MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಧರ್ಮಸ್ಥಳ ಥೀಮ್ ಗಣೇಶ; ಗಣೇಶನಾಗಿ ಧರ್ಮಾಧಿಕಾರಿ ಜನರ ಮುಂದೆ; ಸುಳ್ಳು ಹೇಳಿದ ಬುರುಡೆ ಗ್ಯಾಂಗ್ ಕಂಬಿ ಹಿಂದೆ!

ಧರ್ಮಸ್ಥಳ ಥೀಮ್ ಗಣೇಶ; ಗಣೇಶನಾಗಿ ಧರ್ಮಾಧಿಕಾರಿ ಜನರ ಮುಂದೆ; ಸುಳ್ಳು ಹೇಳಿದ ಬುರುಡೆ ಗ್ಯಾಂಗ್ ಕಂಬಿ ಹಿಂದೆ!

ಬೆಂಗಳೂರು ಗಣೇಶೋತ್ಸವದಲ್ಲಿ ಡಾ. ವೀರೇಂದ್ರ ಹೆಗ್ಗಡೆ ರೂಪದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಜಾಗೃತಿ ಮೂಡಿಸುವುದು ಇದರ ಉದ್ದೇಶ. ಹೆಗ್ಗಡೆ ಅವರ ಸಾಧನೆಗಳನ್ನು ಪ್ರದರ್ಶಿಸುವುದರ ಜೊತೆಗೆ, ಅಪಪ್ರಚಾರ ಮಾಡುವವರ ಚಿತ್ರ ಪ್ರದರ್ಶಿಸಲಾಗಿದೆ.

1 Min read
Sathish Kumar KH
Published : Aug 27 2025, 06:33 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು (ಆ.27): ಪ್ರತಿಷ್ಠಿತ ಬೆಂಗಳೂರು ಗಣೇಶೋತ್ಸವದಲ್ಲಿ ಈ ಬಾರಿ ಗಜಾನನ ಭಕ್ತ ಮಂಡಳಿಯು ವಿಭಿನ್ನ ಹಾಗೂ ಅರ್ಥಪೂರ್ಣ ಪರಿಕಲ್ಪನೆಯೊಂದಿಗೆ ಗಮನ ಸೆಳೆದಿದೆ. ಧರ್ಮಸ್ಥಳ ಹಾಗೂ ಡಾ. ವೀರೇಂದ್ರ ಹೆಗ್ಗಡೆ ಅವರ ಕುರಿತ ಅಪಪ್ರಚಾರಕ್ಕೆ ಭಕ್ತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಗಣೇಶನನ್ನು ಸ್ವತಃ ವೀರೇಂದ್ರ ಹೆಗ್ಗಡೆ ಅವರ ರೂಪದಲ್ಲಿ ಪ್ರತಿಷ್ಠಾಪಿಸಲಾಗಿದೆ.

26
Image Credit : Asianet News

ಗಣೇಶ ಮೂರ್ತಿಯನ್ನು ಡಾ. ವೀರೇಂದ್ರ ಹೆಗ್ಗಡೆ ಅವರು ಧರಿಸುವ ಪಂಚೆ, ಶಾಲು ಮತ್ತು ಪೇಟದೊಂದಿಗೆ ಸಿಂಗರಿಸಲಾಗಿದೆ. ಇದು ನೋಡಲು ವೀರೇಂದ್ರ ಹೆಗ್ಗಡೆ ಅವರ ಪ್ರತಿಕೃತಿಯಂತೆಯೇ ಕಾಣುತ್ತದೆ. ಈ ಥೀಮ್‌ ಮೂಲಕ, ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರದ ಕುರಿತು ಭಕ್ತರಿಗೆ ತಿಳುವಳಿಕೆ ಮೂಡಿಸುವ ಪ್ರಯತ್ನ ಮಾಡಲಾಗಿದೆ.

Related Articles

Related image1
'ಬುರುಡೆ' ಬಿಟ್ಟ ಗಿರೀಶ್ ಮಟ್ಟಣ್ಣನವರ್‌ಗೆ ಶಾಕ್, ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲು
Related image2
ಮಾಸ್ಕ್‌ಮ್ಯಾನ್ ಬಂಧನ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
36
Image Credit : Asianet News

ವಿಷೇಶತೆ ಏನು?

ಪೆಂಡಾಲ್‌ನ ಒಂದು ಬದಿಯಲ್ಲಿ, ಕಂಬಿಗಳ ಹಿಂದೆ ಬುರುಡೆ ಗ್ಯಾಂಗ್‌ನ ಮಾಸ್ಕ್‌ಮ್ಯಾನ್ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮ್ಮರೋಡಿ, ಎಐ ಕಂಟೆಂಟ್ ಕ್ರಿಯೇಟರ್ ಸಮೀರ್, ಸುಜಾತಾ ಭಟ್ ಮತ್ತು ವಕೀಲ ಜಗದೀಶ್ ಅವರ ಫೋಟೊಗಳನ್ನು ಅಳವಡಿಕೆ ಮಾಡಲಾಗಿದೆ. ಇವರು ಧರ್ಮಸ್ಥಳದ ವಿರುದ್ಧ ಸುಳ್ಳು ಆರೋಪ ಮತ್ತು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಮಂಡಳಿ ತಿಳಿಸಿದೆ.

46
Image Credit : Asianet News

ಮತ್ತೊಂದೆಡೆ, ಧರ್ಮಸ್ಥಳದ ಸೇವೆಗಳು ಮತ್ತು ಡಾ. ವೀರೇಂದ್ರ ಹೆಗ್ಗಡೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳ ವಿವರಗಳನ್ನು ಪ್ರದರ್ಶಿಸಲಾಗಿದೆ. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಹೆಗ್ಗಡೆ ಅವರ ಸಾಧನೆಗಳನ್ನು ಇಲ್ಲಿ ವಿವರಿಸಲಾಗಿದೆ.

56
Image Credit : Asianet News

ಈ ವಿನೂತನ ಥೀಮ್‌ನ ಹಿಂದಿನ ಉದ್ದೇಶ 'ಧರ್ಮೋ ರಕ್ಷತಿ ರಕ್ಷಿತಃ' ಎಂಬ ಸಂದೇಶವನ್ನು ಎತ್ತಿಹಿಡಿಯುವುದು. ಧರ್ಮವನ್ನು ರಕ್ಷಿಸುವವರನ್ನು ಧರ್ಮವೇ ರಕ್ಷಿಸುತ್ತದೆ ಎಂಬಂತೆ, ಡಾ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳವನ್ನು ಮತ್ತು ಧರ್ಮವನ್ನು ಹೇಗೆ ರಕ್ಷಿಸುತ್ತಿದ್ದಾರೆ ಎಂಬುದನ್ನು ಇಲ್ಲಿ ಬಿಂಬಿಸಲಾಗಿದೆ.

66
Image Credit : Asianet News

ಗಜಾನನ ಭಕ್ತ ಮಂಡಳಿಯ ಸದಸ್ಯರು ಧರ್ಮಸ್ಥಳದಿಂದ ತಂದ ತೆಂಗಿನಕಾಯಿಗಳನ್ನು ಭಕ್ತರಿಗೆ ಪ್ರಸಾದವಾಗಿ ವಿತರಿಸುತ್ತಿದ್ದಾರೆ. ಸಮಾಜದಲ್ಲಿ ಧರ್ಮದ ಬಗ್ಗೆ ನಂಬಿಕೆ ಮತ್ತು ಸತ್ಯವನ್ನು ಎತ್ತಿಹಿಡಿಯುವ ಈ ಪ್ರಯತ್ನಕ್ಕೆ ಭಕ್ತರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಶಿಷ್ಟ ಗಣೇಶೋತ್ಸವವು ಬೆಂಗಳೂರಿನಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಜಾಗೃತಿಯ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಧರ್ಮಸ್ಥಳ
ವೀರೇಂದ್ರ ಹೆಗ್ಗಡೆ
ಗಣೇಶ ಚತುರ್ಥಿ

Latest Videos
Recommended Stories
Recommended image1
Now Playing
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Recommended image2
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
Recommended image3
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
Related Stories
Recommended image1
'ಬುರುಡೆ' ಬಿಟ್ಟ ಗಿರೀಶ್ ಮಟ್ಟಣ್ಣನವರ್‌ಗೆ ಶಾಕ್, ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲು
Recommended image2
ಮಾಸ್ಕ್‌ಮ್ಯಾನ್ ಬಂಧನ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved