ರಾಜ್ಯಸಭಾ ಎಲೆಕ್ಷನ್: ಖರ್ಗೆ ನಾಮಪತ್ರ ಸಲ್ಲಿಕೆಗೂ ನಡೀತು ಮಹತ್ವದ ಸಭೆ
ಕರ್ನಾಟದ ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯುತ್ತಿರುವುದರಿಂದ ಹೈಕಮಾಂಡ್ ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹಿಸಿ ಬಳಿಕ ಅಭ್ಯರ್ಥಿ ಪಟ್ಟಿ ಪ್ರಕಟಿಸುವುದು ಸಾಮಾನ್ಯ. ಆದ್ರೆ, ಕಾಂಗ್ರೆಸ್ ಹೈಕಮಾಂಡ್ ತನ್ನ ರಾಜ್ಯ ಘಟಕದ ಒಂದೂ ಮಾತು ಕೇಳದೇ, ರಾಜ್ಯ ನಾಯಕರನ್ನು ಸಂಪರ್ಕಿಸದೆ ದಿಢೀರ್ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಕಟಿಸಿದೆ. ಹೈಕಮಾಂಡ್ ತೆಗೆದುಕೊಂಡಿರುವ ಏಕೈಕ ನಿರ್ಧಾರವಿದು. ಅಷ್ಟಕ್ಕೂ ಖರ್ಗೆ ಅವರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಿರುವುದು ಪೂರ್ವ ನಿರ್ಧಾರಿತ ತೀರ್ಮಾನ ಹೌದು. ಇದೀಗ ಖರ್ಗೆ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಮಹತ್ವದ ಸಭೆ ನಡೆದಿದೆ.

<p>ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಸೋಮವಾರ) ನಾಮಪತ್ರ ಸಲ್ಲಿಸಿದರು. </p>
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಸೋಮವಾರ) ನಾಮಪತ್ರ ಸಲ್ಲಿಸಿದರು.
<p>ಈ ವೇಳೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಡಾ.ಜಿ ಪರಮೇಶ್ವರ್ ಸೇರಿದಂತೆ ಹಿರಿಯ ನಾಯಕರು ಖರ್ಗೆಯವರಿಗೆ ಸಾಥ್ ನೀಡಿದರು.</p>
ಈ ವೇಳೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಡಾ.ಜಿ ಪರಮೇಶ್ವರ್ ಸೇರಿದಂತೆ ಹಿರಿಯ ನಾಯಕರು ಖರ್ಗೆಯವರಿಗೆ ಸಾಥ್ ನೀಡಿದರು.
<p>ರಾಜ್ಯಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್. ಆರ್.ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಹಾಗೂ ಪಕ್ಷದ ಇತರ ಶಾಸಕರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.</p>
ರಾಜ್ಯಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್. ಆರ್.ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಹಾಗೂ ಪಕ್ಷದ ಇತರ ಶಾಸಕರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
<p>ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಡೆಸಿದರು.</p>
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
<p>ಬಳಿಕ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಂತರ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 'ಬಿ' ಫಾರಂ ನೀಡಿದರು.</p>
ಬಳಿಕ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಂತರ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 'ಬಿ' ಫಾರಂ ನೀಡಿದರು.
<p>ಇದೇ ವೇಳೆ ಖರ್ಗೆಯವರ ಜತೆ ನಿಂತು ಒಗ್ಗಟ್ಟು ಪ್ರದರ್ಶಿಸಿದರು</p>
ಇದೇ ವೇಳೆ ಖರ್ಗೆಯವರ ಜತೆ ನಿಂತು ಒಗ್ಗಟ್ಟು ಪ್ರದರ್ಶಿಸಿದರು