MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ

ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಸರ್ಕಾರದ ಆಡಳಿತವನ್ನು 'ಸತ್ತ ಹೆಣ'ಕ್ಕೆ ಹೋಲಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜ ಕ್ಷೇತ್ರದ ಜನರಿಗೆ ಉಪದ್ರವ ನೀಡುವ ಜನಪ್ರತಿನಿಧಿಗಳು ಬೇಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಾ ಶೈಲಿಯೇ ಕಾರ್ಯಕರ್ತರ ದುರ್ವರ್ತನೆಗೆ ಕಾರಣ ಎಂದು ಆರೋಪಿಸಿದ್ದಾರೆ.

2 Min read
Author : Gowthami K
Published : Jan 15 2026, 03:04 PM IST
Share this Photo Gallery
  • FB
  • TW
  • Linkdin
  • Whatsapp
16
ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿಗಳು ಬೇಡ
Image Credit : our own

ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿಗಳು ಬೇಡ

ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ರಾಜಕೀಯ, ಚಾಮರಾಜ ಕ್ಷೇತ್ರದ ಭವಿಷ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಆದರೆ ಉಪದ್ರ ನೀಡುವ ಜನಪ್ರತಿನಿಧಿಗಳು ಬೇಕಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

26
ಕಾಂಗ್ರೆಸ್ ನ ವಾಸು ಅಭಿವೃದ್ಧಿ ಸ್ನೇಹಿ ಶಾಸಕ
Image Credit : Asianet News

ಕಾಂಗ್ರೆಸ್ ನ ವಾಸು ಅಭಿವೃದ್ಧಿ ಸ್ನೇಹಿ ಶಾಸಕ

ಚಾಮರಾಜ ಕ್ಷೇತ್ರದ ಜನಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ. ಉಪದ್ರ ನೀಡುವ ಜನಪ್ರತಿನಿಧಿಗಳು ಬೇಕಿಲ್ಲ. ವಿದ್ಯಾವಂತರೆ ಇರುವ ಚಾಮರಾಜ ಕ್ಷೇತ್ರದ ಜನರಿಗೆ ವಿದ್ಯಾವಂತರೆ ಪ್ರತಿನಿಧಿ ಆಗಲು ಬಯಸುತ್ತಾರೆ. ಬಿಜೆಪಿಯ ಶಂಕರಲಿಂಗೇಗೌಡ ಜನಸ್ನೇಹಿ ಶಾಸಕ. ಕಾಂಗ್ರೆಸ್ ನ ವಾಸು ಅಭಿವೃದ್ಧಿ ಸ್ನೇಹಿ ಶಾಸಕ. ಇವರಿಬ್ಬರೂ ನನಗೆ ಸದಾ ಸ್ಮರಣೀಯರು. ನಾನು ಚಾಮರಾಜ ಕ್ಷೇತ್ರದ ಆಕಾಂಕ್ಷಿ. ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಆಕಾಂಕ್ಷಿಗೂ ಅಭ್ಯರ್ಥಿಗೂ ವ್ಯತ್ಯಾಸ ಗೊತ್ತಿಲ್ಲದೆ ಕೆಲವರು ಏನೇನೋ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.

Related Articles

Related image1
ನಿಮ್ಮದೇನಿದ್ದರೂ ರಾಜ್ಯ ದಿವಾಳಿ ಮಾಡಿದ್ದೇ ಸಾಧನೆ: ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವ್ಯಂಗ್ಯ
Related image2
ಚಾಮರಾಜ ಕ್ಷೇತ್ರಕ್ಕಾಗಿ ಪ್ರತಾಪ್ ಸಿಂಹ vs ಎಲ್ ನಾಗೇಂದ್ರ ಕಿತ್ತಾಟ, ಬಿಜೆಪಿಗೆ ತಲೆನೋವು ತಂದ ಆಂತರಿಕ ಗಲಾಟೆ!
36
ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ‘ಪುಡಾರಿಯನ್ನು ಒದ್ದು ಒಳಗೆ ಹಾಕಿ’
Image Credit : Asianet News

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ‘ಪುಡಾರಿಯನ್ನು ಒದ್ದು ಒಳಗೆ ಹಾಕಿ’

ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಅಧಿಕಾರಿಗೆ ಬೆದರಿಕೆ ಹಾಕುವ ಪುಡಾರಿಗಳನ್ನು ಕಠಿಣವಾಗಿ ಶಿಕ್ಷಿಸಬೇಕು ಎಂದು ಆಗ್ರಹಿಸಿದರು. ಅಧಿಕಾರಿಗೆ ಧಮ್ಕಿ ಹಾಕಿದವನನ್ನು ಒದ್ದು ಒಳಗೆ ಹಾಕಬೇಕು. ಸಿಎಂ ಸಿದ್ದರಾಮಯ್ಯ ಅವರ ಬಾಯೇ ಬಚ್ಚಲಾಗಿದೆ. ಅವರೇ ಯಾರಿಗೂ ಮರ್ಯಾದೆ ಕೊಡಲ್ಲ. ಅದನ್ನೇ ಅವರ ಪಕ್ಷದ ಕಾರ್ಯಕರ್ತರೂ ಅನುಸರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

46
ಮುಖ್ಯಮಂತ್ರಿ ಬಳಸುವ ಭಾಷೆಯೇ ಕಾರ್ಯಕರ್ತರ ವರ್ತನೆಗೆ ಕಾರಣ
Image Credit : Pratap Simha FB

ಮುಖ್ಯಮಂತ್ರಿ ಬಳಸುವ ಭಾಷೆಯೇ ಕಾರ್ಯಕರ್ತರ ವರ್ತನೆಗೆ ಕಾರಣ

ಮುಖ್ಯಮಂತ್ರಿ ಬಳಸುವ ಭಾಷೆಯೇ ಕಾರ್ಯಕರ್ತರ ವರ್ತನೆಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ ಅವರು, ಸಿದ್ದರಾಮಯ್ಯ ಅವರ ಭಾಷೆ ಸರಿಯಾಗಿದ್ದರೆ, ಅವರ ಕಾರ್ಯಕರ್ತರ ಭಾಷೆಯೂ ಸರಿಯಾಗಿರುತ್ತಿತ್ತು. ಹಿಂದೆಯೂ ಐಎಎಸ್ ಅಧಿಕಾರಿಗೆ ಸಿದ್ದರಾಮಯ್ಯ ಅವರ ಭಂಟರು ನಿಂದಿಸಿದ್ದರು. ಇಂತಹ ಅನೇಕ ಘಟನೆಗಳು ನಡೆದಿವೆ. ಈಗಲೂ ಅದೇ ಸಂಸ್ಕೃತಿ ಮುಂದುವರಿದಿದೆ” ಎಂದು ಹೇಳಿದರು. ರಾಜ್ಯವನ್ನು ಮೊದಲು ಫ್ಲೆಕ್ಸ್ ಮುಕ್ತ ಮಾಡಬೇಕು ಎಂದು ಆಗ್ರಹಿಸಿದ ಪ್ರತಾಪ್ ಸಿಂಹ, ನನ್ನ ಫೋಟೋ ಇದ್ದರೂ ಕೂಡ ಫ್ಲೆಕ್ಸ್‌ಗಳನ್ನು ತೆಗೆಸಬೇಕು ಎಂದು ಸ್ಪಷ್ಟಪಡಿಸಿದರು.

56
‘ರಾಜ್ಯದಲ್ಲಿ ಆಡಳಿತ ಸತ್ತಿದೆ’ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
Image Credit : Pratap Simha FB

‘ರಾಜ್ಯದಲ್ಲಿ ಆಡಳಿತ ಸತ್ತಿದೆ’ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿದ ಪ್ರತಾಪ್ ಸಿಂಹ, ಕಾಂಗ್ರೆಸ್ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಆಡಳಿತ ಸತ್ತಿದೆ. ಆ ಸತ್ತ ಆಡಳಿತದ ಹೆಣವನ್ನು ಸಿದ್ದರಾಮಯ್ಯ ಮುಂದೆ ಹೊತ್ತಿದ್ದಾರೆ, ಡಿ.ಕೆ. ಶಿವಕುಮಾರ್ ಹಿಂದೆ ಹೊತ್ತಿದ್ದಾರೆ. ಆಡಳಿತದ ಹೆಣವನ್ನು ಮುಂದೆ ಹೊರುವ ಪ್ರಯತ್ನವನ್ನು ಡಿಕೆ ಮಾಡುತ್ತಿದ್ದಾರೆ. ಹೆಣವನ್ನು ಮುಂದೆ ಯಾರಾದರೂ ಹೊರಲಿ, ಹಿಂದೆ ಯಾರಾದರೂ ಹೊರಲಿ – ಅದರಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಎಂದಿಗೂ ದೇವರಾಜ ಅರಸು ಆಗಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಸಿದ್ದರಾಮಯ್ಯ ಬಹಳ ಬೇಗ ಜನರ ಮನಸ್ಸಿನಿಂದ ದೂರಾಗುತ್ತಾರೆ. ಜನರು ಅವರನ್ನು ಮರೆಯುವ ದಿನಗಳು ಬಹಳ ದೂರವಿಲ್ಲ ಎಂದು ಹೇಳಿದರು. ಡಿ.ಕೆ. ಶಿವಕುಮಾರ್ ಜೊತೆಗೆ ಪೈಪೋಟಿ ನಡೆಸುತ್ತಾ ಕೆಲ ದಿನಗಳು ಮಾತ್ರ ತಮ್ಮ ಸ್ಥಾನ ಉಳಿಸಿಕೊಳ್ಳಬಹುದು ಎಂದು ಟೀಕಿಸಿದ ಪ್ರತಾಪ್ ಸಿಂಹ, “ಅದರಿಂದ ಯಾವುದೇ ಪ್ರಯೋಜನ ಇಲ್ಲ” ಎಂದರು.

66
‘ಜನರ ತಪ್ಪಿನಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ’
Image Credit : Asianet News

‘ಜನರ ತಪ್ಪಿನಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ’

ಕಳೆದ ಚುನಾವಣೆಯಲ್ಲಿ ಜನರು ಮಾಡಿದ ತಪ್ಪಿನಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಪ್ರತಾಪ್ ಸಿಂಹ ಹೇಳಿದರು. “ಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತವನ್ನು ಜನರು ಸಹಿಸಿಕೊಳ್ಳಲೇಬೇಕು. ಈ ಸರ್ಕಾರ ಬೀಳುವುದಿಲ್ಲ. ಕುರ್ಚಿಯಲ್ಲಿ ಕುಳಿತುಕೊಳ್ಳುವವರು ಮಾತ್ರ ಬದಲಾಗಬಹುದು” ಎಂದು ಅವರು ವ್ಯಂಗ್ಯವಾಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ರಾಜಕೀಯ ಸುದ್ದಿ
ಕರ್ನಾಟಕ ರಾಜಕೀಯ
ಸುದ್ದಿ
ಪ್ರತಾಪ್ ಸಿಂಹ

Latest Videos
Recommended Stories
Recommended image1
ರಾಹುಲ್ ಗಾಂಧಿ ಮುಂದೆ ಡಿಕೆ-ಸಿದ್ದು ಹಾಕಿರೋ ಪಟ್ಟುಗಳೇನು? ಸಂಕ್ರಾಂತಿ ಬಳಿಕ ಯಾರ ಜೊತೆಗಿದೆ ಗ್ರಹಬಲದ ಶಕ್ತಿ?
Recommended image2
ಸಂಕ್ರಾಂತಿ ದಿನವೇ ರಾಜಕಾರಣದ ಪಥ ಬದಲಿಸಿದ ಕುಮಾರಣ್ಣ; 2028ಕ್ಕೆ ರಾಜ್ಯ ರಾಜಕಾರಣಕ್ಕೆ ರೀ-ಎಂಟ್ರಿ ಖಚಿತ!
Recommended image3
ಸರ್ಕಾರ ಸತ್ತು ಹೋಗಿದೆ, ಸತ್ತ ಆಡಳಿತದ ಹೆಣವನ್ನ ಸಿದ್ದರಾಮಯ್ಯ ಮುಂದೆ, ಡಿಕೆಶಿ ಹಿಂದೆ ಹೊತ್ತಿದ್ದಾರೆ- ಪ್ರತಾಪ್ ಸಿಂಹ
Related Stories
Recommended image1
ನಿಮ್ಮದೇನಿದ್ದರೂ ರಾಜ್ಯ ದಿವಾಳಿ ಮಾಡಿದ್ದೇ ಸಾಧನೆ: ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವ್ಯಂಗ್ಯ
Recommended image2
ಚಾಮರಾಜ ಕ್ಷೇತ್ರಕ್ಕಾಗಿ ಪ್ರತಾಪ್ ಸಿಂಹ vs ಎಲ್ ನಾಗೇಂದ್ರ ಕಿತ್ತಾಟ, ಬಿಜೆಪಿಗೆ ತಲೆನೋವು ತಂದ ಆಂತರಿಕ ಗಲಾಟೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved