MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • MLC Election: ಕಾಂಗ್ರೆಸ್‌ ವಯಸ್ಸಾದ ಪಕ್ಷ, ಅದನ್ನು ವಿಸರ್ಜಿಸಿ: ಸಿಎಂ ಬೊಮ್ಮಾಯಿ

MLC Election: ಕಾಂಗ್ರೆಸ್‌ ವಯಸ್ಸಾದ ಪಕ್ಷ, ಅದನ್ನು ವಿಸರ್ಜಿಸಿ: ಸಿಎಂ ಬೊಮ್ಮಾಯಿ

ಬೀದರ್‌(ಡಿ.06): ನೀವು ನಮಗೆ ಮತ ಕೊಡಿ ನಾನು ನಿಮ್ಮ ಸೇವೆ ಮಾಡುತ್ತೇನೆ. ನಿಮ್ಮ ಸೇವೆ ಮಾಡಿದರಷ್ಟೇ ಮತ್ತೆ ನಾನು ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai ) ಅವರು ಶಪಥ ಮಾಡಿದ್ದಾರೆ.

1 Min read
Kannadaprabha News | Asianet News
Published : Dec 06 2021, 06:19 AM IST
Share this Photo Gallery
  • FB
  • TW
  • Linkdin
  • Whatsapp
14

ಬೀದರ್‌(Bidar) ನಗರದಲ್ಲಿ ಭಾನುವಾರ ವಿಧಾನ ಪರಿಷತ್‌ ಚುನಾವಣಾ(Vidhan Parishat Election) ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಈ ಚುನಾವಣೆ ಕಾಂಗ್ರೆಸ್‌ನ(Congress) ಹಣ ಬಲ, ಬಿಜೆಪಿಯ(BJP) ಜನಬಲದ ನಡುವಿನ ಸಂಘರ್ಷ. ಕಾಂಗ್ರೆಸ್‌ ಹಣ, ತೋಳ್ಬಲದಿಂದ ಗೆಲ್ಲುವ ಭ್ರಮೆಯಲ್ಲಿದೆ. ಪರಿಷತ್‌ ಚುನಾವಣೆಯಲ್ಲಿ ಪಂಚಾಯತ್‌ ಮತದಾರರು ಅದನ್ನು ಸುಳ್ಳು ಮಾಡಲಿದ್ದು, ಬಿಜೆಪಿಯ ಅದ್ಧೂರಿ ಗೆಲುವಿಗೆ ಸಹಕರಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

24

ಕಾಂಗ್ರೆಸ್‌ ವಯಸ್ಸಾದ ಪಕ್ಷ. ಆ ಪಕ್ಷವನ್ನು ವಿಸರ್ಜಿಸುವ ಕಾಲ ಸನ್ನಿಹಿತವಾಗಿದೆ. ಕಾಂಗ್ರೆಸ್‌ ಎಲ್ಲೆಡೆ ಸೋಲುತ್ತಾ ಸಾಗಿದ್ದು, ಇದೀಗ ಮಿತ್ರಪಕ್ಷಗಳೇ ಅದರ ಮೇಲೆ ವಿಶ್ವಾಸ ಮಾಡದೆ ದೂರ ಸಾಗುತ್ತಿರುವಾಗ ಜನತೆ ಹೇಗೆ ವಿಶ್ವಾಸ ಮಾಡಿಯಾರು? ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.

34

ಕಾಂಗ್ರೆಸ್‌ ಕಾಲದಲ್ಲಿ ಕಲ್ಯಾಣ ಕರ್ನಾಟಕ(Kalyana Karnataka) ಭಾಗದಲ್ಲಿ 19 ಸಾವಿರ ಹುದ್ದೆಗಳು ಖಾಲಿ ಇದ್ದವು. ನಮ್ಮ ಅವಧಿಯಲ್ಲಿ ಈಗ ಐದು ಸಾವಿರ ಹುದ್ದೆ ಭರ್ತಿಯಾಗಿದ್ದು, ಇನ್ನುಳಿದ 14 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆ ಅಂತಿಮ ಹಂತದಲ್ಲಿವೆ ಅಂತ ತಿಳಿಸಿದ ಸಿಎಂ ಬೊಮ್ಮಾಯಿ

44

ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದೆ ಬರುತ್ತಿದ್ದೇವೆ. ಅದಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಯನ್ನು ಬೆಂಗಳೂರಿನಿಂದ(Bengaluru) ಕಲಬುರಗಿಗೆ(Kalaburagi) ಸ್ಥಳಾಂತರಿಸಿ ಕಾರ್ಯ ಯೋಜನೆಗಳು ಸರಾಗವಾಗುವಂತೆ ಮಾಡಿದ್ದೇವೆ ಎಂದ ಮುಖ್ಯಮಂತ್ರಿ 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಸವರಾಜ ಬೊಮ್ಮಾಯಿ
ಬೀದರ್
ಚುನಾವಣೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved