MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • RSSಗೆ ಅವಮಾನ ಮಾಡಿದ್ದು ನಾನಲ್ಲ, ಮುನಿರತ್ನ; ಡಿಸಿಎಂ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್

RSSಗೆ ಅವಮಾನ ಮಾಡಿದ್ದು ನಾನಲ್ಲ, ಮುನಿರತ್ನ; ಡಿಸಿಎಂ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್

DK Shivakumar vs Munirathna clash: ಡಿಸಿಎಂ ಡಿಕೆ ಶಿವಕುಮಾರ್ ಅವರ 'ಬೆಂಗಳೂರು ನಡಿಗೆ' ಕಾರ್ಯಕ್ರಮದ ವೇಳೆ ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ ಹೈಡ್ರಾಮಾ ನಡೆಯಿತು. ಸಾರ್ವಜನಿಕ ಸಂವಾದ ವೇದಿಕೆಗೆ ಆರ್‌ಎಸ್‌ಎಸ್ ಗಣವೇಷದಲ್ಲಿ ಬಂದ ಶಾಸಕ ಮುನಿರತ್ನ ಹಾಗೂ ಡಿಕೆಶಿ ನಡುವೆ ಮಾತಿನ ಚಕಮಕಿ ನಡೆಯಿತು. 

2 Min read
Author : Mahmad Rafik
Published : Oct 12 2025, 10:50 AM IST
Share this Photo Gallery
  • FB
  • TW
  • Linkdin
  • Whatsapp
15
ಡಿಕೆ ಶಿವಕುಮಾರ್ ಭೇಟಿ
Image Credit : Asianet News

ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ 'ಬೆಂಗಳೂರು ನಡಿಗೆ' ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ. ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆಯಿತು.

25
ಆರ್‌ಎಸ್‌ಎಸ್ ಸಂಸ್ಥೆಗೆ ಅವಮಾನ
Image Credit : Asianet News

ಆರ್‌ಎಸ್‌ಎಸ್ ಸಂಸ್ಥೆಗೆ ಅವಮಾನ

ಆರ್‌ಎಸ್‌ಎಸ್ ಸಂಸ್ಥೆಗೆ ಅವಮಾನ ಮಾಡಿದ್ದಾರೆ. ಶಾಸಕರಾಗಿ ಬಂದು ವೇದಿಕೆ ಮೇಲೆ ಮಾತನಾಡಬಹುದಿತ್ತು. ಗಣವೇಷಧಾರಿಯಾಗಿ ಇಲ್ಲಿಗೆ ಬರುವ ಮೂಲಕ ಆರ್‌ಎಸ್‌ಎಸ್‌ ಸಂಸ್ಥೆಗೆ ಅವಮಾನಿಸಿದ್ದಾರೆ. ಇದ್ಯಾವ ಶಿಲಾನ್ಯಾಸ ಕಾರ್ಯಕ್ರಮ ಅಲ್ಲ. ಇದು ಸಾರ್ವಜನಿಕರ ಕಾರ್ಯಕ್ರಮವಾಗಿದ್ದು, ಯಾರು ಬೇಕಾದ್ರೂ ಇಲ್ಲಿಗೆ ಬರಬಹುದು. ನಿನ್ನೆ ಲಾಲ್‌ಬಾಗ್‌ ನಡಿಗೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಬಂದಿದ್ದರು. ಪಬ್ಲಿಸಿಟಿಗಾಗಿ ಮುನಿರತ್ನ ಇಲ್ಲಿಗೆ ಬಂದಿದ್ದಾರೆ ಎಂದು ಆರೋಪಿಸಿದರು.

Related Articles

Related image1
Now Playing
ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್
Related image2
Now Playing
Bengaluru: ಶಾಸಕ ಮುನಿರತ್ನ ಹಾಗೂ ಬೆಂಬಲಿಗರಿಗೆ ರಿಲೀಫ್
35
ಆರೋಪಕ್ಕೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್
Image Credit : Asianet News

ಆರೋಪಕ್ಕೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್

ಮಾಧ್ಯಮಗಳ ಜೊತೆ ಮಾತನಾಡಿದ ಮುನಿರತ್ನ, ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಲಾಗಿತ್ತು ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ಸಂಬಂಧಪಟ್ಟ ಸಂಸ್ಥೆಗಳಲ್ಲಿ ದೂರು ದಾಖಲಿಸಲಿ ಎಂದರು. ಜನರೇ ಅವರನ್ನು ಹೊರಗೆ ಕಳುಹಿಸುವ ಪ್ರಯತ್ನ ಮಾಡಿದರು ಎಂದರು.

45
1533 ಸಂಖ್ಯೆಗೆ ಕರೆ ಮಾಡಿ
Image Credit : Asianet News

1533 ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು ನಾಗರೀಕರ ಜೊತೆ ನಡೆಯಬೇಕೆಂದು ಎಲ್ಲಾ ನಾಗರಿಕರಿಗೂ ಆಹ್ವಾನ ನೀಡಿದ್ದೇನೆ. ಸಾರ್ವಜನಿಕರು 1533 ಸಂಖ್ಯೆಗೆ ಕರೆ ಮಾಡಿ ಸಮಸ್ಯೆಯನ್ನು ದಾಖಲಿಸಬಹುದು. ಜೆಪಿ ಪಾರ್ಕಿನಲ್ಲಿ ಹಲವು ಕೆಲಸಗಳು ಅರ್ಧಕ್ಕೆ ನಿಂತಿರೋದು ನೋಡಿ ಬೇಸರವಾಗಿದೆ. ಆದ್ರೂ ಪರವಾಗಿಲ್ಲ, ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಸಂವಾದ ಕಾರ್ಯಕ್ರಮ ವಿಳಂಬವಾಗಿದ್ದಕ್ಕೆ ಸಾರ್ವಜನಿಕರಲ್ಲಿ ಡಿಕೆ ಶಿವಕುಮಾರ್ ಕ್ಷಮೆ ಕೇಳಿದರು.

ಇದನ್ನೂ ಓದಿ: 55 ವರ್ಷದ ನಂತರ ಬಾಲ್ಯದ ಗೆಳೆಯನನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್

55
GBA ಮೀಟಿಂಗ್ ಗೆ ಬಂದಿಲ್ಲ
Image Credit : Asianet News

GBA ಮೀಟಿಂಗ್ ಗೆ ಬಂದಿಲ್ಲ

ಇದು ಜನರ ಸಮಸ್ಯೆ ಆಲಿಸುವ ಕಾರ್ಯಕ್ರಮವಾಗಿತ್ತು. ಎಲ್ಲರಿಗೆ ಏನು ಗೌರವ ಕೊಡಬೇಕು ಅದು ಕೊಟ್ಟಿದ್ದೇವೆ. GBA ಮೀಟಿಂಗ್ ಗೆ ಬಂದಿಲ್ಲ, ಅಲ್ಲಿ ಬಂದು ಸಮಸ್ಯೆ ಹೇಳಿಲ್ಲ. ಇಲ್ಲಿ ಬಂದು ಈ ರೀತಿ ಮಾತಾಡ್ತಿದ್ದಾರೆ ಎಂದು ಮುನಿರತ್ನ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಏಯ್‌ ಕರಿ ಟೋಪಿ MLA ಬಾರಯ್ಯ: ಗಣವೇಷಧಾರಿ ಮುನಿರತ್ನರನ್ನ ಕರೆದ ಡಿಕೆಶಿ; ವೇದಿಕೆ ಮೇಲೆ ಹೈಡ್ರಾಮಾ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಡಿ.ಕೆ. ಶಿವಕುಮಾರ್
ಆರ್‌ಎಸ್‌ಎಸ್‌
ಬಿಜೆಪಿ
ಕಾಂಗ್ರೆಸ್
ಕರ್ನಾಟಕ ಸುದ್ದಿ
ಕರ್ನಾಟಕ ರಾಜಕೀಯ

Latest Videos
Recommended Stories
Recommended image1
ಶಿವಾಜಿ ಮೆರವಣಿಗೆಗೆ ಎಸೆದರು ಸ್ಟೋನ್; ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಎಂಟ್ರಿ ಬ್ಯಾನ್; ಜಿಲ್ಲಾಧಿಕಾರಿ ಆದೇಶ!
Recommended image2
ಕನಕ್ಲೂಷನ್‌ಗೆ ಬಂದಿದ್ದೇವೆ, ಕರ್ನಾಟಕ ಅಧಿಕಾರ ಗೊಂದಲ ಕುರಿತು ಮಲ್ಲಿಕಾರ್ಜುನ ಖರ್ಗೆ ಬಿಗ್ ಅಪ್‌ಡೇಟ್
Recommended image3
ಡಿಕೆ ಪಟ್ಟದ ಸುತ್ತ ಇಂದ್ರಪ್ರಸ್ಥದಲ್ಲಿ ಸಾಹುಕಾರನ ವ್ಯೂಹ! ಸೈಲೆಂಟ್​ ಆಗಿಯೇ ಕೆಪಿಸಿಸಿ ಪಟ್ಟಕ್ಕೆ ಸ್ಕೆಚ್ ಹಾಕಿದ್ರಾ ಸತೀಶ್..?
Related Stories
Recommended image1
Now Playing
ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್
Recommended image2
Now Playing
Bengaluru: ಶಾಸಕ ಮುನಿರತ್ನ ಹಾಗೂ ಬೆಂಬಲಿಗರಿಗೆ ರಿಲೀಫ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved