MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಚಾಮರಾಜ ಕ್ಷೇತ್ರಕ್ಕಾಗಿ ಪ್ರತಾಪ್ ಸಿಂಹ vs ಎಲ್ ನಾಗೇಂದ್ರ ಕಿತ್ತಾಟ, ಬಿಜೆಪಿಗೆ ತಲೆನೋವು ತಂದ ಆಂತರಿಕ ಗಲಾಟೆ!

ಚಾಮರಾಜ ಕ್ಷೇತ್ರಕ್ಕಾಗಿ ಪ್ರತಾಪ್ ಸಿಂಹ vs ಎಲ್ ನಾಗೇಂದ್ರ ಕಿತ್ತಾಟ, ಬಿಜೆಪಿಗೆ ತಲೆನೋವು ತಂದ ಆಂತರಿಕ ಗಲಾಟೆ!

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ 2028ರ ಚುನಾವಣಾ ಟಿಕೆಟ್‌ಗಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಮಾಜಿ ಶಾಸಕ ಎಲ್. ನಾಗೇಂದ್ರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದು, ಇದು ನಾಗೇಂದ್ರರ ಅಸಮಾಧಾನಕ್ಕೆ ಕಾರಣವಾಗಿದೆ.  

3 Min read
Author : Gowthami K
Published : Jan 08 2026, 01:47 PM IST
Share this Photo Gallery
  • FB
  • TW
  • Linkdin
  • Whatsapp
17
ಪ್ರತಾಪ್ ಸಿಂಹ vs ಎಲ್. ನಾಗೇಂದ್ರ
Image Credit : Asianet News

ಪ್ರತಾಪ್ ಸಿಂಹ vs ಎಲ್. ನಾಗೇಂದ್ರ

ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಮಾಜಿ ಶಾಸಕ ನಡುವಿನ ಬಹಿರಂಗ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. 2028ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಮಾಜಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ, ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಪಕ್ಷದೊಳಗೆ ಆಂತರಿಕ ಪೈಪೋಟಿ ಆರಂಭವಾಗಿದೆ. ಕೇಂದ್ರ ರಾಜಕಾರಣ ಮುಗಿದ ಬಳಿಕ ಸಹಜವಾಗಿ ರಾಜ್ಯ ರಾಜಕಾರಣಕ್ಕೆ ಬಂದಿದ್ದೇನೆ ಎಂದು ಹೇಳಿರುವ ಪ್ರತಾಪ್ ಸಿಂಹ, 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಚಾಮರಾಜ ಕ್ಷೇತ್ರವನ್ನು ತಮ್ಮ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿ ಆಯ್ಕೆ ಮಾಡಿಕೊಂಡಿರುವುದಾಗಿ ಅವರು ಬಹಿರಂಗವಾಗಿ ಹೇಳಿರುವುದು, ಇದೇ ಕ್ಷೇತ್ರದ ಮಾಜಿ ಶಾಸಕ ಎಲ್. ನಾಗೇಂದ್ರ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

27
ಪಕ್ಷದ ಇತಿ–ಮಿತಿಗಳನ್ನು ಮೀರಿ ಯಾರೂ ವರ್ತಿಸಬಾರದು: ಎಲ್. ನಾಗೇಂದ್ರ
Image Credit : Asianet News

ಪಕ್ಷದ ಇತಿ–ಮಿತಿಗಳನ್ನು ಮೀರಿ ಯಾರೂ ವರ್ತಿಸಬಾರದು: ಎಲ್. ನಾಗೇಂದ್ರ

ಈ ಬೆಳವಣಿಗೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಎಲ್. ನಾಗೇಂದ್ರ, ವಿಧಾನಸಭಾ ಟಿಕೆಟ್ ಯಾರಿಗೆ ಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಈ ಬಗ್ಗೆ ಪ್ರತಾಪ್ ಸಿಂಹ ಅವರಿಗೆ ಅರಿವು ಇರಬೇಕಿತ್ತು. ನಾನು ಕಳೆದ ಚುನಾವಣೆಯಲ್ಲಿ ಕೇವಲ ಸ್ವಲ್ಪ ಮತಾಂತರದಿಂದ ಸೋತಿದ್ದೇನೆ. ಪಕ್ಷದ ಇತಿ–ಮಿತಿಗಳನ್ನು ಮೀರಿ ಯಾರೂ ವರ್ತಿಸಬಾರದು. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಹೇಳಿಕೆಗಳು ಸಲ್ಲದು ಎಂದು ಕಿಡಿಕಾರಿದ್ದಾರೆ. ಜೊತೆಗೆ ನನ್ನ ಹೋರಾಟ ಚಾಮರಾಜ ಕ್ಷೇತ್ರದಲ್ಲೇ ಮುಂದುವರಿಯಲಿದೆ. ಟಿಕೆಟ್ ಕುರಿತು ಅಂತಿಮ ತೀರ್ಮಾನ ಪಕ್ಷದ ವರಿಷ್ಠರದ್ದೇ ಎಂದು ನಾಗೇಂದ್ರ ಸ್ಪಷ್ಟಪಡಿಸಿದ್ದು, ಇಬ್ಬರ ನಡುವಿನ ವಾಕ್ಸಮರಕ್ಕೆ ವೇದಿಕೆ ಸಿದ್ಧವಾದಂತಾಗಿದೆ.

Related Articles

Related image1
ಚಾಮರಾಜ ವಿಧಾನಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ಯಾಕೆ? ಪ್ರತಾಪ್ ಸಿಂಹ ಹೇಳಿದ್ದೇನು?
Related image2
ಮಕ್ಕಳ ಪ್ರಶ್ನೆಗಳಿಗೆ ಸಮಚಿತ್ತದಿಂದ ಉತ್ತರಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್!
37
ಕಳೆದ 30 ವರ್ಷಗಳಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಎಲ್. ನಾಗೇಂದ್ರ
Image Credit : Asianet News

ಕಳೆದ 30 ವರ್ಷಗಳಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಎಲ್. ನಾಗೇಂದ್ರ

1978ರಲ್ಲಿ ವಿಧಾನಸಭಾ ಕ್ಷೇತ್ರವಾಗಿ ರೂಪುಗೊಂಡ ಚಾಮರಾಜ ಕ್ಷೇತ್ರ, ಮೈಸೂರಿನ ಅರಮನೆ, ಚಾಮುಂಡಿಬೆಟ್ಟ ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಒಳಗೊಂಡಿದ್ದು, ದೊಡ್ಡ ಮತದಾರರ ಸಂಖ್ಯೆಯನ್ನು ಹೊಂದಿದೆ. ಈ ಕಾರಣದಿಂದಲೇ ಕ್ಷೇತ್ರದ ಮೇಲೆ ಬಿಜೆಪಿ ಒಳಗೇ ಪೈಪೋಟಿ ಹೆಚ್ಚಾಗಿದೆ. ರಾಜಕೀಯವಾಗಿ ಎಲ್. ನಾಗೇಂದ್ರ ಅವರಿಗೆ ಸುದೀರ್ಘ ಅನುಭವವಿದ್ದು, ಅವರು ಒಮ್ಮೆ ಶಾಸಕರಾಗಿ, ಮೂರು ಬಾರಿ ಪಾಲಿಕೆ ಸದಸ್ಯರಾಗಿ, ಮೇಯರ್, ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ 30 ವರ್ಷಗಳಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಅವರು ಕ್ಷೇತ್ರದಲ್ಲಿ ಬಲವಾದ ಹಿಡಿತ ಹೊಂದಿದ್ದಾರೆ.

47
ಚಾಮರಾಜ ಕ್ಷೇತ್ರ ಹಣದ ಪ್ಯಾಕೆಟ್ ಕೊಟ್ಟು ಗೆಲ್ಲುವ ಕ್ಷೇತ್ರವಲ್ಲ
Image Credit : Asianet News

ಚಾಮರಾಜ ಕ್ಷೇತ್ರ ಹಣದ ಪ್ಯಾಕೆಟ್ ಕೊಟ್ಟು ಗೆಲ್ಲುವ ಕ್ಷೇತ್ರವಲ್ಲ

ಇನ್ನೊಂದೆಡೆ, ಎರಡು ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹಗೂ ಮೈಸೂರಿನಲ್ಲಿ ಸಾಕಷ್ಟು ವರ್ಚಸ್ಸು ಇದೆ. 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಪರಿಣಾಮ ಅವರ ಹ್ಯಾಟ್ರಿಕ್ ಸಂಸದೀಯ ಕನಸು ನುಚ್ಚುನೂರಾಗಿತ್ತು. ಇದೀಗ ಅವರು ರಾಷ್ಟ್ರ ರಾಜಕಾರಣವನ್ನು ಬಿಟ್ಟು ರಾಜ್ಯ ರಾಜಕಾರಣದತ್ತ ಹೆಜ್ಜೆ ಇಟ್ಟಿದ್ದಾರೆ. ಈ ಬಗ್ಗೆ ಪ್ರತಾಪ್ ಸಿಂಹ ಮಾತನಾಡಿ, “ಕೇಂದ್ರ ರಾಜಕಾರಣ ಮುಗಿದ ಮೇಲೆ ಸಹಜವಾಗಿ ರಾಜ್ಯ ರಾಜಕಾರಣಕ್ಕೆ ಬಂದಿದ್ದೇನೆ. ಎಲ್ಲಾ ದೃಷ್ಟಿಯಿಂದಲೂ ಚಾಮರಾಜ ಕ್ಷೇತ್ರ ನನಗೆ ಅನುಕೂಲಕರವಾಗಿದೆ. ಇದು ಬಿಜೆಪಿ ಬಲವಾದ ಕ್ಷೇತ್ರ. ಈ ಹಿಂದೆ ಶಂಕರಲಿಂಗೇಗೌಡರು ನಾಲ್ಕು ಬಾರಿ ಇಲ್ಲಿ ಗೆದ್ದಿದ್ದಾರೆ. ಹೀಗಾಗಿ ಚಾಮರಾಜ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.

ಚಾಮರಾಜ ಕ್ಷೇತ್ರ ಹಣದ ಪ್ಯಾಕೆಟ್ ಕೊಟ್ಟು ಗೆಲ್ಲುವ ಕ್ಷೇತ್ರವಲ್ಲ. ಇಲ್ಲಿ ಮತದಾರರು ಕೆಲಸ ನೋಡಿ ಬೆಂಬಲ ನೀಡುವ ಪ್ರಜ್ಞಾವಂತರು. ನಾನು ಈ ಕ್ಷೇತ್ರವನ್ನು ಕೇವಲ ಒಂದು ಸಮುದಾಯದ ಆಧಾರದಲ್ಲಿ ನೋಡುತ್ತಿಲ್ಲ. ಇಲ್ಲಿ ಎಲ್ಲ ವರ್ಗಗಳ ಜನರು ಇದ್ದಾರೆ. ಅದೇ ನನ್ನ ಆಯ್ಕೆಗೆ ಕಾರಣ” ಎಂದು ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ.

57
ಚಾಮರಾಜ ಕ್ಷೇತ್ರದಲ್ಲಿ ಸದ್ದಿಲ್ಲದೇ ಚಟುವಟಿಕೆ ಆರಂಭಿಸಿ ಸಿಂಹ
Image Credit : Pratap Simha FB

ಚಾಮರಾಜ ಕ್ಷೇತ್ರದಲ್ಲಿ ಸದ್ದಿಲ್ಲದೇ ಚಟುವಟಿಕೆ ಆರಂಭಿಸಿ ಸಿಂಹ

ಕಳೆದ ಕೆಲವು ತಿಂಗಳುಗಳಿಂದ ಪ್ರತಾಪ್ ಸಿಂಹ ಅವರು ಚಾಮರಾಜ ಕ್ಷೇತ್ರದಲ್ಲಿ ಸದ್ದಿಲ್ಲದೇ ಚಟುವಟಿಕೆ ಆರಂಭಿಸಿದ್ದು, ಕ್ಷೇತ್ರದ ನಾಯಕರು, ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ. ಸಭೆ–ಸಮಾರಂಭಗಳಲ್ಲಿ ಭಾಗವಹಿಸುವ ಜೊತೆಗೆ, ಕ್ಷೇತ್ರದ ಮುಖಂಡರ ಕುಟುಂಬಸ್ಥರ ಜನ್ಮದಿನಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿಸುವ ಮೂಲಕ ತಮ್ಮ ಹಾಜರಾತಿಯನ್ನು ಗಟ್ಟಿಗೊಳಿಸುತ್ತಿದ್ದಾರೆ.

67
ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯೆ
Image Credit : Pratap Simha FB

ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯೆ

ಇನ್ನು ಈ ವಾಕ್ಸಮರದ ಕುರಿತು ಪ್ರತಿಕ್ರಿಯೆ ನೀಡಿರುವ ಮೈಸೂರು–ಕೊಡಗು ಸಂಸದ ಯದುವೀರ್ ಒಡೆಯರ್, “ಚುನಾವಣೆ ಟಿಕೆಟ್ ಹಂಚಿಕೆ ಮಾಡುವುದು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪಕ್ಷದ ವರಿಷ್ಠರ ಕೆಲಸ. ಎಲ್ಲರಿಗೂ ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯ ಇದೆ. ಆದರೆ ಅಂತಿಮ ತೀರ್ಮಾನ ವರಿಷ್ಠರದ್ದೇ. ಪಕ್ಷ ಹೇಳುವ ಅಭ್ಯರ್ಥಿಗೆ ನಾವು ಎಲ್ಲರೂ ಒಗ್ಗೂಡಿ ಬೆಂಬಲ ನೀಡಬೇಕು. ಪಕ್ಷದ ಗೆಲುವಿಗೆ ಶ್ರಮಿಸುವುದೇ ಎಲ್ಲರ ಮೊದಲ ಆದ್ಯತೆ ಆಗಬೇಕು” ಎಂದು ಹೇಳಿದ್ದಾರೆ.

77
ಚಾಮರಾಜ ಕ್ಷೇತ್ರದ ಹಿಂದಿನ ಚುನಾವಣಾ ಫಲಿತಾಂಶ
Image Credit : Pratap Simha FB

ಚಾಮರಾಜ ಕ್ಷೇತ್ರದ ಹಿಂದಿನ ಚುನಾವಣಾ ಫಲಿತಾಂಶ

ಚಾಮರಾಜ ಕ್ಷೇತ್ರದ ಹಿಂದಿನ ಚುನಾವಣಾ ಫಲಿತಾಂಶಗಳನ್ನು ನೋಡಿದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಎಲ್. ನಾಗೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ. ಹರೀಶ್ ಗೌಡ ಎದುರು ಕೇವಲ 4,094 ಮತಗಳ ಅಂತರದಿಂದ ಸೋಲು ಕಂಡಿದ್ದರು. ಹರೀಶ್ ಗೌಡ 72,931 ಮತಗಳನ್ನು ಪಡೆದಿದ್ದರೆ, ನಾಗೇಂದ್ರ 68,837 ಮತಗಳನ್ನು ಪಡೆದು ಭಾರೀ ಪೈಪೋಟಿ ನೀಡಿದ್ದರು. 2018ರಲ್ಲಿ ನಾಗೇಂದ್ರ ಅವರು ಕಾಂಗ್ರೆಸ್‌ನ ವಾಸು ವಿರುದ್ಧ ಗೆಲುವು ಸಾಧಿಸಿದ್ದರು.

ಒಟ್ಟಿನಲ್ಲಿ, ಹತ್ತು ವರ್ಷಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಪ್ರತಾಪ್ ಸಿಂಹ ಇದೀಗ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಿರುವುದು ಬಿಜೆಪಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, 2028ರ ಚಾಮರಾಜ ಕ್ಷೇತ್ರದ ಟಿಕೆಟ್ ಕಿತ್ತಾಟ ಇನ್ನೂ ಕಾವೇರಲಿದೆ ಎಂಬುದು ಸ್ಪಷ್ಟವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಪ್ರತಾಪ್ ಸಿಂಹ
ಕರ್ನಾಟಕ ರಾಜಕೀಯ
ಮೈಸೂರು
ಬಿಜೆಪಿ

Latest Videos
Recommended Stories
Recommended image1
Now Playing
ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Recommended image2
ಗ್ಯಾರಂಟಿಯಿಂದ ಸರ್ಕಾರ ಆಗಿಲ್ಲ ದಿವಾಳಿ : ಸಿಎಂ
Recommended image3
ಅಧಿಕಾರಕ್ಕಾಗಿ ಅಪವಿತ್ರ ರಾಜಕೀಯ ಮೈತ್ರಿ - ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೈರಿಗಳ ಮಿಲನ
Related Stories
Recommended image1
ಚಾಮರಾಜ ವಿಧಾನಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ಯಾಕೆ? ಪ್ರತಾಪ್ ಸಿಂಹ ಹೇಳಿದ್ದೇನು?
Recommended image2
ಮಕ್ಕಳ ಪ್ರಶ್ನೆಗಳಿಗೆ ಸಮಚಿತ್ತದಿಂದ ಉತ್ತರಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved