MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಎನ್‌ಡಿಆರ್‌ಎಫ್ ಹಣಕ್ಕಾಗಿ ಸುಪ್ರೀಂಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ: ಬೊಮ್ಮಾಯಿ

ಎನ್‌ಡಿಆರ್‌ಎಫ್ ಹಣಕ್ಕಾಗಿ ಸುಪ್ರೀಂಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ: ಬೊಮ್ಮಾಯಿ

ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಆರೋಪಿಸುತ್ತಿದೆ. 

1 Min read
Govindaraj S
Published : Mar 27 2024, 08:02 AM IST
Share this Photo Gallery
  • FB
  • TW
  • Linkdin
  • Whatsapp
16

ಹುಬ್ಬಳ್ಳಿ (ಮಾ.27): ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ.

26

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಆರೋಪಿಸುತ್ತಿದೆ. ಅದರ ಬದಲು ಹಿಂದೆ ಎಷ್ಟು ಬಂದಿತ್ತು. ಈಗ ಎಷ್ಟು ಬಂದಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದರು.

36

ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್‌ಗೆ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು.

46

ರಾಜ್ಯದಲ್ಲಿ ಬಿಜೆಪಿ ವಾತಾವರಣ ಉತ್ತಮವಾಗಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತಿದೆ. ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ ಎಂದರು.

56

ಸೆಲೆಬ್ರಿಟಿಗಳು ಬರುತ್ತಾರೆ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆ ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ, ಪ್ರವಾಸದ ನಿರ್ಧಾರ ಆಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದರು.

66

ರೆಡ್ಡಿ ಬಲ: ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ ಎಂದರು. ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಅನ್ನುವ ಸಚಿವ ಸಂತೋಷ್ ಲಾಡ್ ಹೇಳಿಕೆಗೆ, ಅದು ಅವರ ಅನುಭವದ ಮಾತು ಎಂದು ತಿರುಗೇಟು ನೀಡಿದರು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ
ಸುಪ್ರೀಂ ಕೋರ್ಟ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved