ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ: ದೆಹಲಿ ಮಟ್ಟದಲ್ಲಿ ಈಶ್ವರಪ್ಪ ಬ್ಯಾಟಿಂಗ್
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ) ಸೇರ್ಪಡೆ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವರುಗಳನ್ನ ಭೇಟಿ ಮಾಡಿ ಚರ್ಚಿಸಿತು.ಸಮುದಾಯದ ಸ್ವಾಮೀಜಿಗಳ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆದರು.
ಇಂದು (ಮಂಗಳವಾರ) ನವದೆಹಲಿಯಲ್ಲಿ ಕೇಂದ್ರ ಬುಡಕಟ್ಟು ಜನಾಂಗದ ವ್ಯವಹಾರಗಳ ಸಚಿವ ರಾದ ರೇಣುಕಾ ಸಿಂಗ್ ಸರುತಾ ರವರನ್ನು ಭೇಟಿ ಮಾಡಿ ST ಬೇಡಿಕೆಯ ಮನವಿ ಸಲ್ಲಿಸಿದರು.
![article_image2](https://static-ai.asianetnews.com/images/01eqxjvq7rq44fyy04mp1x4wcg/126179417-1789937554491929-5193889565715708235-o-jpg_300x177xt.jpg)
ಶ್ರೀಶ್ರೀಶ್ರೀ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮಿಗಳು ಶ್ರೀಮಠ ಕಾಗಿನೆಲೆ ಕನಕಗುರುಪೀಠ, ಕಾಗಿನೆಲೆ ಮತ್ತು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀಶ್ರೀಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶ್ರೀಶ್ರೀಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು..
ಕುರುಬರ ST ಹೋರಾಟ ಸಮಿತಿ ಕರ್ನಾಟಕ ನಿಯೋಗದಿಂದ ಕೇಂದ್ರ ಸಚಿವ ಪ್ರಲ್ಹಾದ ಜೊಶಿಯವರ ಭೇಟಿ
ನಂತರ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿರವರನ್ನು ಭೇಟಿ ಮಾಡಿ ST ಬೇಡಿಕೆಯ ಮನವಿಯನ್ನ ಸಲ್ಲಿಸಲಾಯಿತು.
ಕನಕಗುರುಪೀಠ, ಕಾಗಿನೆಲೆ ಮತ್ತು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀಶ್ರೀಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶ್ರೀಶ್ರೀಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುರುಬರನ್ನು ಎಸ್.ಟಿ. ಸೇರಿಸುವ ಕುರಿತು ಮನವಿ ಮಾಡಲಾಯಿತು. ಸಮಾಜದ ಎಲ್ಲ ಪ್ರಮುಖ ಮುಖಂಡರು ಭಾಗವಹಿಸಿದ್ದರು.