ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ: ದೆಹಲಿ ಮಟ್ಟದಲ್ಲಿ ಈಶ್ವರಪ್ಪ ಬ್ಯಾಟಿಂಗ್
First Published Nov 24, 2020, 10:34 PM IST
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ) ಸೇರ್ಪಡೆ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವರುಗಳನ್ನ ಭೇಟಿ ಮಾಡಿ ಚರ್ಚಿಸಿತು.ಸಮುದಾಯದ ಸ್ವಾಮೀಜಿಗಳ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆದರು.

ಇಂದು (ಮಂಗಳವಾರ) ನವದೆಹಲಿಯಲ್ಲಿ ಕೇಂದ್ರ ಬುಡಕಟ್ಟು ಜನಾಂಗದ ವ್ಯವಹಾರಗಳ ಸಚಿವ ರಾದ ರೇಣುಕಾ ಸಿಂಗ್ ಸರುತಾ ರವರನ್ನು ಭೇಟಿ ಮಾಡಿ ST ಬೇಡಿಕೆಯ ಮನವಿ ಸಲ್ಲಿಸಿದರು.

ಶ್ರೀಶ್ರೀಶ್ರೀ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮಿಗಳು ಶ್ರೀಮಠ ಕಾಗಿನೆಲೆ ಕನಕಗುರುಪೀಠ, ಕಾಗಿನೆಲೆ ಮತ್ತು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀಶ್ರೀಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶ್ರೀಶ್ರೀಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು..
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?