MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಲಂಡನ್‌ನಲ್ಲಿ ಎಂಬಿಎ ಓದಿದ 28 ವರ್ಷದ ಆಕಾಶ್‌ ಆನಂದ್ ಮಾಯಾವತಿಯ ರಾಜಕೀಯ ವಾರಸ್ದಾರ!

ಲಂಡನ್‌ನಲ್ಲಿ ಎಂಬಿಎ ಓದಿದ 28 ವರ್ಷದ ಆಕಾಶ್‌ ಆನಂದ್ ಮಾಯಾವತಿಯ ರಾಜಕೀಯ ವಾರಸ್ದಾರ!

ಪಕ್ಷದ ಪದಾಧಿಕಾರಿಗಳ ಪ್ರಮುಖ ಸಭೆಯ ನಂತರ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ್ದಾರೆ. ಈ ಹಿನ್ನೆಲೆ ಮಾಯಾವತಿರಾಜಕೀಯ ನಿವೃತ್ತಿ ಘೋಷಿಸ್ತಾರಾ ಎಂಬ ಮಾತೂ ಕೇಳಿಬರುತ್ತಿದೆ. 

2 Min read
BK Ashwin
Published : Dec 10 2023, 02:38 PM IST| Updated : Dec 10 2023, 03:11 PM IST
Share this Photo Gallery
  • FB
  • TW
  • Linkdin
  • Whatsapp
111

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೂ ಮುನ್ನ ಅಚ್ಚರಿಯ ಬೆಳವಣಿಗೆ ನಡೆದಿದೆ. 
 

211

ಇಂದು ಬೆಳಿಗ್ಗೆ ನಡೆದ ಪಕ್ಷದ ಪದಾಧಿಕಾರಿಗಳ ಪ್ರಮುಖ ಸಭೆಯ ನಂತರ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ್ದಾರೆ.

311

ಮಾಯಾವತಿ ನಂತರ ಅವರ ಸೋದರಳಿಯ, 28 ವರ್ಷದ ಆಕಾಶ್ ಆನಂದ್ ಪಕ್ಷದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಆದರೆ ಸದ್ಯಕ್ಕೆ ಯುಪಿ ಮಾಜಿ ಮುಖ್ಯಮಂತ್ರಿಯೇ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ.

411

ಆಕಾಶ್ ಆನಂದ್ ಯಾರು?
ಮಾಯಾವತಿಯವರ ರಾಜಕೀಯ ಉತ್ತರಾಧಿಕಾರಿ ಎಂದು ಹೆಸರಿಸಲಾದ ಆಕಾಶ್ ಆನಂದ್ ಅವರ ಸೋದರಳಿಯ. ಇವರು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರಾಗಿದ್ದಾರೆ.

511

ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಎಸ್‌ಪಿಯ ಉಸ್ತುವಾರಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸವನ್ನೂ ಮಾಡಿದ್ದಾರೆ. 


 

611

ದಲಿತರು, ಧಾರ್ಮಿಕ ಅಲ್ಪಸಂಖ್ಯಾತರು, ಒಬಿಸಿ ಮತ್ತು ಬುಡಕಟ್ಟು ಜನಾಂಗದವರ ಸಮಸ್ಯೆಗಳನ್ನು ಒಳಗೊಂಡ ಪಕ್ಷದ ಚುನಾವಣಾ ಪ್ರಚಾರವನ್ನು ತಯಾರಿಸಲು ಮತ್ತು ಪ್ರಾರಂಭಿಸಲು ನಿಯೋಗದ ಭಾಗವಾಗಿ ಮಾಯಾವತಿ ಆಕಾಶ್‌ ಆನಂದ್‌ ರನ್ನು ನಿಯೋಜಿಸಿದ್ದರು ಎಂದು ತಿಳಿದುಬಂದಿದೆ.

 

711

ಆಕಾಶ್ ಆನಂದ್ 2017 ರಲ್ಲಿ 22ನೇ ವಯಸ್ಸಿನಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ರಾಜಕೀಯ ಚೊಚ್ಚಲ ಪ್ರವೇಶ ಮಾಡಿದ್ದರು. ಅಲ್ಲಿ ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ರೊಂದಿಗೆ ವೇದಿಕೆ ಹಂಚಿಕೊಂಡರು.

811

ನಂತರ 2019 ರಲ್ಲಿ, ಆಕಾಶ್ ಆನಂದ್ ಉತ್ತರ ಪ್ರದೇಶದ ಆಗ್ರಾದಲ್ಲಿ ತಮ್ಮ ಮೊದಲ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಬಿಎಸ್‌ಪಿ ಆಗ ಮಹಾಘಟಬಂಧನ್‌ನ ಭಾಗವಾಗಿತ್ತು. 

911

ಈ ವರ್ಷದ ಆರಂಭದಲ್ಲಿ, ಪಾದಯಾತ್ರೆಗಳನ್ನು ಆಯೋಜಿಸದಿರುವ ಪಕ್ಷದ ಸಾಮಾನ್ಯ ಕಾರ್ಯತಂತ್ರದಿಂದ ಪ್ರಮುಖ ಬದಲಾವಣೆಯಲ್ಲಿ, ಆಕಾಶ್ ಆನಂದ್ 14 ದಿನಗಳ 'ಸರ್ವಜನ್ ಹಿತಯ್, ಸರ್ವಜನ್ ಸುಖಯ್' ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಿದರು.

1011

ಇದು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ಹಾಗೂ ಮುಂದಿನ ವರ್ಷ ನಡೆಯಲಿರುವ ಮಹತ್ವದ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಎಸ್‌ಪಿಯ ಕಾರ್ಯತಂತ್ರವನ್ನು ಮರುಸ್ಥಾಪಿಸುವ ಸಂಕೇತವಾಗಿದೆ. 

1111

ವರದಿಗಳ ಪ್ರಕಾರ, ಮಾಯಾವತಿ ಆಕಾಶ್ ಆನಂದ್ ರನ್ನು ದೀರ್ಘಾವಧಿಯಿಂದ ಸಿದ್ಧಗೊಳಿಸುತ್ತಿದ್ರು ಎಂದು ತಿಳಿದುಬಂದಿದೆ. ಮಾಯಾವತಿಯ ಸಹೋದರ ಆನಂದ್ ಕುಮಾರ್ ಪುತ್ರ, 28 ವರ್ಷದ ಆಕಾಶ್ ಆನಂದ್ ಬಿಎಸ್‌ಪಿ ವಲಯದಲ್ಲೀಗ ಹೆಚ್ಚು ಗುರುತಿಸಿಕೊಂಡಿದ್ದಾರೆ. Instagram ನಲ್ಲಿ, ಆಕಾಶ್‌ ಆನಂದ್‌ ಬಾಬಾ ಸಾಹೇಬ್ ಅವರ ದೃಷ್ಟಿಯ ಯುವ ಬೆಂಬಲಿಗರು. ನಾನು ಶಿಕ್ಷಣ, ಸಬಲೀಕರಣ ಮತ್ತು ಸಮಾನತೆಗಾಗಿ ನಿಲ್ಲುತ್ತೇನೆ ಎಂದು ಕರೆದುಕೊಂಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

BA
BK Ashwin
ಲಂಡನ್
Latest Videos
Recommended Stories
Recommended image1
ಇನ್ಮುಂದೆ ‘ಬೃಹತ್‌ ಮೈಸೂರು ಮಹಾನಗರ ಪಾಲಿಕೆ’: ಸಚಿವ ಸಂಪುಟ ಅನುಮೋದನೆಯಲ್ಲೇನಿದೆ?
Recommended image2
ಸಿಎಂ ಕುರ್ಚಿ ಕಾದಾಟದ ಬಣ ರಾಜಕೀಯ ತೀವ್ರ: ಮಲ್ಲಿಕಾರ್ಜುನ ಖರ್ಗೆ ಮಧ್ಯಸ್ಥಿಕೆ ಘೋಷಣೆ
Recommended image3
ವಿಪಕ್ಷದಿಂದ ರಾಜ್ಯ ಸರ್ಕಾರ ಟೀಕಿಸುವ ಚಿಲ್ಲರೆ ಕೆಲಸ: ಸಚಿವ ಕೆ.ವೆಂಕಟೇಶ್ ವಾಗ್ದಾಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved