚಿ ಕಿತ್ತುಕೊಳ್ಳದಂತೆ ಗಾಳಿ ಆಂಜನೇಯಗೆ ಉರುಳು ಸೇವೆ: ಸಿಎಂ ಬದಲಾದರೆ ಅಹಿಂದ ಉಗ್ರ ಹೋರಾಟ!

ಸಿದ್ದರಾಮಯ್ಯ ಕುರ್ಚಿ ಕಿತ್ತುಕೊಳ್ಳದಂತೆ ಗಾಳಿ ಆಂಜನೇಯಗೆ ಉರುಳು ಸೇವೆ: ಸಿಎಂ ಬದಲಾದರೆ ಅಹಿಂದ ಉಗ್ರ ಹೋರಾಟ!

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ, ಅಹಿಂದ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೀದಿಗಿಳಿದಿವೆ. ಬೆಂಗಳೂರಿನಲ್ಲಿ ಉರುಳು ಸೇವೆ ನಡೆಸುವ ಮೂಲಕ, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಬೇಕು, ನಾಯಕತ್ವ ಬದಲಾದರೆ ಹೋರಾಟ ನಡೆಸುವುದಾಗಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿವೆ.

1 Min read
Sathish Kumar KH
Published : Nov 27 2025, 07:32 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಕರ್ನಾಟಕ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಗೊಂದಲಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ, ಅಹಿಂದ ಸಮುದಾಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿ ಬೀದಿಗಿಳಿದಿದೆ. ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿ, ಬೆಂಗಳೂರಿನಲ್ಲಿ ಪ್ರತಿಭಟನೆಯ ವಿಭಿನ್ನ ರೂಪವಾಗಿ ಉರುಳು ಸೇವೆ ನಡೆಸುವ ಮೂಲಕ ಅಹಿಂದ ಸಂಘಟನೆಗಳು ಹೈಕಮಾಂಡ್‌ಗೆ ಎಚ್ಚರಿಕೆ ಸಂದೇಶ ರವಾನಿಸಿವೆ.

26
Image Credit : Asianet News

ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರಗಳನ್ನು ಹಿಡಿದು, ಅಹಿಂದ ಸಂಘಟನೆಯ ಕಾರ್ಯಕರ್ತರು ದೇವಸ್ಥಾನದ ಸುತ್ತ ಉರುಳು ಸೇವೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಹೈಕಮಾಂಡ್‌ಗೆ ಆಗ್ರಹಿಸಿದರು.

Related Articles

Related image1
ನಮ್ಮಪ್ಪನೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಸೂತ್ರವೇ ಇಲ್ಲದಿರುವಾಗ ಬದಲಾವಣೆ ಚರ್ಚೆ ಅನಗತ್ಯ; ಯತೀಂದ್ರ ಸಿದ್ದರಾಮಯ್ಯ
Related image2
ಖರ್ಗೆ ಕರೆದ್ರೆ ಹೋಗ್ತೇನೆ ಹೋಗ್ತೇನೆ ಹೋಗ್ತೇನೆ : ಒತ್ತಿ ಒತ್ತಿ ಹೇಳಿದ ಸಿಎಂ ಸಿದ್ದರಾಮಯ್ಯ
36
Image Credit : Asianet News

ಈ ಸಂದರ್ಭದಲ್ಲಿ ಮಾತನಾಡಿದ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಸ್ವಾಮಿ ಅವರು, ಸಿದ್ದರಾಮಯ್ಯ ಅವರ ಆಡಳಿತವನ್ನು ಶ್ಲಾಘಿಸಿದರು. ಸಿದ್ದರಾಮಯ್ಯ ಅವರು ಈ ರಾಜ್ಯ ಕಂಡ ಅತ್ಯುತ್ತಮ ಮುಖ್ಯಮಂತ್ರಿ. ಅವರು ಜನಸಾಮಾನ್ಯರ ಪರವಾಗಿ, ಅಹಿಂದ ಸಮುದಾಯದ ಪರವಾಗಿ ಆಡಳಿತ ನಡೆಸಿದವರು ಎಂದರು.

46
Image Credit : Asianet News

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಸಿಎಂ ಪಟ್ಟವನ್ನು ಕಳ್ಳರಿಗೆ, ಕಾಕರಿಗೆ, ದರೋಡೆಕೋರರಿಗೆ ನೀಡುವುದು ಸರಿಯಲ್ಲ' ಎಂದು ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

56
Image Credit : Asianet News

ಅಧಿಕಾರ ಹಂಚಿಕೆ ಸೂತ್ರದ ಕುರಿತು ಸ್ಪಷ್ಟನೆ ನೀಡಿದ ಸ್ವಾಮಿ, ಸಿದ್ದರಾಮಯ್ಯ ಅವರು ಮಾತು ಕೊಟ್ಟಿದ್ದರೆ ಇಷ್ಟರಲ್ಲೇ ಖುದ್ದಾಗಿ ಹೇಳಿ ಕುರ್ಚಿ ಬಿಟ್ಟುಕೊಡುತ್ತಿದ್ದರು. ಅವರು ಏನು ಹೇಳುತ್ತಿಲ್ಲವೆಂದರೆ, 'ಸಿದ್ದರಾಮಯ್ಯ ಅವರು ಯಾರಿಗೂ ಮಾತು ಕೊಟ್ಟಿಲ್ಲ ಅಂತಲೇ ಅರ್ಥ' ಎಂದು ಸಮರ್ಥಿಸಿಕೊಂಡರು.

66
Image Credit : Asianet News

ಅಧಿಕಾರ ಹಂಚಿಕೆಯ ಗೊಂದಲಗಳನ್ನು ಬದಿಗಿಟ್ಟು, ರಾಜ್ಯದ ಹಿತಕ್ಕಾಗಿ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದರೆ ರಾಜ್ಯದಲ್ಲಿ ರಾಜಕೀಯ ಅಲ್ಲೋಲ ಕಲ್ಲೋಲ ಆಗೀದಂತೂ ಸತ್ಯ. ಒಂದು ವೇಳೆ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡಿದರೆ, ನಾವು ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುತ್ತೇವೆ' ಎಂದು ಅಹಿಂದ ಸಂಘಟನೆಯ ರಾಜ್ಯಾದ್ಯಾಕ್ಷ ಸ್ವಾಮಿ ಎಚ್ಚರಿಕೆ ನೀಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಸಿದ್ದರಾಮಯ್ಯ
ಕರ್ನಾಟಕ ರಾಜಕೀಯ
ಕರ್ನಾಟಕ ಸುದ್ದಿ
ಬೆಂಗಳೂರು
Latest Videos
Recommended Stories
Recommended image1
ರಾಜಕೀಯ ಬೆಳವಣಿಗೆಗೆ ಗೃಹಸಚಿವರ ಅಸಮಾಧಾನ, ಹಿರಿಯ ಸಚಿವರೊಂದಿಗೆ ದೆಹಲಿಗೆ ಹೋಗಲು ಸಲಹೆ, ಸಿಎಂ ಡಿಸಿಎಂ ಒಪ್ಪಿಗೆ!
Recommended image2
Now Playing
ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Recommended image3
'ನೀವು ಯಾಕ್ರಯ್ಯಾ ಬಡೆದುಕೊಳ್ತೀರಾ..' ಸಿಎಂ ಬದಲಾವಣೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಮಧು ಬಂಗಾರಪ್ಪ ಗರಂ
Related Stories
Recommended image1
ನಮ್ಮಪ್ಪನೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಸೂತ್ರವೇ ಇಲ್ಲದಿರುವಾಗ ಬದಲಾವಣೆ ಚರ್ಚೆ ಅನಗತ್ಯ; ಯತೀಂದ್ರ ಸಿದ್ದರಾಮಯ್ಯ
Recommended image2
ಖರ್ಗೆ ಕರೆದ್ರೆ ಹೋಗ್ತೇನೆ ಹೋಗ್ತೇನೆ ಹೋಗ್ತೇನೆ : ಒತ್ತಿ ಒತ್ತಿ ಹೇಳಿದ ಸಿಎಂ ಸಿದ್ದರಾಮಯ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved