MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಜಗದೀಶ ಶೆಟ್ಟರ್ ಸೋತಿದ್ರೆ ಸಾಧು ಆಗಿ ನಾನು ಹಿಮಾಲಯ ಸೇರುತ್ತಿದ್ದೆ: ರಮೇಶ ಜಾರಕಿಹೊಳಿ ಅಚ್ಛರಿ ಮಾತು!

ಜಗದೀಶ ಶೆಟ್ಟರ್ ಸೋತಿದ್ರೆ ಸಾಧು ಆಗಿ ನಾನು ಹಿಮಾಲಯ ಸೇರುತ್ತಿದ್ದೆ: ರಮೇಶ ಜಾರಕಿಹೊಳಿ ಅಚ್ಛರಿ ಮಾತು!

ವಿಧಾನಸಭೆ ಚುನಾವಣೆಯಲ್ಲಿ ನಮಗೆ ತೀವ್ರ ಹಿನ್ನಡೆಯಾಗಿತ್ತು. ಪದೇಪದೆ ಸೋತರೆ ನಮಗೆ ಲೀಡರ್ಸ್ ಅನ್ನಲ್ಲ. ಈ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಜಗದೀಶ ಶೆಟ್ಟರ್ ಸೋತಿದ್ರೆ ನಾನು ಸಾಧು ಆಗಿ ಹಿಮಾಲಯ ಸೇರಲು ನಿರ್ಧಾರ ಮಾಡಿದ್ದೆ. ಅದಕ್ಕಾಗಿ ಹಿಮಾಲಯದಲ್ಲಿ ಜಾಗವನ್ನೂ ನೋಡಿಕೊಂಡು ಬಂದಿದ್ದೇ'. ಹೀಗೆಂದವರೂ ಬೇರೆ ಯಾರೂ ಅಲ್ಲ, ಮಾಜಿ ಸಚಿವ, ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ.

2 Min read
Author : Ravi Janekal
Published : Jun 21 2024, 12:48 PM IST
Share this Photo Gallery
  • FB
  • TW
  • Linkdin
  • Whatsapp
14

ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಗೆಲುವು ದಾಖಲಿಸಿದ ಜಗದೀಶ ಶೆಟ್ಟರ್(Jagadish shettar) ಹಾಗೂ ರಮೇಶ ಜಾರಕಿಹೊಳಿಗೆ (Ramesh jarkiholi) ಗೋಕಾಕ ಬಿಜೆಪಿ ಘಟಕ(Gokak bjp)ದಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾಷಣದುದ್ದಕ್ಕೂ ರಾಜಕೀಯ ಬದ್ಧ ವೈರಿಗಳಾದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar) ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi hebbalkar) ವಿರುದ್ಧ ಗುಡುಗಿದರು.
 

24

ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿದ್ದು ನಿಜ. ಆದರೆ ಲೋಕಸಭೆ ಚುನಾವಣೆ(Lok sabha election 2024)ಯಲ್ಲಿ ನಾವು ಗೆಲ್ಲಲೇಬೇಕಿತ್ತು. ನಮ್ಮ ಕಾರ್ಯಕರ್ತರು ದುಡ್ಡು ನೋಡಲಿಲ್ಲ. ಒಂದು ಕಪ್ ಚಹಾವನ್ನೂ ನಿರೀಕ್ಷೆ ಮಾಡಲಿಲ್ಲ. ತಮ್ಮ ಕೈಯಿಂದಲೇ ಪೆಟ್ರೊಲ್ ಹಾಕಿಸಿಕೊಂಡು ಊರೂರು ಸುತ್ತಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಪರ ಪ್ರಚಾರ ಮಾಡಿದರು. ಹಠಕ್ಕೆ ಬಿದ್ದು ನಾವು ಪ್ರಚಾರ ಮಾಡಿದಕ್ಕೆ ಬಿಜೆಪಿಗೆ ಇಷ್ಟೊಂದು ದೊಡ್ಡ ಗೆಲುವು ಸಿಗಲು ಕಾರಣವಾಯಿತು ಎಂದರು.
 

34

ದುಡ್ಡು ತೂರಾದಿಡ್ಡ ಹೆಬ್ಬಾಳ್ಕರ್:

ಲೋಕಸಭೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್(Mrinal hebbalkar) ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದರು. ಪುತ್ರನನ್ನು ಗೆಲ್ಲಿಸಲು ಸಚಿವೆ ಹೆಬ್ಬಾಳ್ಕರ್ ಮನಬಂದಂತೆ ದುಡ್ಡು ತೂರಾಡಿದರು. ಯಾವುದೇ ಕ್ಷೇತ್ರಕ್ಕೆ ಹೋಗಲಿ ಮೆರವಣಿಗೆ ಮಾಡಲು ಜೀಪ್‍ಗೆ ಹಾಗೂ ಹಾರ ತುರಾಯಿ ಹಾಕಿಸಿಕೊಳ್ಳಲು ಹೆಬ್ಬಾಳ್ಕರ್ ದುಡ್ಡು ಕೊಡುತ್ತಿದ್ದರು. ತಮ್ಮದೇ ದುಡ್ಡಿನಿಂದ ಖರೀದಿಸಿದ ಹಾರವನ್ನು ತಾವೇ ಪ್ರಚಾರ ಸಭೆಗಳಲ್ಲಿ ಹಾಕಿಕೊಳ್ಳುತ್ತಿದ್ದರು. ವಿಧಾನಸಭೆ ಚುನಾವಣೆ ಬಳಿಕ ಮಹಾನಾಯಕ ಹಾಗೂ ವಿಷಕನ್ಯೆಯ ಸೊಕ್ಕಿನ ರಾಜಕಾರಣದ ದರ್ಪ ಜೋರಾಗಿತ್ತು. ದುಡ್ಡಿನಿಂದ ಎಲ್ಲವನ್ನೂ ಗೆಲ್ಲಬಹುದು ಎಂದು ಕೊಂಡವರಿಗೆ ಈ ಚುನಾವಣೆಯಲ್ಲಿ ಉತ್ತರ ಸಿಕ್ಕಿದೆ ಎಂದು ಕಿಡಿ ಕಾರಿದರು.

44

ಡಿಕೆಶಿ ವಿರುದ್ಧ ಸಾಹುಕಾರ್ ಗಂಭೀರ ಆರೋಪ:

ಗೋಕಾಕ ಕ್ಷೇತ್ರದ ಮಹತ್ವಾಕಾಂಕ್ಷೆಯ ಗಟ್ಟಿ ಬಸವಣ್ಣ ಏತನೀರಾವರಿ ಯೋಜನೆಗೆ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಆಗಿದ್ದ ಬಸವರಾಜ್ ಬೊಮ್ಮಾಯಿ(Basavaraj bommai) ಗೋಕಾಕ ನಗರಕ್ಕೆ ಆಗಮಿಸಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಕಾಂಗ್ರೆಸ್ ಸರ್ಕಾರ ಬಂದ ನಂತರ ಈಗಿನ ಜಲಸಂಪನ್ಮೂಲ ಸಚಿವರು ಈ ಯೋಜನೆಯನ್ನು ತಡೆ ಹಿಡಿದಿದ್ದಾರೆ. ನನ್ನ ಕ್ಷೇತ್ರದ ನೀರಾವರಿ ಯೋಜನೆಗೆ ಅಡ್ಡಗಾಲು ಹಾಕಲಾಗುತ್ತಿದೆ ಎಂದು ರಮೇಶ ಆರೋಪಿಸಿದರು. 

ಈ ಯೋಜನೆಯನ್ನು ಸ್ಥಗಿತಗೊಳಿಸಿದ್ದರೆ ನಾನು ಡಿಕೆಶಿ ವಿರುದ್ಧ ಹೋರಾಟಕ್ಕೆ ನಿರ್ಧರಿಸಿದ್ದೆ. ಆದರೆ ತಡೆಹಿಡಿದಿರುವುದು ಗೊತ್ತಾಗಿದೆ. ಈ ಯೋಜನೆ ಜಾರಿಯಾದ್ರೆ ಎಲ್ಲರಿಗೂ ಒಳ್ಳೆಯದಾಗುತ್ತದೆ. ಇಲ್ಲವಾದರೆ ದೇವರ ಆಶೀರ್ವಾದದಿಂದ ಇನ್ನೆನೋ ಆಗಲಿದೆ. ಸಿದ್ದರಾಮಯ್ಯ ಸಿಎಂ ಆಗಿದಕ್ಕೆ ನಮ್ಮ ಕೆಲಸ ಸ್ಲೋ ಆಗಿದೆ ಎಂದು ಸರ್ಕಾರ ಪತನದ ಕಾರ್ಯಚಟುವಟಿಕೆಗಳ ಬಗ್ಗೆ ಬಹಿರಂಗ ಸಮಾವೇಶದಲ್ಲಿ ರಮೇಶ ಜಾರಕಿಹೊಳಿ ರಿವಿಲ್ ಮಾಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಬೆಳಗಾವಿ
ರಮೇಶ್ ಜಾರಕಿಹೊಳಿ
ಜಗದೀಶ್ ಶೆಟ್ಟರ್
ಡಿ.ಕೆ. ಶಿವಕುಮಾರ್
ಲಕ್ಷ್ಮಿ ಹೆಬ್ಬಾಳ್ಕರ್

Latest Videos
Recommended Stories
Recommended image1
Internal Reservation Row: ಸಿಎಂ ನೇತೃತ್ವದಲ್ಲಿ ದಲಿತ ಸಚಿವರ ಮಹತ್ವದ ಸಭೆ, ಮೂರು ಮಹತ್ವದ ನಿರ್ಧಾರ, ರಾಜಭವನಕ್ಕೆ ಸಚಿವರ ನಿಯೋಗ ದೌಡು!
Recommended image2
ಪ್ರಧಾನಿ ಮೋದಿ ಅಪಹಾಸ್ಯ ಮಾಡಿದ್ದ ಕೈ ಕಾರ್ಯಕರ್ತೆ ವಿರುದ್ಧ ದೂರು!
Recommended image3
''ಮತ್ತೆ ಮೊಳಗಲಿದೆ ಜೆಡಿಎಸ್ ಕಹಳೆ: ಎಚ್ಡಿಕೆ 2028ಕ್ಕೆ ಸಿಎಂ''
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved