MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಖರ್ಚಿಗೂ ಹಣವಿಲ್ಲದಂತೆ ಕಾಂಗ್ರೆಸ್‌ ಬ್ಯಾಂಕ್‌ ಖಾತೆ ಸೀಜ್‌ ಮಾಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಖರ್ಚಿಗೂ ಹಣವಿಲ್ಲದಂತೆ ಕಾಂಗ್ರೆಸ್‌ ಬ್ಯಾಂಕ್‌ ಖಾತೆ ಸೀಜ್‌ ಮಾಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಅಕೌಂಟ್ ಬಂದ್ ಮಾಡಿ, ಸಾರ್ವಜನಿಕರು ನೀಡಿದ ದೇಣಿಗೆ ಹಣವನ್ನು ಸೀಜ್ ಮಾಡಿದ್ದಾರೆ. ₹300- ₹400 ಕೋಟಿ ದಂಡ ಹಾಕಿ ಖರ್ಚಿಗೆ ಹಣವಿಲ್ಲದಂತೆ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ. 

1 Min read
Govindaraj S
Published : Mar 17 2024, 07:43 AM IST
Share this Photo Gallery
  • FB
  • TW
  • Linkdin
  • Whatsapp
15

ಕಲಬುರಗಿ (ಮಾ.17): ಕಾಂಗ್ರೆಸ್ ಪಕ್ಷದ ಬ್ಯಾಂಕ್ ಅಕೌಂಟ್ ಬಂದ್ ಮಾಡಿ, ಸಾರ್ವಜನಿಕರು ನೀಡಿದ ದೇಣಿಗೆ ಹಣವನ್ನು ಸೀಜ್ ಮಾಡಿದ್ದಾರೆ. ₹300- ₹400 ಕೋಟಿ ದಂಡ ಹಾಕಿ ಖರ್ಚಿಗೆ ಹಣವಿಲ್ಲದಂತೆ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ. ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್‌ ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

25

ಬಿಜೆಪಿಗೆ ಒಂದೇ ದಿನ 365 ಕೋಟಿ ರು. ಹಣ ಬಂದಿದೆ. ಇದನ್ನು ಕೊಟ್ಟವರು ಯಾರು? ಎಂದು ಪ್ರಶ್ನಿಸಿದ ಖರ್ಗೆ ಬಿಜೆಪಿಗೆ ನ್ಯಾಯಾಲಯ ಸೂಚಿಸಿದರೂ ಸಹ ಚುನಾವಣಾ ಬಾಂಡ್‌ಗಳನ್ನು ಕೊಟ್ಟವರ ಪಟ್ಟಿ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ ಎಂದರು.

35

ಈ ವಿಷಯವಾಗಿ ಸುಪ್ರೀಂಕೋರ್ಟ್‌ ಬಿಜೆಪಿಗೆ ಛೀಮಾರಿ ಹಾಕಿದೆ, ಬಾಂಡ್ ಕೊಟ್ಟವರ ಪಟ್ಟಿ ಕೊಡಿ ಅಂದ್ರೆ ಜುಲೈನಲ್ಲಿ ಕೊಡ್ತಿವಿ ಎಂದು ಬಿಜೆಪಿ ಹೇಳುತ್ತಿದೆ. ಯಾಕಪ್ಪಾ.. ಜುಲೈವರೆಗೆ ಟೈಮ್ ಬೇಕು ನಿಮಗೆ, ಒಂದು ಬಟನ್ ಹೊಡೆದ್ರೆ ಎಲ್ಲರ ಪಟ್ಟಿ ಬಂದ್ ಬಿಡುತ್ತೆ ಆದ್ರೂ ಯಾಕಪ್ಪ ಹಿಂದೇಟು ಎಂದರು. 

45

ಒಂದು ವೇಳೆ ಇ‍ವರು ಪಟ್ಟಿ ಸಲ್ಲಿಸಿದರೆ ಇವರ ಬಂಡವಾಳ ಬಯಲಿಗೆ ಬರುತ್ತೆ. ಯಾರ್‍ಯಾರಿಂದ ಬಾಂಡ್ ತಗೊಂಡು ಬೇರೆ ಕೆಲಸ ಕೊಟ್ಟಿದ್ದಾರೆ ಅನ್ನೋದು ಬಯಲಿಗೆ ಬರುತ್ತೆ. ಇವರ ಧೋರಣೆಗೆ ಬೇಸತ್ತು ಚುನಾವಣಾ ಆಯುಕ್ತರೊಬ್ಬರು ರಾಜೀನಾಮೆ ನೀಡಿದ್ದಾರೆ ಎಂದು ಖರ್ಗೆ ದೂರಿದರು. ಎಲ್ಲಿ ಸಿಕ್ತು ಅಂದ್ರೆ ಅಲ್ಲಿ ಬೆಂಕಿ ಇಡುವ ಕೆಲಸ ಮೋದಿ ಮಾಡ್ತಿದಾರೆ. 

55

ಇಂದಿರಾ ಗಾಂಧಿ ಪಾಕಿಸ್ತಾನ ಎರಡು ಹೋಳು ಮಾಡಿದ್ರು, ಮೋದಿ ಇದುವರೆಗೂ ಒಂದೂ ನೊಣನೂ ಹೊಡೆದಿಲ್ಲ, ಆದ್ರೆ ಆತನ ಪ್ರಚಾರನೇ ಜಾಸ್ತಿ. ಹೇಳಿದಂತೆ ಮಾಡೋದು ಕಷ್ಟ ಇದೆ. ಬೆಂಕಿ ಹಚ್ಚೋದು ಸರಳ ಎಂದು ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಕಾಂಗ್ರೆಸ್
ಕಲಬುರಗಿ
ಮಲ್ಲಿಕಾರ್ಜುನ ಖರ್ಗೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved