MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಸುಳ್ಳು ಹೇಳೋದೇ ಬಿಜೆಪಿಯವ್ರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ

ಸುಳ್ಳು ಹೇಳೋದೇ ಬಿಜೆಪಿಯವ್ರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. 

2 Min read
Author : Govindaraj S
Published : Mar 14 2024, 07:43 AM IST
Share this Photo Gallery
  • FB
  • TW
  • Linkdin
  • Whatsapp
15

ಕಲಬುರಗಿ (ಮಾ.14): ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಜಿಪಂ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

25

ಬಡವರ ಬಾಳು ಬೆಳಗುವ ಪಂಚ ಗ್ಯಾರಂಟಿ ಜಾರಿಗೆ ತರುವ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಮತ್ತವರ ಸಂಪುಟದ ಸಹೋದ್ಯೋಗಿಗಳು ಉತ್ತಮ ಕೆಲಸ ಮಾಡಿದ್ದಾರೆಂದು ಶಹಬ್ಬಾಸ್‌ಗಿರಿ ನೀಡಿದರು. ನಮ್ಮ ಗ್ಯಾರಂಟಿ ನೋಡ್ಕೊಂಡು ಬಿಜೆಪಿಯವರು ಮೋದಿ ಗ್ಯಾರಂಟಿ ಅಂತ ಹೇಳ್ಕೋಂತ ಹೊಂಟಿದ್ದಾರೆಂದು ಲೇವಡಿ ಮಾಡಿದ ಖರ್ಗೆ, ಅದೇನು ಮೋದಿ ಗ್ಯಾರಂಟಿ? ಸುಳ್ಳು ಹಳೋದೇ ಅವರ ಗ್ಯಾರಂಟಿ, ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೇವೆ ಅಂತ ಹೇಳಿದವರು ಕಳೆದ 10 ವರ್ಷದಲ್ಲಿ ಮಾಡಿದ್ದೇನು? ಮೋದಿ, ಬಿಜೆಪಿ ತಮ್ಮ ಕೊಡುಗೆ ಹೇಳಿ ಮತ ಕೇಳಲಿ, ಅವರು ಬಂದಾಗ ನೀವೆಲ್ಲರು ಪ್ರಶ್ನಿಸಿರಿ ಎಂದು ಜನತೆಗೆ ಕರೆ ನೀಡಿದರು.
 

35

ರೇಲ್ವೆ ಸ್ಟೇಷನ್‌ದಾಗ ಹಸಿರು ಝಂಡಾ ಹಿಡ್ಕೊಂಡು ಓಡಾಡಿದ್ರ ಏನ್‌ ಬಂತು?: ರೇಲ್ವೆ ನಿಲ್ದಾಣದೊಳ್ಗ ಹಸಿರು ಝಂಡಾ ಹಿಡಕೊಂಡು ಓಡಾಡಿದರ ಏನ್‌ ಬಂತು? ಸಾವಿರಾರು ಕೋಟಿ ಯೋಜನೆಗಳಿಗೆ ಚಾಲನೆ ನೀಡಲು ಹೋಗಬೇಕಾದವರು ರೇಲ್ವೆ ಸ್ಟೇಷನ್‌ ಅಲಿತಿದ್ದಾರ, ಇದರಿಂದ ದೇಶದ ಪ್ರಗತಿ ಆಗ್ತದಾ? ನಮ್ದೇ ಹಳಿಗಳ ಮ್ಯಾಗ ಮೋದಿ ರೈಲ ಓಡಸ್ಲಿಕತ್ತಾನ ಎಂದರು ಖರ್ಗೆ. ಮೋದಿ ಪದೇ ಪದೇ ಕಲಬುರಗಿಗೆ ಹೊಂಟಾನ ಮಾರಾಯ, ರಾಜ್ಯಸಭೆ ವಿರೋಧ ಪಕ್ಷ ನಾಯಕರ ಕಚೇರಿಯಲ್ಲಿ ಮೊನ್ನೆ ಸಿಕ್ಕಾಗ ಕೇಳ್ದೆ, ಯಾಕ ಕಲಬುರಗಿಗೆ ಹೊಂಟೀರಿ? ಕೆಟ್ಟ ಬಿಸಿಲ, ನೀರಿಗೂ ಪರದಾಟ ಅದ ಅಲ್ಲಿ ಅಂದೆ, ನಿಮ್ಮೂರಲ್ಲಿ ದೊಡ್ಡ ಏರ್‌ಸ್ಟ್ರಿಪ್‌ ಇದೆ. 

45

ಅದಕ್ಕೆ ನಮ್ಮ ವಿಮಾನ ಅಲ್ಲಿ ಇಳಿಸಿ ಹೋಗಲು ಅನುಕೂಲ ಎಂದು ಮೋದಿ ಹೇಳಿದರು. ಬಂದು ಹೋಗ್ಲಿ, ಹಂಗೇ ಬರುವಾಗ ನಮಗ ಯೋಜನೆಗಳ ಕೊಡುಗೆ ಕೊಡಬಹುದಲ್ಲ? ಎಂದರು. ಮಾತಿನುದ್ದಕ್ಕೂ ಸಿಂಹಪಾಲು ಮೋದಿಯ ಮಾತು, ಡೈಲಾಗ್‌ ಎಲ್ಲವನ್ನು ಅಣಕಿಸುತ್ತ , ಹಲವು ಬಾರಿ ಏಕ ವಚನದಲ್ಲೇ ಪದಪ್ರಯೋಗ ಮಾಡುತ್ತ ಮಾತನಾಡಿದ ಖರ್ಗೆ, ಕಾಂಗ್ರೆಸ್‌ ದೇಶವನ್ನೇ ಹಾಳು ಮಾಡಿದೆ ಅಂತಾನ, ನೀ ಎಷ್ಟು ಬೈತಿ ಬಯ್ಯೋ ಮಾರಾಯ, ನಿನ್ನ ಬೈಗುಳ ತಿಂತೀವಿ, ನೀನರ ಕೆಲ್ಸ ಮಾಡಿ ತೋರಿಸು, ಕೆಲಸಕ್ಕಿಂತ ಪ್ರಚಾರನೇ ಹೆಚ್ಚಾಯ್ತು ಎಂದು ಕೇಂದ್ರದ ಸಾಧನೆ ಶೂನ್ಯವೆಂದು ಟೀಕಿಸಿದರು.

55

ಲೋಕಸಭೆಗೂ ಕಾಂಗ್ರೆಸ್‌ ಗ್ಯಾರಂಟಿ: ಲೋಕ ಸಮರಕ್ಕೂ ನಾವು ಗ್ಯಾರಂಟಿಗಳೊಂದಿಗೆ ಬಂದಿದ್ದೇವೆ ಎಂದ ಖರ್ಗೆ, ಜಾತಿ ಜನಗಣತಿ ದೇಶಾದ್ಯಂತ ನಡೆಸಿ ಅದರ ಆಧಾರದಲ್ಲಿ ಸವಲತ್ತು, ಯೋಜನೆ ನೀಡುವ ಭಾಗಿದಾರಿ ನ್ಯಾಯ ಗ್ಯಾರಂಟಿ, ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ, ಇದನ್ನೇ ಕಾನೂನತ್ಮಕವಾಗಿಸುವ ಗ್ಯಾರಂಟಿ, ದೇಶದ ಯುವಕರಿಗೆ ಕೌಶಲ್ಯ ತರಬೇತಿ ಕೊಟ್ಟು 1 ಲಕ್ಷ ರು. ಅವರಿಗೆ ಕೊಟ್ಟು ಉದ್ಯಮಶೀಲರಾಗುವಂತಹ ಯುವನ್ಯಾಯ ಗ್ಯಾರಂಟಿ, ಮಹಿಳಾ ಗ್ಯಾರಂಟಿ ಹೀಗೆ ಇನ್ನೂ ಹಲವು ಗ್ಯಾರಂಟಿಗಳೊಂದಿಗೆ ಲೋಕ ಸಮರದಲ್ಲಿ ಹೆಚ್ಚಿನ ಪ್ರಾಬಲ್ಯ ಮೆರೆಯುತ್ತೇವೆಂದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಬಿಜೆಪಿ
ಕಲಬುರಗಿ
ಮಲ್ಲಿಕಾರ್ಜುನ ಖರ್ಗೆ

Latest Videos
Recommended Stories
Recommended image1
ದಳಪತಿ ವಿಜಯ್ ದಾಂಪತ್ಯ ಅಂತ್ಯಕ್ಕೆ ತ್ರಿಷಾ ಕಾರಣನಾ? ಹೊಸ ಜಯಲಲಿತಾ ಆಗ್ತಾರಾ ನಟಿ ತ್ರಿಷಾ? ನಿಗೂಢ ಪೋಸ್ಟ್​ ಬಗ್ಗೆ ಬಿಸಿ ಬಿಸಿ ಚರ್ಚೆ!
Recommended image2
ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
Recommended image3
‘ಕುಂಬಳ ಕಾಯಿ ಕಳ್ಳ’ ಎಂದರೆ ನಾನೇ ಎಂದರೆ ನಾನೇನು ಮಾಡಲಿ : ಎಚ್‌ಡಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved