ಯಡಿಯೂರಪ್ಪ ಸಂಪುಟದ ನೂತನ ಸಾರಥಿಗಳ ಪ್ರಮಾಣ ವಚನದ ಫೋಟೋಗಳು
ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು (ಬುಧವಾರ) ಮೂರನೇ ಬಾರಿಗೆ ವಿಸ್ತರಣೆಯಾಗಿದ್ದು, ಏಳು ಜನರು ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಇಂದೇ 82ನೇ ಜನ್ಮದಿನ ಆಚರಿಸಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ರಾಜಭವನದಲ್ಲಿ ಇಂದು (ಬುಧವಾರ) ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು 7 ಜನರಿಗೆ ಬೋಧನೆ ಮಾಡಿದರು
ಹುಕ್ಕೇರಿ ಎಂಎಲ್ಎ ಉಮೇಶ್ ಕತ್ತಿ ಅವರು ದೇವರು ಮತ್ತು ರೈತ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮಹದೇವಪುರ ಕ್ಷೇತ್ರದ ಅರವಿಂದ ಲಿಂಬಾವಳಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಹೊಸಕೋಟೆ ಕ್ಷೇತ್ರದಲ್ಲಿ ಸೋತು ವಿಧಾನಪರಿಷತ್ಗೆ ನೇಮಕಗೊಂಡಿರುವ ಎಂಟಿಬಿ ನಾಗರಾಜ್ ಅವರಿಗೆ ರಾಜ್ಯಪಾಲ ವಜುಭಾಯಿ ಪ್ರತಿಜ್ಞಾವಿಧಿ ಬೋಧಿಸಿದರು
ಬಿಳಗಿ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಪರಿಷತ್ ಸದಸ್ಯ ಆರ್. ಶಂಕರ ಅವರಿಗೆ ರಾಜ್ಯಪಾಲ ವಜುಭಾಯಿ ಪ್ರತಿಜ್ಞಾವಿಧಿ ಬೋಧಿಸಿದರು
ಮತ್ತೋರ್ವ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರ ಮಾಡಿದರು.
ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.