ಯಡಿಯೂರಪ್ಪ ಭೇಟಿಯಾದ ಬಿ.ಎಲ್. ಸಂತೋಷ್: ಬೈಎಲೆಕ್ಷನ್ ಕುರಿತು ಚರ್ಚೆ
ಬೆಂಗಳೂರು(ಅ.15): ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇಂದು(ಶುಕ್ರವಾರ) ಭೇಟಿ ಮಾಡಿದ್ದಾರೆ.

ಇಂದು ನಗರದ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾದ ಬಿ.ಎಲ್. ಸಂತೋಷ್ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಉಪಚುನಾವಣೆ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.
ವಿಜಯದಶಮಿ ಹಿನ್ನಲೆಯಲ್ಲಿ ಉಭಯ ನಾಯಕರು ಪರಸ್ಪರ ಬನ್ನಿ ಹಂಚಿಕೊಂಡಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಯಡಿಯೂರಪ್ಪ ಜೊತೆ ಚರ್ಚೆ ಮಾಡಿ ಬಿ.ಎಲ್.ಸಂತೋಷ್ ತೆರಳಿದ್ದಾರೆ.
ಉಪಚುನಾವಣೆ ನಡೆಯುವ ಎರಡೂ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಎರಡೆರಡು ದಿನ ಪ್ರಚಾರ ಮಾಡಲಿದ್ದಾರೆ. ಮೊದಲ ಹಂತದಲ್ಲಿ ಸಿಂದಗಿ ಕ್ಷೇತ್ರದಲ್ಲಿ ಅ.20 ಮತ್ತು ಅ. 21 ಹಾಗೂ ಹಾನಗಲ್ ಕ್ಷೇತ್ರದಲ್ಲಿ ಅ.22 ಮತ್ತು ಅ.23 ತಾರೀಖು ಪ್ರಚಾರ ನಡೆಸಲಿದ್ದಾರೆ.
ಮೊನ್ನೆ ರಾತ್ರಿ ಬೆಂಗಳೂರಿಗೆ ಆಗಿಮಿಸಿರುವ ಬಿ.ಎಲ್.ಸಂತೋಷ್ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದರು. ಇಂದು ಬಿಎಸ್ವೈ ಅವರನ್ನ ಭೇಟಿಯಾದ ಬಿ.ಎಲ್.ಸಂತೋಷ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.