MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಹಿಂದುತ್ವ ಉಳಿವಿಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

ಹಿಂದುತ್ವ ಉಳಿವಿಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

ರಾಜ್ಯದ ಹಿಂದುತ್ವದ ಹೋರಾಟಗಾರರು, ಹಿರಿಯರು ನನ್ನ ಜೊತೆ ಇರುವುದಾಗಿ ಹೇಳಿ ಆಶೀರ್ವಾದ ಮಾಡಿದ್ದಾರೆ. ಶ್ರೀ ಸಾಮಾನ್ಯ ನನಗೆ ಬೆಂಬಲವಾಗಿ ನಿಂತಿರುವುದು ಸ್ಪಷ್ಟವಾಗಿದೆ. ನನಗೆ ಇಷ್ಟೆಲ್ಲ ಬೆಂಬಲ ಸಿಕ್ಕಿರುವಾಗ ನನ್ನ ಗೆಲುವು ನೂರಕ್ಕೆ ನೂರು ಖಚಿತ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. 

1 Min read
Govindaraj S
Published : Apr 11 2024, 05:23 PM IST
Share this Photo Gallery
  • FB
  • TW
  • Linkdin
  • Whatsapp
15

ಬೈಂದೂರು (ಏ.11): ರಾಜ್ಯದ ಹಿಂದುತ್ವದ ಹೋರಾಟಗಾರರು, ಹಿರಿಯರು ನನ್ನ ಜೊತೆ ಇರುವುದಾಗಿ ಹೇಳಿ ಆಶೀರ್ವಾದ ಮಾಡಿದ್ದಾರೆ. ಶ್ರೀ ಸಾಮಾನ್ಯ ನನಗೆ ಬೆಂಬಲವಾಗಿ ನಿಂತಿರುವುದು ಸ್ಪಷ್ಟವಾಗಿದೆ. ನನಗೆ ಇಷ್ಟೆಲ್ಲ ಬೆಂಬಲ ಸಿಕ್ಕಿರುವಾಗ ನನ್ನ ಗೆಲುವು ನೂರಕ್ಕೆ ನೂರು ಖಚಿತ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ  ಕೆ.ಎಸ್.ಈಶ್ವರಪ್ಪ ಹೇಳಿದರು.

25

ಬೈಂದೂರು ವಿಧಾನಸಭಾ ಕ್ಷೇತ್ರದ ಹೆಮ್ಮಾಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಯಿಂದಾಗಿ ಕಾರ್ಯಕರ್ತರು ನೊಂದಿದ್ದಾರೆ. ಹಿಂದುತ್ವದ ಹೋರಾಟಗಾರರು ಎಲ್ಲಿದ್ದಾರೋ ಅದೆಲ್ಲಾ ನನ್ನ ಕರ್ಮಭೂಮಿ. ಹಿಂದುತ್ವ ಉಳಿವಿಗಾಗಿ ನಾನು ಸ್ಪರ್ಧೆ ಮಾಡುತ್ತಿದ್ದು, ಇದರಲ್ಲಿ ಗೆದ್ದೇ, ಗೆಲ್ಲುತ್ತೇನೆ ಎಂಬ ವಿಶ್ವಾಸ ಹೆಚ್ಚಿದೆ ಎಂದು ತಿಳಿಸಿದರು. 

35

ಕ್ಷೇತ್ರದ ಎಲ್ಲಾ ಕಡೆ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದೇನೆ. ಬಿಜೆಪಿ ಕಾರ್ಯಕರ್ತರ ಅಷ್ಟೇ ಅಲ್ಲ. ಕಾಂಗ್ರೆಸ್, ಜೆಡಿಎಸ್ ಪಕ್ಷದ ಕಾರ್ಯಕರ್ತರೂ ನನಗೆ ಬೆಂಬಲ ಕೊಡುವುದಾಗಿ ತೀರ್ಮಾನಿಸಿದ್ದಾರೆ. ಇದಕ್ಕೆ ಅವರ ಪಕ್ಷದವರು ಪ್ರಶ್ನೆ ಮಾಡಿದ್ದಾರೆ.  ಇದೊಂದು ಚುನಾವಣೆ ನಮ್ಮನ್ನು ಬಿಡಿ ನಾವು ಈಶ್ವರಪ್ಪ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯದ ಹಿಂದುತ್ವದ ಹೋರಾಟಗಾರರು, ಹಿರಿಯರು ನನ್ನ ಜೊತೆ ಇರುವುದಾಗಿ ಹೇಳಿ ಆಶೀರ್ವಾದ ಮಾಡಿದ್ದಾರೆ. 

45

ಇಷ್ಟೆಲ್ಲಾ ಬೆಂಬಲ ಪಡೆದಿರುವ ನಾನು ಈ ಬಾರಿ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ‌ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಆರಂಭಿಸಿದಾಗ ಅಮಿತ್ ಶಾ ನಿಲ್ಲಿಸಲು ಸೂಚಿಸಿದರು. ನಾನು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಿದೆ. ಕಳೆದ ಚುನಾವಣೆಯಲ್ಲಿ ಚುನಾವಣೆಯಿಂದ ಹಿಂದೆ ಸರಿಯಲು ಹೇಳಿದರು. 

55

ತಕ್ಷಣ ಕೇಂದ್ರದವರಿಗೆ ಪತ್ರ ಬರೆದು ಹಿಂದೆ ಸರಿದೆ. ಈಗ ಲೋಕಸಭೆಯಲ್ಲಿ ಕಾಂತೇಶ್‌ಗೆ ಹಾವೇರಿಯಲ್ಲಿ ಟಿಕೆಟ್ ಕೊಡುವುದಾಗಿ ಮೋಸ ಮಾಡಿದ್ದಾರೆ. ಪಕ್ಷದಲ್ಲಿ ಹಿಂದುತ್ವ ನಾಯಕರ ಕಡೆಗಣನೆ ಮಾಡಲಾಗುತ್ತಿದೆ. ಇದರ ವಿರುದ್ಧ ಹೋರಾಟ ಮಾಡಲು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ವಿವರಿಸಿದರು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಉಡುಪಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved