ದೇವೇಗೌಡರಿಗೆ ಮುತ್ತಿಕ್ಕಿ ಜನ್ಮದಿನದ ಶುಭಾಶಯ ಕೋರಿದ ಜಮೀರ್ ಅಹಮದ್
ಬೆಂಗಳೂರು (ಮೇ 19): ರಾಜ್ಯ ರಾಜಕಾರಣದಲ್ಲಿ ರಾಜಕೀಯ ಜೀವನಕ್ಕೆ ತಳಪಾಯ ಹಾಕಿಕೊಟ್ಟ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿ ಜನ್ಮದಿನದ ಅಂಗವಾಗಿ, ಕಾಂಗ್ರೆಸ್ ಶಾಸಕ ಬಿ.ಝಡ್. ಜಮೀರ್ ಅಹಮದ್ ಖಾನ್ ಕೈಗೆ ಮುತ್ತಿಟ್ಟು ಶುಭಾಶಯ ಕೋರಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿ ಜನ್ಮದಿನದ ಅಂಗವಾಗಿ, ಕಾಂಗ್ರೆಸ್ ಶಾಸಕ ಬಿ.ಝಡ್. ಜಮೀರ್ ಅಹಮದ್ ಖಾನ್ ಕೈಗೆ ಮುತ್ತಿಟ್ಟು ಶುಭಾಶಯ ಕೋರಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರ ಹುಟ್ಟು ಹಬ್ಬಕ್ಕೆ ಮನೆಗೆ ಹೋಗಿ ಶುಭಾಶಯ ಕೋರಿದ ಜಮೀರ್ ಅಹಮದ್ ಜೊತೆಯಲ್ಲಿ ಕುಳಿತು ಊಟ ಮಾಡಿದರು. ಈ ವೇಳೆ ಚನ್ನಮ್ಮ ದೇವೇಗೌಡ, ಹೆಚ್.ಡಿ. ರೇವಣ್ಣ ಕೂಡ ಸಾಥ್ ನೀಡಿದರು.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗಲ್ಲಿ ಗಲ್ಲಿಯಲ್ಲಿ ಚುನಾವಣಾ ಪ್ರಚಾರ ಮಾಡಿ ಜಮೀರ್ ಅಹಮದ್ ಅವರನ್ನು ದೇವೇಗೌಡರು ಮೊದಲ ಬಾರಿ ಗೆಲ್ಲಿಸಿದ್ದರು.
ದೇವೇಗೌಡರ ಪುತ್ರ ಕುಮಾರಸ್ವಾಮಿ ಅವರೊಂದಿಗೆ ವೈಯಕ್ತಿಕ ಕಾರಣಗಳಿಂದ ವೈಮನಸ್ಸು ಉಂಟಾದ ಕಾರಣ ಜಮೀರ್ ಅಹಮದ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.
ರಾಜ್ಯದ ಮುಖ್ಯಮಂತ್ರಿಗಳಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕಾಂಗಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಶಾಸಕ ಜಮೀರ್ ಅಹಮದ್ ಖಾನ್ ಅಭಿನಂದನೆಗಳನ್ನು ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.