ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ: ಸಿಎಂ ಬಿಎಸ್ವೈ ದಾಖಲೆ
ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಈ ನಡುವೆಯೇ ಇಂದು (ಶುಕ್ರವಾರ) ಸಿಎಂ ಬಿಎಸ್ ಯಡಿಯೂರಪ್ಪ ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ.

<p><br />ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕೆಆರ್ಎಸ್ನಲ್ಲಿ ಕಾವೇರಿ ಮಾತೆಗೆ ಐದನೇ ಬಾರಿ ಬಾಗಿನ ಸಮರ್ಪಣೆ ಮಾಡಿದರು.</p>
ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕೆಆರ್ಎಸ್ನಲ್ಲಿ ಕಾವೇರಿ ಮಾತೆಗೆ ಐದನೇ ಬಾರಿ ಬಾಗಿನ ಸಮರ್ಪಣೆ ಮಾಡಿದರು.
<p>ವೈದಿಕ ಭಾನುಪ್ರಕಾಶ್ ಶರ್ಮಾ ಅವರು ಬಾಗಿನ ಸಮರ್ಪಣೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. </p>
ವೈದಿಕ ಭಾನುಪ್ರಕಾಶ್ ಶರ್ಮಾ ಅವರು ಬಾಗಿನ ಸಮರ್ಪಣೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
<p>ಈಗಾಗಲೇ 4 ಬಾರಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿರುವ ಯಡಿಯೂರಪ್ಪ ಅವರು 5ನೇ ಬಾರಿ ಬಾಗಿನ ಅರ್ಪಿಸಿ ಹೆಗ್ಗಳಿಕೆಗೆ ಪಾತ್ರರಾದರು.</p>
ಈಗಾಗಲೇ 4 ಬಾರಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿರುವ ಯಡಿಯೂರಪ್ಪ ಅವರು 5ನೇ ಬಾರಿ ಬಾಗಿನ ಅರ್ಪಿಸಿ ಹೆಗ್ಗಳಿಕೆಗೆ ಪಾತ್ರರಾದರು.
<p>2018ರ ಆಗಸ್ಟ್ ತಿಂಗಳಿನಲ್ಲಿ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮೂಲಕ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಿದ್ದಾರೆ. </p>
2018ರ ಆಗಸ್ಟ್ ತಿಂಗಳಿನಲ್ಲಿ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮೂಲಕ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಿದ್ದಾರೆ.
<p>ಕಳೆದ ವರ್ಷ ಆಗಸ್ಟ್ 21ರಂದು ಕೆಆರ್ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿಗಳು ಆಗಸ್ಟ್ 21 ರಂದು ಬಾಗಿನ ಅರ್ಪಿಸಿರುವುದು ವಿಶೇಷ.</p>
ಕಳೆದ ವರ್ಷ ಆಗಸ್ಟ್ 21ರಂದು ಕೆಆರ್ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿಗಳು ಆಗಸ್ಟ್ 21 ರಂದು ಬಾಗಿನ ಅರ್ಪಿಸಿರುವುದು ವಿಶೇಷ.
<p>ಸತತ 5 ಬಾರಿ ಸಿಎಂ ಬಿಎಸ್ವೈ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಇದರೊಂದಿಗೆ ಕಾವೇರಿ ನದಿಗೆ ಅತೀ ಹೆಚ್ಚು ಸಲ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.</p>
ಸತತ 5 ಬಾರಿ ಸಿಎಂ ಬಿಎಸ್ವೈ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಇದರೊಂದಿಗೆ ಕಾವೇರಿ ನದಿಗೆ ಅತೀ ಹೆಚ್ಚು ಸಲ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.
<p>ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದೆ ಸುಮಲತಾ ಅಂಬರೀಶ್ ಮತ್ತು ಇತರೆ ಗಣ್ಯರು ಸ್ಥಳದಲ್ಲಿ ಹಾಜರಿದ್ದರು.</p>
ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದೆ ಸುಮಲತಾ ಅಂಬರೀಶ್ ಮತ್ತು ಇತರೆ ಗಣ್ಯರು ಸ್ಥಳದಲ್ಲಿ ಹಾಜರಿದ್ದರು.