ಸಿದ್ದರಾಮಯ್ಯವರ 'CM' ಕುರ್ಚಿ ಎಷ್ಟು ಭದ್ರ? ಪಾಲನಹಳ್ಳಿ ಶ್ರೀಗಳ ಕಾಲಚಕ್ರ ಭವಿಷ್ಯ
ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಭದ್ರತೆಯ ಕುರಿತುು ಪಾಲನಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಅಕ್ಟೋಬರ್ ನಂತರ ರಾಜಕೀಯ ಸಂಘರ್ಷ ಏರ್ಪಟ್ಟು, ಫೆಬ್ರವರಿಯಲ್ಲಿ ಅಂತ್ಯವಾಗಲಿದೆ ಎಂದಿದ್ದಾರೆ. ಕಾಲಚಕ್ರದ ಆಧಾರದ ಮೇಲೆ ರಾಜಕೀಯ ಭವಿಷ್ಯ ನುಡಿದಿದ್ದಾರೆ.

ಸಿಎಂ ಸಿದ್ದರಾಮಯಯ್ಯ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜ್ಯ ರಾಜಕಾರಣದಲ್ಲಿ ಪವರ್ ಶೇರಿಂಗ್ ಎಂಬಿತ್ಯಾದಿ ಮಾತುಗಳು ಕೇಳುತ್ತಿರುತ್ತವೆ. ಇದೀಗ ಮಾಗಡಿ ತಾಲೂಕಿನ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿಗಳು ರಾಜ್ಯ ರಾಜಕಾರಣದ ಕುರಿತು ಭವಿಷ್ಯವನ್ನು ನುಡಿದಿದ್ದಾರೆ.
ಕರ್ನಾಟಕ ರಾಜಕಾರಣದಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆಯೂ ಶ್ರೀ ಸಿದ್ದರಾಜು ಸ್ವಾಮೀಜಿಗಳು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ 'ಬಂಡೆ'ಗಿಂತ ಭದ್ರವಾಗಿದೆ ಎಂದು ಹೇಳುವ ಮೂಲಕ ಈ ಅವಧಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ ಎಂಬ ಸುಳಿವು ನೀಡಿದ್ದಾರೆ. ಅಕ್ಟೋಬರ್ 28ರ ನಂತರ ರಾಜ್ಯ ರಾಜಕಾರಣದಲ್ಲಿ ಸಂಘರ್ಷ ಏರ್ಪಡಲಿದ್ದು, ಫೆಬ್ರವರಿಯಲ್ಲಿ ಇದೆಲ್ಲವೂ ಅಂತ್ಯವಾಗಲಿದೆ ಎಂದು ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ: ಇಸ್ಲಾಂ ಎಂದರೆ ಶಾಂತಿ, ಬಸವಣ್ಣ ಅವರ ರೀತಿಯಲ್ಲಿ ಪ್ರವಾದಿ ಕೆಲಸ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ
ಏನೇ ತಿಕ್ಕಾಟವಾದ್ರೂ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ನಾಡದೊರೆಗೆ ಯಾವುದೇ ಕಂಟಕ ಇಲ್ಲ. ಯಾವುದೇ ಪ್ರಭಾವಿ ನಾಯಕರು ಸಿಎಂ ಕುರ್ಚಿ ಕಸಿದುಕೊಳ್ಳಲು ಪ್ರಯತ್ನಿಸಿದರೂ ಅದು ಫಲಪ್ರದವಾಗಲ್ಲ. ಇದೆಲ್ಲವೂ ಕಾಲಚಕ್ರ ಎಂದು ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿಗಳು ಹೇಳಿದ್ದಾರೆ.
ಇದನ್ನೂ ಓದಿ: ಒಂದು ಕಾಲದಲ್ಲಿ ಶೂದ್ರರು ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಭಾಷಣ
ಋತು ಚಕ್ರ ಮತ್ತು ಗ್ರಹಗತಿ ಆಧಾರದ ಮೇಲೆ ಪ್ರಾಚೀನರು ಈ ಕಾಲಚಕ್ರವನ್ನು ಅನ್ವೇಷಿಸಿದ್ದಾರೆ. ಈ ಕಾಲಚಕ್ರ ಮನುಷ್ಯನ ಸುಖ-ದುಃಖ, ಪ್ರವಾಹ, ಪ್ರಕೃತಿ ವಿಕೋಪ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಭವಿಷ್ಯವನ್ನು ಹೇಳುತ್ತದೆ. ಈ ಸಂವತ್ಸರ ಹಲವು ವೈಶಿಷ್ಟ್ಯಗಳಿಂದ ಕೂಡಿದ್ದು, ರಾಶಿಯ ಸಂಕೇತದಂತೆ ಅಧಿಕಾರದ ವ್ಯತ್ಯಾಸಗಳಾಗುತ್ತವೆ ಎಂದಿದ್ದಾರೆ.
ಇದನ್ನೂ ಓದಿ: ಸೀಟ್ ಬೆಲ್ಟ್ ಧರಿಸದೇ ಸಂಚಾರ, 50% ಡಿಸ್ಕೌಂಟ್ನಲ್ಲಿ ದಂಡ ಪಾವತಿ ಮಾಡಿದ ಸಿಎಂ ಸಿದ್ಧರಾಮಯ್ಯ!