MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ‘ಗೂಂಡಾಗಿರಿ ರಾಜಕಾರಣ’ ನಿಲ್ಲಿಸಲು ಜನರ ನಿರ್ಧಾರ: ಕಾಂಗ್ರೆಸ್‌- ಜೆಡಿಎಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆ

‘ಗೂಂಡಾಗಿರಿ ರಾಜಕಾರಣ’ ನಿಲ್ಲಿಸಲು ಜನರ ನಿರ್ಧಾರ: ಕಾಂಗ್ರೆಸ್‌- ಜೆಡಿಎಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು(ಅ.19):  ಕನಕಪುರ ಸೇರಿ ಎಲ್ಲೆಲ್ಲಿಂದಲೋ ಬಂದು ‘ಗೂಂಡಾಗಿರಿ ರಾಜಕಾರಣ’ ಮಾಡುವುದನ್ನು ನಿಲ್ಲಿಸಲು ರಾಜರಾಜೇಶ್ವರಿ ನಗರ ಕ್ಷೇತ್ರದ ಜನ ನಿರ್ಧರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಪರೋಕ್ಷವಾಗಿ ಡಿ.ಕೆ.ಸಹೋದರರ ವಿರುದ್ಧ ಕಿಡಿಕಾರಿದ್ದಾರೆ.

2 Min read
Kannadaprabha News | Asianet News
Published : Oct 19 2020, 09:16 AM IST
Share this Photo Gallery
  • FB
  • TW
  • Linkdin
  • Whatsapp
17
<p>ಭಾನುವಾರ ಪಕ್ಷದ ಕಚೇರಿಯಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಾಜಿ ಪಾಲಿಕೆ ಸದಸ್ಯರು ಹಾಗೂ ಮುಖಂಡರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ಅವರು, ಸ್ವಾಮಿ ನಿಮ್ಮ ಬಳಿ ಬಂಡೆ ಇರಬಹುದು. ಆದರೆ, ಕಾಂಗ್ರೆಸ್‌ನಿಂದ ಬಂದ ಡೈನಮೆಟ್‌ಗಳು ನಮ್ಮ ಬಳಿ ಇವೆ. ಅವು ಬಂಡೆಯನ್ನು ಪುಡಿ ಮಾಡಲಿವೆ. ಕಾಂಗ್ರೆಸ್‌ ಗೂಂಡಾಗಿರಿ ರಾಜಕಾರಣವನ್ನು ಜನ ಸಹಿಸುತ್ತಿಲ್ಲ. ಇದರಿಂದ ಕಾಂಗ್ರೆಸ್‌ ಮನೆ ಈಗ ಖಾಲಿ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.&nbsp;</p>

<p>ಭಾನುವಾರ ಪಕ್ಷದ ಕಚೇರಿಯಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಾಜಿ ಪಾಲಿಕೆ ಸದಸ್ಯರು ಹಾಗೂ ಮುಖಂಡರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ಅವರು, ಸ್ವಾಮಿ ನಿಮ್ಮ ಬಳಿ ಬಂಡೆ ಇರಬಹುದು. ಆದರೆ, ಕಾಂಗ್ರೆಸ್‌ನಿಂದ ಬಂದ ಡೈನಮೆಟ್‌ಗಳು ನಮ್ಮ ಬಳಿ ಇವೆ. ಅವು ಬಂಡೆಯನ್ನು ಪುಡಿ ಮಾಡಲಿವೆ. ಕಾಂಗ್ರೆಸ್‌ ಗೂಂಡಾಗಿರಿ ರಾಜಕಾರಣವನ್ನು ಜನ ಸಹಿಸುತ್ತಿಲ್ಲ. ಇದರಿಂದ ಕಾಂಗ್ರೆಸ್‌ ಮನೆ ಈಗ ಖಾಲಿ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.&nbsp;</p>

ಭಾನುವಾರ ಪಕ್ಷದ ಕಚೇರಿಯಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಾಜಿ ಪಾಲಿಕೆ ಸದಸ್ಯರು ಹಾಗೂ ಮುಖಂಡರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ಅವರು, ಸ್ವಾಮಿ ನಿಮ್ಮ ಬಳಿ ಬಂಡೆ ಇರಬಹುದು. ಆದರೆ, ಕಾಂಗ್ರೆಸ್‌ನಿಂದ ಬಂದ ಡೈನಮೆಟ್‌ಗಳು ನಮ್ಮ ಬಳಿ ಇವೆ. ಅವು ಬಂಡೆಯನ್ನು ಪುಡಿ ಮಾಡಲಿವೆ. ಕಾಂಗ್ರೆಸ್‌ ಗೂಂಡಾಗಿರಿ ರಾಜಕಾರಣವನ್ನು ಜನ ಸಹಿಸುತ್ತಿಲ್ಲ. ಇದರಿಂದ ಕಾಂಗ್ರೆಸ್‌ ಮನೆ ಈಗ ಖಾಲಿ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 

27
<p>ಆರ್‌.ಆರ್‌.ನಗರದ ಜನ ಅಭಿವೃದ್ಧಿ ಬಯಸಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಹಿಂದಿನ ಆರು ವರ್ಷಗಳ ಸರಕಾರದ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿತ್ತು. ರೈತರ ಆತ್ಮಹತ್ಯೆಗಳು ಹೆಚ್ಚಿದ್ದವು. ಸಮಾಜ ಒಡೆಯುವ ಪ್ರವೃತ್ತಿ ಇತ್ತು. ಆದರಿಂದ ಯಾವ ಬಂಡೆಯೂ ನಮಗೆ ಲೆಕ್ಕಕ್ಕಿಲ್ಲ ಎಂದು ಹೇಳಿದ್ದಾರೆ.</p>

<p>ಆರ್‌.ಆರ್‌.ನಗರದ ಜನ ಅಭಿವೃದ್ಧಿ ಬಯಸಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಹಿಂದಿನ ಆರು ವರ್ಷಗಳ ಸರಕಾರದ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿತ್ತು. ರೈತರ ಆತ್ಮಹತ್ಯೆಗಳು ಹೆಚ್ಚಿದ್ದವು. ಸಮಾಜ ಒಡೆಯುವ ಪ್ರವೃತ್ತಿ ಇತ್ತು. ಆದರಿಂದ ಯಾವ ಬಂಡೆಯೂ ನಮಗೆ ಲೆಕ್ಕಕ್ಕಿಲ್ಲ ಎಂದು ಹೇಳಿದ್ದಾರೆ.</p>

ಆರ್‌.ಆರ್‌.ನಗರದ ಜನ ಅಭಿವೃದ್ಧಿ ಬಯಸಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಹಿಂದಿನ ಆರು ವರ್ಷಗಳ ಸರಕಾರದ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿತ್ತು. ರೈತರ ಆತ್ಮಹತ್ಯೆಗಳು ಹೆಚ್ಚಿದ್ದವು. ಸಮಾಜ ಒಡೆಯುವ ಪ್ರವೃತ್ತಿ ಇತ್ತು. ಆದರಿಂದ ಯಾವ ಬಂಡೆಯೂ ನಮಗೆ ಲೆಕ್ಕಕ್ಕಿಲ್ಲ ಎಂದು ಹೇಳಿದ್ದಾರೆ.

37
<p>ತಿಹಾರ್‌ ಜೈಲಿನಲ್ಲಿ ಇದ್ದಾಗ ನೀವು ಇತಿಹಾಸ ಓದಿದ್ದೀರಾ ಅಥವಾ ಬರೆದಿದ್ದೀರಾ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ಮಾರ್ಮಿಕವಾಗಿ ಪ್ರಶ್ನಿಸಿದ ಅವರು, ಜೈಲಿಗೆ ಹೋದಾಗ ಮೆರವಣಿಗೆ, ಜೈಲಿನಿಂದ ಬಂದಾಗ ಮೆರವಣಿಗೆ ಮಾಡುತ್ತೀರಿ. ಜನ ಈಗಾಗಲೇ ನಿಮ್ಮನ್ನು ಮನೆಯಲ್ಲಿ ಕೂರಿಸಿ, ಬಿಜೆಪಿ ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಮುನಿರತ್ನ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಕೋವಿಡ್‌ ಸಂದರ್ಭದಲ್ಲಿ ಕ್ಷೇತ್ರದ ಜನತೆಗೆ ಔಷಧಿ, ಆಹಾರ ಪೊಟ್ಟಣ ವಿತರಣೆ ಮಾಡಿರುವುದನ್ನು ನೋಡಿದರೆ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>

<p>ತಿಹಾರ್‌ ಜೈಲಿನಲ್ಲಿ ಇದ್ದಾಗ ನೀವು ಇತಿಹಾಸ ಓದಿದ್ದೀರಾ ಅಥವಾ ಬರೆದಿದ್ದೀರಾ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ಮಾರ್ಮಿಕವಾಗಿ ಪ್ರಶ್ನಿಸಿದ ಅವರು, ಜೈಲಿಗೆ ಹೋದಾಗ ಮೆರವಣಿಗೆ, ಜೈಲಿನಿಂದ ಬಂದಾಗ ಮೆರವಣಿಗೆ ಮಾಡುತ್ತೀರಿ. ಜನ ಈಗಾಗಲೇ ನಿಮ್ಮನ್ನು ಮನೆಯಲ್ಲಿ ಕೂರಿಸಿ, ಬಿಜೆಪಿ ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಮುನಿರತ್ನ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಕೋವಿಡ್‌ ಸಂದರ್ಭದಲ್ಲಿ ಕ್ಷೇತ್ರದ ಜನತೆಗೆ ಔಷಧಿ, ಆಹಾರ ಪೊಟ್ಟಣ ವಿತರಣೆ ಮಾಡಿರುವುದನ್ನು ನೋಡಿದರೆ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>

ತಿಹಾರ್‌ ಜೈಲಿನಲ್ಲಿ ಇದ್ದಾಗ ನೀವು ಇತಿಹಾಸ ಓದಿದ್ದೀರಾ ಅಥವಾ ಬರೆದಿದ್ದೀರಾ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ಮಾರ್ಮಿಕವಾಗಿ ಪ್ರಶ್ನಿಸಿದ ಅವರು, ಜೈಲಿಗೆ ಹೋದಾಗ ಮೆರವಣಿಗೆ, ಜೈಲಿನಿಂದ ಬಂದಾಗ ಮೆರವಣಿಗೆ ಮಾಡುತ್ತೀರಿ. ಜನ ಈಗಾಗಲೇ ನಿಮ್ಮನ್ನು ಮನೆಯಲ್ಲಿ ಕೂರಿಸಿ, ಬಿಜೆಪಿ ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಮುನಿರತ್ನ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಕೋವಿಡ್‌ ಸಂದರ್ಭದಲ್ಲಿ ಕ್ಷೇತ್ರದ ಜನತೆಗೆ ಔಷಧಿ, ಆಹಾರ ಪೊಟ್ಟಣ ವಿತರಣೆ ಮಾಡಿರುವುದನ್ನು ನೋಡಿದರೆ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

47
<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಂದಾಯ ಸಚಿವ ಆರ್‌.ಅಶೋಕ, ಪಕ್ಷದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಅಭ್ಯರ್ಥಿ ಮುನಿರತ್ನ, ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್‌ ಇದ್ದರು.</p>

<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಂದಾಯ ಸಚಿವ ಆರ್‌.ಅಶೋಕ, ಪಕ್ಷದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಅಭ್ಯರ್ಥಿ ಮುನಿರತ್ನ, ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್‌ ಇದ್ದರು.</p>

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಂದಾಯ ಸಚಿವ ಆರ್‌.ಅಶೋಕ, ಪಕ್ಷದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಅಭ್ಯರ್ಥಿ ಮುನಿರತ್ನ, ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್‌ ಇದ್ದರು.

57
<p>ಮಾಜಿ ಮೇಯರ್‌ ನಾರಾಯಣಸ್ವಾಮಿ, ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀನಿವಾಸಮೂರ್ತಿ, ಜಿ.ಕೆ.ವೆಂಕಟೇಶ್‌, ಆಶಾ ಸುರೇಶ್‌, ವೇಲು ನಾಯ್ಕರ್‌, ಮಂಜುಳಾ ನಾರಾಯಣಸ್ವಾಮಿ, ಸಿದ್ಧಗೌಡ, ಮೋಹನ್‌ಕುಮಾರ್‌, ವೆಂಕಟೇಶ್‌ ಬಾಬು, ಗೋವಿಂದರಾಜು, ರಾಮಚಂದ್ರ, ನಗರಸಭಾ ಮಾಜಿ ಸದಸ್ಯ ಕಮಲೇಶ್‌ ಸೇರಿದಂತೆ ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.</p>

<p>ಮಾಜಿ ಮೇಯರ್‌ ನಾರಾಯಣಸ್ವಾಮಿ, ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀನಿವಾಸಮೂರ್ತಿ, ಜಿ.ಕೆ.ವೆಂಕಟೇಶ್‌, ಆಶಾ ಸುರೇಶ್‌, ವೇಲು ನಾಯ್ಕರ್‌, ಮಂಜುಳಾ ನಾರಾಯಣಸ್ವಾಮಿ, ಸಿದ್ಧಗೌಡ, ಮೋಹನ್‌ಕುಮಾರ್‌, ವೆಂಕಟೇಶ್‌ ಬಾಬು, ಗೋವಿಂದರಾಜು, ರಾಮಚಂದ್ರ, ನಗರಸಭಾ ಮಾಜಿ ಸದಸ್ಯ ಕಮಲೇಶ್‌ ಸೇರಿದಂತೆ ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.</p>

ಮಾಜಿ ಮೇಯರ್‌ ನಾರಾಯಣಸ್ವಾಮಿ, ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀನಿವಾಸಮೂರ್ತಿ, ಜಿ.ಕೆ.ವೆಂಕಟೇಶ್‌, ಆಶಾ ಸುರೇಶ್‌, ವೇಲು ನಾಯ್ಕರ್‌, ಮಂಜುಳಾ ನಾರಾಯಣಸ್ವಾಮಿ, ಸಿದ್ಧಗೌಡ, ಮೋಹನ್‌ಕುಮಾರ್‌, ವೆಂಕಟೇಶ್‌ ಬಾಬು, ಗೋವಿಂದರಾಜು, ರಾಮಚಂದ್ರ, ನಗರಸಭಾ ಮಾಜಿ ಸದಸ್ಯ ಕಮಲೇಶ್‌ ಸೇರಿದಂತೆ ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.

67
<p>ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಆರ್‌.ಆರ್‌.ನಗರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಬಿಎಂಪಿಯ ಮಾಜಿ ಸದಸ್ಯರೂ ಆಗಿರುವ ರಾಮಚಂದ್ರ ಬಿಜೆಪಿಗೆ ವಾಪಸಾದರು.</p>

<p>ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಆರ್‌.ಆರ್‌.ನಗರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಬಿಎಂಪಿಯ ಮಾಜಿ ಸದಸ್ಯರೂ ಆಗಿರುವ ರಾಮಚಂದ್ರ ಬಿಜೆಪಿಗೆ ವಾಪಸಾದರು.</p>

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಆರ್‌.ಆರ್‌.ನಗರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಬಿಎಂಪಿಯ ಮಾಜಿ ಸದಸ್ಯರೂ ಆಗಿರುವ ರಾಮಚಂದ್ರ ಬಿಜೆಪಿಗೆ ವಾಪಸಾದರು.

77
<p>ಸಂಜೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಹಾಲಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ರಾಮಚಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸುವ ಮೂಲಕ ಮನವೊಲಿಸುವಲ್ಲಿ ಸಫಲರಾದರು. ಬಿಜೆಪಿಯಲ್ಲಿ ತಮಗೆ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣಕ್ಕಾಗಿಯೇ ರಾಮಚಂದ್ರ ಅವರು ಕಳೆದ ಚುನಾವಣೆಯಲ್ಲಿ ಜೆಡಿಎಸ್‌ಗೆ ವಲಸೆ ಹೋಗಿದ್ದರು.</p>

<p>ಸಂಜೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಹಾಲಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ರಾಮಚಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸುವ ಮೂಲಕ ಮನವೊಲಿಸುವಲ್ಲಿ ಸಫಲರಾದರು. ಬಿಜೆಪಿಯಲ್ಲಿ ತಮಗೆ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣಕ್ಕಾಗಿಯೇ ರಾಮಚಂದ್ರ ಅವರು ಕಳೆದ ಚುನಾವಣೆಯಲ್ಲಿ ಜೆಡಿಎಸ್‌ಗೆ ವಲಸೆ ಹೋಗಿದ್ದರು.</p>

ಸಂಜೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಹಾಲಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ರಾಮಚಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸುವ ಮೂಲಕ ಮನವೊಲಿಸುವಲ್ಲಿ ಸಫಲರಾದರು. ಬಿಜೆಪಿಯಲ್ಲಿ ತಮಗೆ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣಕ್ಕಾಗಿಯೇ ರಾಮಚಂದ್ರ ಅವರು ಕಳೆದ ಚುನಾವಣೆಯಲ್ಲಿ ಜೆಡಿಎಸ್‌ಗೆ ವಲಸೆ ಹೋಗಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
Recommended image2
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ
Recommended image3
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved