MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • Vidhan Parishat Election: ಅಭ್ಯರ್ಥಿ ಬದಲಾಯಿಸಲು ಕಾಂಗ್ರೆಸ್‌ನಲ್ಲೇ ಕುತಂತ್ರ: ಆನಂದ್‌ ಸಿಂಗ್‌

Vidhan Parishat Election: ಅಭ್ಯರ್ಥಿ ಬದಲಾಯಿಸಲು ಕಾಂಗ್ರೆಸ್‌ನಲ್ಲೇ ಕುತಂತ್ರ: ಆನಂದ್‌ ಸಿಂಗ್‌

ಹಗರಿಬೊಮ್ಮನಹಳ್ಳಿ(ಡಿ.03):  ಬಳ್ಳಾರಿ(Ballari) ವಿಧಾನ ಪರಿಷತ್‌ ಕಾಂಗ್ರೆಸ್‌(Congress) ಅಭ್ಯರ್ಥಿಯನ್ನು ಈ ಬಾರಿ ಬದಲಾಯಿಸಬೇಕೆಂದು ಉಭಯ ಜಿಲ್ಲೆಗಳ ಕಾಂಗ್ರೆಸ್‌ ನಾಯಕರಲ್ಲಿ ಕುತಂತ್ರ ನಡೆದಿತ್ತು ಎಂದು ಪ್ರವಾಸೋದ್ಯಮ ರಾಜ್ಯ ಸಚಿವ ಆನಂದ್‌ ಸಿಂಗ್‌(Anand Singh) ಹೇಳಿದರು.

2 Min read
Kannadaprabha News | Asianet News
Published : Dec 03 2021, 02:03 PM IST
Share this Photo Gallery
  • FB
  • TW
  • Linkdin
  • Whatsapp
16

ಪಟ್ಟಣದ ಶ್ರೀಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಂಡಲ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಧಾನ ಪರಿಷತ್‌ ಚುನಾವಣಾ(Vidhan Parishat Election) ಪ್ರಚಾರ(Campaign) ಸಭೆಯಲ್ಲಿ ಅಭ್ಯರ್ಥಿ ವೈ.ಎಂ. ಸತೀಶ್‌ ಪರ ಮತಯಾಚಿಸಿದ ಆನಂದ್‌ ಸಿಂಗ್‌

26

ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಕೊಂಡಯ್ಯಗೆ(KC Kondaiah) ಟಿಕೆಟ್‌ ತಪ್ಪಿಸಲು ಕಾಂಗ್ರೆಸ್‌ನ ಶಾಸಕರು ಹಾಗೂ ಮಾಜಿ ಸಚಿವರು ತಮ್ಮ ಹೈಕಮಾಂಡ್‌ಗೆ ಪತ್ರ ಬರೆಯುವ ಮೂಲಕ ದಲಿತ ಸಮುದಾಯಕ್ಕೆ ಟಿಕೆಟ್‌ ಕೇಳುವ ನಾಟಕವಾಡಿದ್ದರು. ಸ್ವಾರ್ಥ ರಾಜಕೀಯಕ್ಕೆ ಮುಂದಾಗಿರುವ ವಿಷಯ ಸ್ವತಃ ಅಭ್ಯರ್ಥಿ ಕೊಂಡಯ್ಯನವರಿಗೆ ಗೊತ್ತಿದೆ. ಅವರ ಸೋಲು ಖಚಿತವಾಗಿದೆ ಎಂದ ಸಚಿವ ಸಿಂಗ್‌

36

ನಮ್ಮ ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ವೈ.ಎಂ. ಸತೀಶ್‌(YM Satish) ಅವರಿಗೆ ಮತ ನೀಡುವ ಮೂಲಕ ಅವರನ್ನು ಗೆಲ್ಲಿಸುವ ಜೊತೆಗೆ 2023ರ ಚುನಾವಣೆಗೆ ಇದು ದಿಕ್ಸೂಚಿಯಾಗಬೇಕು. ಕೈತಪ್ಪಿ ಹೋಗಿರುವ ಈ ಕ್ಷೇತ್ರ ಸೇರಿದಂತೆ ವಿಜಯನಗರ(Vijayanagara) ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳಲಿದೆ. ವಿಜಯನಗರ ಜಿಲ್ಲೆಯನ್ನು ಮಾಡಲು ಹೊರಟಾಗ, ಇಲ್ಲಿಯ ಶಾಸಕರೊಬ್ಬರು ತಮ್ಮ ಅಸ್ಥಿತ್ವಕ್ಕಾಗಿ ಹಗರಿಬೊಮ್ಮನಹಳ್ಳಿಯನ್ನು ಜಿಲ್ಲೆ ಮಾಡುತ್ತೇನೆಂದು ನನಗೆ ವಿರೋಧಿಸಿದ್ದರು ಎಂದು ಶಾಸಕ ಭೀಮಾನಾಯ್ಕ್‌ ಹೆಸರೇಳದೆ ಕಿಡಿಕಾರಿದ ಆನಂದ್‌ ಸಿಂಗ್‌

46

ಪ್ರಧಾನಮಂತ್ರಿ ಮೋದಿಯಿಂದಾಗಿ(Narendra Modi) ದೇಶದ 115 ಕೋಟಿ ಶ್ರೀಸಾಮಾನ್ಯರಿಗೆ ಈಗಾಗಲೇ ವ್ಯಾಕ್ಸಿನ್‌(Vaccine) ನೀಡಿದ್ದೇವೆ. ಈ ಹಿಂದೆ ಕಾಂಗ್ರೆಸ್‌ನವರು ಇದೇ ವ್ಯಾಕ್ಸಿನ್‌ ಬಗ್ಗೆ ಇಲ್ಲಸಲ್ಲದ ಅಸಂಬದ್ಧ ಟೀಕೆಗಳನ್ನು ಮಾಡಿದ್ದರು. ಆದರೆ, ಇದೀಗ ಅವರೇ ರಾತ್ರೋರಾತ್ರಿ ಹೋಗಿ ವ್ಯಾಕ್ಸಿನ್‌ ಹಾಕಿಸಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ ಸಾರಿಗೆ ಸಚಿವ ಶ್ರೀರಾಮುಲು 

56

ಮಾಜಿ ಶಾಸಕ ಕೆ. ನೇಮಿರಾಜನಾಯ್ಕ್‌, ಸಿದ್ದೇಶ ಯಾದವ್‌ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಹಾಗೂ ಲೋಕಸಭಾ ಸದಸ್ಯ ದೇವೇಂದ್ರಪ್ಪ, ಪಕ್ಷದ ಅಭ್ಯರ್ಥಿ ವೈ.ಎಂ. ಸತೀಶ್‌ ಪರ ಮತಯಾಚಿಸಿದರು.

66

ಮಂಡಲಾಧ್ಯಕ್ಷ ವೀರೇಶ ಸ್ವಾಮಿ, ಮಾಜಿ ಅಧ್ಯಕ್ಷ ನೆರೆಗಲ್‌ ಕೊಟ್ರೇಶ, ಉಪಾಧ್ಯಕ್ಷ ಪಿ. ರಾಜಲಿಂಗಪ್ಪ, ಮುಖಂಡರಾದ ಭದ್ರವಾಡಿ ಚಂದ್ರಶೇಖರ, ಕಿನ್ನಾಳ ಸುಭಾಷ್‌, ಪಿ. ಸೂರ್ಯಬಾಬು, ಮಹಿಪಾಲ್‌, ಸಚ್ಚಿದಾನಂದ ಗೌಡ, ಪುರಸಭೆ ಮಾಜಿ ಅಧ್ಯಕ್ಷರಾದ ರಾಘವೇಂದ್ರ, ಜೋಗಿ ಹನುಮಂತ, ವ್ಯಾಸನಕೇರಿ ಶ್ರೀನಿವಾಸ, ಬಡಿಗೇರ ಬಸವರಾಜ, ಮೃತ್ಯುಂಜಯ ಬದಾಮಿ, ಚಿತ್ತವಾಡ್ಗಿ ಪ್ರಕಾಶ್‌, ಬಲ್ಲಾಹುಣಸಿ ರಾಮಣ್ಣ, ನವೀನ್‌, ಕನಕಪ್ಪ, ಕೃಷ್ಣನಾಯ್ಕ, ಸಿದ್ದಲಿಂಗನಗೌಡ, ಮಹೇಂದ್ರ, ಬಿ. ಗಂಗಾಧರ, ರುದ್ರಮುನಿ, ರೋಹಿತ್‌, ಎಸ್‌.ಟಿ. ಮೋರ್ಚಾ ಅಧ್ಯಕ್ಷ ಪ್ರಕಾಶ್‌, ಎಸ್‌.ಸಿ. ಮೋರ್ಚಾಧ್ಯಕ್ಷ ಗಣೇಶ, ವೆಂಕಟೇಶ, ಸರ್ದಾರ ಯಮನೂರ್‌, ರಾಹುಲ್‌ ಸೇರಿದಂತೆ ತಾಲೂಕಿನ ಗ್ರಾಪಂ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಳ್ಳಾರಿ
ಕಾಂಗ್ರೆಸ್
ಚುನಾವಣೆ

Latest Videos
Recommended Stories
Recommended image1
ಅರಾವಳಿ ಉಳಿಸಿ: ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
Recommended image2
ಫೇಕ್ ನ್ಯೂಸ್ ಹರಡಿದರೇ ಐಟಿ ಸಚಿವ ಪ್ರಿಯಾಂಕ್ ಖರ್ಗೆ?: ಬಿಜೆಪಿ ಕಿಡಿ, ಬೇಷರತ್ ಕ್ಷಮೆಗೆ ಆಗ್ರಹ
Recommended image3
ಸಾಕ್ಷರತೆಯಲ್ಲಿ ನಂ:1 ರಾಜ್ಯವಾದ್ರೂ, ರಾಹುಕಾಲಕ್ಕೆ ಹೆದರಿಕೆ; ಕಚೇರಿಯೊಳಗೆ ಹೋಗಲು ಹಿಂಜರಿದ ಅಧ್ಯಕ್ಷೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved