MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • Annamalai: ಅಣ್ಣಾಮಲೈ ಹೊಸ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ! ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

Annamalai: ಅಣ್ಣಾಮಲೈ ಹೊಸ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ! ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

ಬಿಜೆಪಿ ತೊರೆದ ಕೆ. ಅಣ್ಣಾಮಲೈ 'ವಿ ದ ಲೀಡರ್ಸ್' ಎಂಬ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸಿದ್ದಾರೆ. ಕೆಲವೇ ಗಂಟೆಗಳಲ್ಲಿ 8 ಲಕ್ಷಕ್ಕೂ ಹೆಚ್ಚು ಜನರು ಸ್ವಯಂಸೇವಕರಾಗಿ ನೋಂದಾಯಿಸಿಕೊಂಡಿದ್ದು, ಸಮಾಜ ಸಬಲೀಕರಣ ಮತ್ತು ಸ್ಥಳೀಯ ಮಟ್ಟದಲ್ಲಿ ಬದಲಾವಣೆ ತರುವುದು ಈ ಅಭಿಯಾನದ ಮುಖ್ಯ ಗುರಿಯಾಗಿದೆ.

2 Min read
Author : Sathish Kumar KH
Published : Jun 05 2026, 09:49 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Facebook

ಬಿಜೆಪಿ ತೊರೆದು ಹೊಸ ರಾಜಕೀಯ ಚಳವಳಿಗೆ ಚಾಲನೆ ನೀಡಿರುವ ಕೆ. ಅಣ್ಣಾಮಲೈ (K Annamalai) ಅವರಿಗೆ ಆರಂಭದಲ್ಲೇ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಅಣ್ಣಾಮಲೈ ಅವರ 'ವಿ ದ ಲೀಡರ್ಸ್' ( (We The Leaders Movement) ಎಂಬ ಹೊಸ ಅಭಿಯಾನಕ್ಕೆ ಸ್ವಯಂಸೇವಕರಾಗಿ ಸೇರಲು 8 ಲಕ್ಷಕ್ಕೂ ಹೆಚ್ಚು ಮಂದಿ ತಮ್ಮ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಬಿಜೆಪಿ ತೊರೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಅವರು ಈ ಚಳವಳಿ ಆರಂಭಿಸಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : X

ಸಮಾಜವನ್ನು ಸಬಲೀಕರಣಗೊಳಿಸುವುದು, ನಾಯಕತ್ವ ಗುಣಗಳನ್ನು ಬೆಳೆಸುವುದು ಮತ್ತು ಸ್ಥಳೀಯ ಮಟ್ಟದಲ್ಲಿ ಅರ್ಥಪೂರ್ಣ ಬದಲಾವಣೆಗಳನ್ನು ತರುವುದೇ 'ವಿ ದ ಲೀಡರ್ಸ್' ಅಭಿಯಾನದ ಗುರಿ ಎಂದು ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಶಿಕ್ಷಣ, ಆರೋಗ್ಯ, ಸುಸ್ಥಿರತೆ ಮತ್ತು ಯುವ ನಾಯಕತ್ವದಲ್ಲಿ ಆಸಕ್ತಿ ಇರುವವರು ತಮ್ಮೊಂದಿಗೆ ಕೈಜೋಡಿಸಬಹುದು ಎಂದು ಅಣ್ಣಾಮಲೈ ಕರೆ ನೀಡಿದ್ದಾರೆ.

Related Articles

Related image1
BJP ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ IPS ಅಧಿಕಾರಿ ಅಣ್ಣಾಮಲೈ ಸಂಪತ್ತು ಇಷ್ಟೊಂದಾ? ADR ರಿಪೋರ್ಟ್‌ನಲ್ಲಿ ಬಯಲಾಯ್ತು ಸತ್ಯ
Related image2
ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
36
Image Credit : X

ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವ ಮೂಲಕ ಉತ್ತಮ ನಾಳೆ ನಿರ್ಮಿಸಲು ಎಲ್ಲರೂ ಒಂದಾಗೋಣ ಎಂದು ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ. ‘ನಾವು ಮುಂದೆ ಬರೋಣ, ಕಾರ್ಯಪ್ರವೃತ್ತರಾಗೋಣ ಮತ್ತು ಬದಲಾವಣೆಯ ಚಾಲಕಶಕ್ತಿಯಾಗೋಣ’ ಎಂಬ ಸಾಲುಗಳೊಂದಿಗೆ ಅಣ್ಣಾಮಲೈ ತಮ್ಮ 'ಎಕ್ಸ್' ಖಾತೆಯಲ್ಲಿ ವೆಬ್‌ಸೈಟ್ ಲಿಂಕ್ ಹಂಚಿಕೊಂಡಿದ್ದಾರೆ.

46
Image Credit : BJp

ಈ ಹೊಸ ರಾಜಕೀಯ ಚಳವಳಿಯ ಭಾಗವಾಗಿ, ಕೊಯಮತ್ತೂರಿನಲ್ಲಿ 'ಎಪಿಜೆ ಅಬ್ದುಲ್ ಕಲಾಂ ಸೆಂಟರ್ ಫಾರ್ ಎಥಿಕ್ಸ್ ಅಂಡ್ ಪಾಲಿಟಿಕ್ಸ್' ಎಂಬ ಸಂಸ್ಥೆಯನ್ನು ಆರಂಭಿಸುವುದಾಗಿಯೂ ಅಣ್ಣಾಮಲೈ ಘೋಷಿಸಿದ್ದಾರೆ. 'ನಾವು ಬದಲಾಗೋಣ, ಬದಲಾವಣೆ ತರೋಣ' ಎನ್ನುವುದು ಈ ಚಳವಳಿಯ ಮೂಲತತ್ವ. ವ್ಯಕ್ತಿ ಪೂಜೆಯ ರಾಜಕಾರಣದ ಬದಲು, ಜನರ ಅಗತ್ಯಗಳಿಗೆ ಆದ್ಯತೆ ನೀಡುವ ಸಾಮಾನ್ಯರ ರಾಜಕೀಯವನ್ನು ಕಟ್ಟುವುದಾಗಿ ಅಣ್ಣಾಮಲೈ ಹೇಳಿದ್ದಾರೆ. 

ತಾವು ಯಾರೊಂದಿಗೂ ಸ್ಪರ್ಧೆ ಮಾಡುತ್ತಿಲ್ಲ, ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮ ನೀತಿಗಳನ್ನು ಹೇಳಲಿ, ನಾವು ನಮ್ಮ ನೀತಿಗಳನ್ನು ಸರಿಯಾದ ಸಮಯದಲ್ಲಿ ಸ್ಪಷ್ಟಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

56
Image Credit : ANI

ಹಲವು ದಿನಗಳ ಊಹಾಪೋಹಗಳಿಗೆ ತೆರೆ ಎಳೆದಿದ್ದ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಪಕ್ಷ ತೊರೆದು ಹೊಸ ರಾಜಕೀಯ ಚಳವಳಿ ಆರಂಭಿಸುವ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಘೋಷಿಸಿದ್ದರು. ಬಿಜೆಪಿಯ ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಬಳಿಕವೇ ಅಣ್ಣಾಮಲೈ ಪಕ್ಷದಿಂದ ಹೊರಬಂದಿದ್ದಾರೆ. ಒಬ್ಬ ಹೆಮ್ಮೆಯ ತಮಿಳಿಗ ಮತ್ತು ಭಾರತೀಯನಾಗಿ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು, ತಮಿಳುನಾಡಿನ ಹಿತಾಸಕ್ತಿಗಳಿಗೆ ಆದ್ಯತೆ ನೀಡುವುದನ್ನು ಮುಂದುವರಿಸುವುದಾಗಿ ಅಣ್ಣಾಮಲೈ ಹೇಳಿದ್ದಾರೆ.

66
Image Credit : X

ಇದೇ ವೇಳೆ, ದೆಹಲಿಯಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಣ್ಣಾಮಲೈ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿತು. ಶುಕ್ರವಾರ ಸಂಜೆ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಹೂವು, ಬೊಕ್ಕೆಗಳನ್ನು ನೀಡಿ ಸ್ವಾಗತಿಸಲು ನೂರಾರು ಮಂದಿ ನೆರೆದಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಅಣ್ಣಾಮಲೈ
ತಮಿಳುನಾಡು
ಬಿಜೆಪಿ
ರಾಜಕೀಯ ಸುದ್ದಿ
Latest Videos
Recommended Stories
Recommended image1
25 ಲಕ್ಷ ಸೈನಿಕರು, 141 ಸ್ಥಾನಗಳ ಗುರಿ! 2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು 'ವಿಜಯವ್ಯೂಹ'?
Recommended image2
ಮಗ ಸಿಎಂ ವಿಜಯ್ ಬಗ್ಗೆ ಅಮ್ಮ ಶೋಭಾ ಚಂದ್ರಶೇಖರ್ ಹೇಳಿದ್ದೇನು? ಈ ಸೀಕ್ರೆಟ್ ಇನ್ನೂತನಕ ಹೊರಬಿದ್ದಿರಲಿಲ್ಲ!
Recommended image3
ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ, ಆದ್ರೆ.., ಅಸಮಾಧಾನದ ಅಸಲಿ ವಿಷಯ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!
Related Stories
Recommended image1
BJP ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ IPS ಅಧಿಕಾರಿ ಅಣ್ಣಾಮಲೈ ಸಂಪತ್ತು ಇಷ್ಟೊಂದಾ? ADR ರಿಪೋರ್ಟ್‌ನಲ್ಲಿ ಬಯಲಾಯ್ತು ಸತ್ಯ
Recommended image2
ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved