MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • DK Brothers: ಸಂಪುಟ ಪುನಾರಚನೆ ಮತ್ತು ಪವರ್ ಶೇರಿಂಗ್ ಆಟ: ಡಿಕೆ ಬ್ರದರ್ಸ್ ರಹಸ್ಯ ನಡೆ?

DK Brothers: ಸಂಪುಟ ಪುನಾರಚನೆ ಮತ್ತು ಪವರ್ ಶೇರಿಂಗ್ ಆಟ: ಡಿಕೆ ಬ್ರದರ್ಸ್ ರಹಸ್ಯ ನಡೆ?

ಸಚಿವ ಸಂಪುಟ ಪುನಾರಚನೆ ಚರ್ಚೆಯ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿರುವ ಸುರೇಶ್, ನಾಯಕತ್ವ ಬದಲಾವಣೆ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದು, ತಮ್ಮ ಸಹೋದರ ಸಿಎಂ ಆಗಬೇಕೆಂಬ ಆಸೆಯನ್ನು ಪುನರುಚ್ಚರಿಸಿದ್ದಾರೆ.

2 Min read
Mahmad Rafik
Published : Nov 16 2025, 01:50 PM IST
Share this Photo Gallery
  • FB
  • TW
  • Linkdin
  • Whatsapp
15
ಸಚಿವ ಸಂಪುಟ ಪುನಾರಚನೆ
Image Credit : Twitter

ಸಚಿವ ಸಂಪುಟ ಪುನಾರಚನೆ

ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಡಿಕೆ ಬ್ರದರ್ಸ್ ಅಖಾಡಕ್ಕಿಳಿದಿದ್ದಾರೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆ.

25
ಡಿಕೆ ಸುರೇಶ್
Image Credit : Asianet News

ಡಿಕೆ ಸುರೇಶ್

ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಸುರೇಶ್, ನಮ್ಮ ಅಣ್ಣ ಸಿಎಂ ಆಗಬೇಕೆಂದು ನಾನು ಹಲವು ಬಾರಿ ಹೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನವೇ ಎಲ್ಲವೂ ಅಂತಿಮ. ಸಿಎಂ, ಸಚಿವ ಸಂಪುಟ ಹಾಗೂ ಡಿಕೆ ಶಿವಕುಮಾರ್ ಗೆ ಇರಬಹುದು ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ಎಂದು ಕಾದು ನೋಡೋಣ ಎಂದು ಹೇಳಿದರು.

Related Articles

Related image1
ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ನೀಡಬೇಕು: ಶಾಸಕ ಸಿ.ಎಸ್.ನಾಡಗೌಡ
Related image2
ದಿಲ್ಲಿ ಭೇಟಿ ವೇಳೆ ರಾಹುಲ್‌ ಗಾಂಧಿ ಸಿಕ್ಕರೆ ಸಂಪುಟ ಪುನಾರಚನೆ ಚರ್ಚೆ: ಸಿಎಂ ಸಿದ್ದರಾಮಯ್ಯ
35
 ನಾಯಕತ್ವ ಬದಲಾವಣೆ
Image Credit : our own

ನಾಯಕತ್ವ ಬದಲಾವಣೆ

ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಬೇಕೇ ಹೊರತು ಬೇರೆ ಯಾರು ಅಲ್ಲ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಆಗಲ್ಲ ಎಂಬ ಮಾತಿಗೆ ತಿರುಗೇಟು ನೀಡಿದರು.

45
ನಾಳೆ ದೆಹಲಿಗೆ ಹೋಗ್ತಿದ್ದೇನೆ
Image Credit : Social Media

ನಾಳೆ ದೆಹಲಿಗೆ ಹೋಗ್ತಿದ್ದೇನೆ

ನನಗೆ ಬೇರೆ ಕೆಲಸ ಇದೆ ಅದಕ್ಕಾಗಿ ನಾಳೆ ದೆಹಲಿಗೆ ಹೋಗ್ತಿದ್ದೇನೆ. ನಾನು ದೆಹಲಿಗೆ ಆಗಾಗ ಹೋಗುತ್ತಿರುತ್ತೇನೆ. ದೆಹಲಿಗೆ ಹೋದಾಗ ಪಕ್ಷದ ಮುಖಂಡರ ಭೇಟಿಗೆ ಅವಕಾಶ ಸಿಕ್ಕಿದ್ರೆ ಭೇಟಿ ಮಾಡುತ್ತೇನೆ ಎಂದು ಡಿಕೆ ಸುರೇಶ್ ತಿಳಿಸಿದರು. 

ಮುಂದುವರಿದು ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆಯೂ ಮಾತನಾಡಿದ ಮಾಜಿ ಸಂಸದರು, ಎಲೆಕ್ಷನ್‌ಗೂ ಮುನ್ನವೇ 10 ಸಾವಿರ ರೂಪಾಯಿ ಹಾಕಿದ್ದು, ಜನರು ತೀರ್ಪು ನೀಡಿದ್ದಾರೆ. ಚುನಾವಣೆಯಲ್ಲಿ ಸೋಲು ಮತ್ತು ಗೆಲುವು ಇದ್ದೇ ಇರುತ್ತೆ. ಪಕ್ಷಕ್ಕೆ ಸೋಲು-ಗೆಲುವು ಹೊಸದಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ 2 ವರ್ಷ ಪೂರೈಸಿದ ಬಿ.ವೈ.ವಿಜಯೇಂದ್ರ: ಹಿರಿಯ ನಾಯಕರಿಂದ ಸನ್ಮಾನ

55
ಸಚಿವ‌ ಪರಮೇಶ್ವರ್ ಹೇಳಿಕೆ
Image Credit : our own

ಸಚಿವ‌ ಪರಮೇಶ್ವರ್ ಹೇಳಿಕೆ

ಸಚಿವ‌ ಪರಮೇಶ್ವರ್ ಹೇಳಿಕೆ ವಿಚಾರ ಗೊತ್ತಿಲ್ಲ. ಸಂಪುಟ ಪುನಾರಚನೆ ಸಿಎಂ ಸರ್ವಾಧಿಕಾರ. ಶಿವಕುಮಾರ್ ಸಲಹೆ ಕೇಳಿದ್ರೆ ಕೊಡ್ತಾರೆ. ಸಿಎಂ ಇದ್ದಾರೆ ನೋಡ್ಕೋತಾರೆ. ಹೈಕಮಾಂಡ್ ಹೇಳಿದನ್ನ ಶಿವಕುಮಾರ್ ಕೇಳ್ತಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕೆಂಬ ಆಸೆ ಡಿಕೆ ಶಿವಕುಮಾರ್ ಅವರಿಗಿಲ್ಲ. ಹೈಕಮಾಂಡ್ ಏನು ಹೇಳ್ತಾರೋ? ಅದನ್ನು ಶಿವಕುಮಾರ್ ಕೇಳುತ್ತಾರೆ ಎಂದರು.

ಇದನ್ನೂ ಓದಿ: ಚುನಾವಣೆಗೆ ಮೊದಲೇ ₹10000 ನೀಡಿದ್ದಕ್ಕೆ ಏಕೆ ಕ್ರಮವಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಡಿ.ಕೆ. ಸುರೇಶ್
ಡಿ.ಕೆ. ಶಿವಕುಮಾರ್
ಕಾಂಗ್ರೆಸ್
ಕರ್ನಾಟಕ ರಾಜಕೀಯ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved