ಚಿತ್ರಗಳು: ಕೊರೋನಾ ಗೆದ್ದ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು (ಸೋಮವಾರ) ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ಆಗಸ್ಟ್ 2ರಂದು ಬಿಎಸ್ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾಗಿದ್ದರು, ಬಳಿಕ ನೀಡಿದ ಚಿಕಿತ್ಸೆ ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದರಿಂದ ಯಡಿಯೂರಪ್ಪನವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೊರೋನಾ ವೈರಸ್ನಿಂದಾಗಿ ಆಗಸ್ಟ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ ಯಡಿಯೂರಪ್ಪನವರು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ಗೂ ಮುನ್ನ ಮಣಿಪಾಲ್ ವೈದ್ಯ ಸಿಬ್ಬಂದಿ ಜತೆ ಸಿಎಂ ಮಾತುಕತೆ ನಡೆಸಿದರು.
ಈ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಬಿ.ಎಸ್. ಯಡಿಯೂರಪ್ಪ ಧನ್ಯವಾದ ಹೇಳಿದ್ದಾರೆ.
ಆಸ್ಪತ್ರೆಯಲ್ಲಿದ್ದ ಎಲ್ಲ ವೈದ್ಯರು, ನರ್ಸ್ ಸ್ಟಾಫ್, ಕ್ಲೀನಿಂಗ್ ಸ್ಟಾಫ್, ಕ್ಯಾಂಟೀನ್ ಸಿಬ್ಬಂದಿಯನ್ನೂ ಸೇರಿದಂತೆ ಎಲ್ಲರಿಗೂ ಕೈ ಮುಗಿದು ಮಾತನಾಡಿಸಿದ ಬಿಎಸ್ವೈ ಊಟ ಹಾಗೂ ಉಪಹಾರ ಚೆನ್ನಾಗಿತ್ತು ಎಂದು ಕ್ಯಾಂಟೀನ್ ಸಿಬ್ಬಂದಿಯನ್ನ ಹೊಗಳಿದ್ದಾರೆ.
ಮುಖ್ಯಮಂತ್ರಿಗಳ ಜೊತೆ ಕೆಲ ವೈದ್ಯರು ಹಾಗೂ ಸಿಬ್ಬಂದಿ ಫೋಟೋ ತೆಗೆಸಿಕೊಂಡಿದ್ದಾರೆ.
ಕೊರೋನಾ ವೈರಸ್ನಿಂದಾಗಿ ಆಗಸ್ಟ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ ಯಡಿಯೂರಪ್ಪ
ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಎಸ್ ಯಡಿಯೂರಪ್ಪನವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದೆ.