ಸಚಿವ ಸ್ಥಾನ ಹೋದ್ರೆನಂತೆ..ಸಂಪುಟ ದರ್ಜೆ ಸ್ಥಾನಮಾನ ಸಿಕ್ತು: ಅಧಿಕಾರ ಸ್ವೀಕರಿಸಿದ ನಾಗೇಶ್
ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಸಮಾಧಾನಗೊಂಡಿದ್ದ ಎಚ್.ನಾಗೇಶ್ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ಅವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಗೇಶ್ ಅವರು ಅಧಿಕಾರ ಸ್ವೀಕರಿಸಿದರು.
ಸಿಎಂ ಕೊಟ್ಟ ಭರವಸೆಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಿಕ್ಕಿದೆ.
ನಾಗೇಶ್ ಅವರನ್ನ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅದಂತೆ ನಾಗೇಶ್ ಅವರು ಇಂದು (ಶುಕ್ರವಾರ) ಅಂಬೇಡ್ಕರ್ ಅಭಿವೃದ್ಧಿ ನಿಗಮ ದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ನಿಗಮದ ಚಾರ್ಜ್ ತೆಗೆದುಕೊಂಡ ನಾಗೇಶ್
ಇತ್ತೀಚಿಗೆ ಸಚಿವ ಸ್ಥಾನಕ್ಕೆ ನಾಗೇಶ್ ರಿಂದ ರಾಜೀನಾಮೆ ಪಡೆದಿದ್ದ ಸಿಎಂ, ಆ ನಂತರ ನಾಗೇಶ್ ರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಬಿಎಸ್ವೈ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ನಾಗೇಶ್ ಇದೀಗ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು