MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • Modi Bengaluru Roadshow: ಮೋದಿ ಮತ್ತೊಂದು ಪವರ್ ಶೋ, ಬೆಂಗಳೂರಿಗರು ಫುಲ್ ಖುಷ್!

Modi Bengaluru Roadshow: ಮೋದಿ ಮತ್ತೊಂದು ಪವರ್ ಶೋ, ಬೆಂಗಳೂರಿಗರು ಫುಲ್ ಖುಷ್!

ಬೆಂಗಳೂರು (ಮೇ.7): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭಾನುವಾರ ಯಶಸ್ವಿ ರೋಡ್‌ ಶೋ ನಡೆಸಿದ್ದಾರೆ.  ಭಾನುವಾರ  ನಗರದ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 6.5 ಕಿ.ಮೀ. ರೋಡ್‌ ಶೋ ನಡೆಸಿದ್ದಾರೆ. ಮೋದಿ ಅವರ ರೋಡ್‌ ಶೋ ನಲ್ಲಿ ದಾರಿಯುದ್ದಕ್ಕೂ ಅಭಿಮಾನಿಗಳು ಮೋದಿ ಮೋದಿ ಘೋಷಣೆ ಕೂಗಿದ್ದಾರೆ.ಫೋಟೋ ಕೃಷೆ: ರವಿ, ಕನ್ನಡಪ್ರಭ

2 Min read
Gowthami K
Published : May 07 2023, 08:08 PM IST| Updated : May 07 2023, 08:11 PM IST
Share this Photo Gallery
  • FB
  • TW
  • Linkdin
  • Whatsapp
116

ಪ್ರಧಾನಿ ನರೇಂದ್ರ ಮೋದಿಗೆ, ಪಿಸಿ ಮೋಹನ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸಾಥ್ ನೀಡಿದ್ದರು. 

216

ಪ್ರಧಾನಿ ಮೋದಿ ಅವರ ಎರಡನೇ ದಿನದ  ರೋಡ್ ಶೋ ಹಿನ್ನೆಲೆ ದಾರಿಯುದ್ದಕ್ಕೂ ಕಟ್ಟುನಿಟ್ಟಿನ ಭಿಗಿ ಭದ್ರತೆ ಕೈಗೊಳ್ಳಲಾಗಿತ್ತು. 

316

ತುಂತುರು ಮಳೆಯ ನಡುವೆಯೇ ಅಪಾರ ಸಂಖ್ಯೆಯಲ್ಲಿ ಸೇರಿದ ಜನರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿ ಹರ್ಷವ್ಯಕ್ತಪಡಿಸಿದರು.

416

ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿಯಲ್ಲಿ ಈ ರೋಡ್‌ ಶೋ ಹಮ್ಮಿಕೊಂಡಿದ್ದರು.

516

ಒಂದೇ ದಿನ ರೋಡ್‌ ಶೋ ಮಾಡಿದರೆ, ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಎರಡು ದಿನಕ್ಕೆ ರೋಡ್‌ ಶೋ ವಿಸ್ತರಿಸಲಾಗಿತ್ತು.

616

ಶನಿವಾರ ಪ್ರಧಾನಿ ನರೇಂದ್ರ ಮೋದಿ ರಾಜಧಾನಿಯಲ್ಲಿ 26 ಕಿ.ಮೀ. ಭರ್ಜರಿ ರೋಡ್‌ ಶೋ ನಡೆಸಿದ್ದರು. ಭಾನುವಾರ ಕೂಡ ಮದ್ಯಾಹ್ನವರೆಗೆ ರೋಡ್ ಶೋ ನಲ್ಲಿ ಭಾಗವಹಿಸಿದ್ದರು. 

716

ಮತ್ತೆ ಬೆಂಗಳೂರು ಜನರ ನಡುವೆ ಇರುವುದು ಆನಂದದ ಸಂಗತಿ.ಇಂದು ನಮ್ಮನ್ನು ಆಶೀರ್ವದಿಸಲು ಬಂದಿರುವ ಎಲ್ಲರಿಗೂ ಕೃತಜ್ಞತೆಗಳು- ಕನ್ನಡದಲ್ಲಿ ಮೋದಿ ಟ್ವೀಟ್  

816

ರಾಜಭವನದಿಂದ ನೇರವಾಗಿ ರಸ್ತೆ ಮೂಲಕ ಬಂದ ಮೋದಿ ನ್ಯೂ ತಿಪ್ಪಸಂದ್ರಕ್ಕೆ ಆಗಮಿಸಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್​​ಶೋಗೆ ಚಾಲನೆ ನೀಡಿದರು.

916

ಬೆಂಗಳೂರಿನಲ್ಲಿ ಇಂದು ರೋಡ್ ಶೋವನ್ನು ನಾಡಪ್ರಭು ಕೆಂಪೆಗೌಡ ಅವರಿಗೆ ಗೌರವನಮನ ಸಲ್ಲಿಸುವುದರೊಂದಿಗೆ ಆರಂಭಿಸಿದೆ. ಅವರ ಶ್ರೀಮಂತ ದೃಷ್ಟಿಕೋನವನ್ನು ಸ್ಮರಿಸಿದೆವು ಮತ್ತು ಅದನ್ನು ಈಡೇರಿಸುವತ್ತ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದೆವು. - ಮೋದಿ ಕನ್ನಡದಲ್ಲಿ ಟ್ವೀಟ್ 

1016

ಬೆಳಗ್ಗೆ 10 ಗಂಟೆಗೆ ನ್ಯೂ ತಿಪ್ಪಸಂದ್ರದ ಕೆಂಪೇಗೌಡ ಪ್ರತಿಮೆಯಿಂದ ಆರಂಭವಾಗುವ ರೋಡ್‌ ಶೋ ಬಳಿಕ ಬೆಮಲ್‌ ಗೇಟ್‌, 80 ಅಡಿ ರಸ್ತೆ, 12ನೇ ಮುಖ್ಯರಸ್ತೆ, ಇಎಸ್‌ಐ ಆಸ್ಪತ್ರೆ ಜಂಕ್ಷನ್‌, 

1116

ದೊಮ್ಮಲೂರು 12ನೇ ಮುಖ್ಯರಸ್ತೆ, ಜೋಗುಪಾಳ್ಯ, ಚಿನ್ಮಯ ಮಿಷನ್‌ ಆಸ್ಪತ್ರೆ ರಸ್ತೆ, ಲಕ್ಷ್ಮೇಪುರ, ಹಲಸೂರು, ಟ್ರಿನಿಟಿ ಜಂಕ್ಷನ್‌ನಲ್ಲಿ ಅಂತ್ಯಗೊಂಡಿತು.

1216

ಬಿಳಿ ಕುರ್ತಾ,   ಶಾಲು ಧರಿಸಿದ್ದ ಮೋದಿ ಜನರತ್ತ ಕೈ ಬೀಸುತ್ತಾ,  ಕೈಮುಗಿಯುತ್ತಾ ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ದಿನದ ಭರ್ಜರಿ ರೋಡ್‌ ಶೋ ನಡೆಸಿದರು.

1316

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆನೂ ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಮೋದಿ ಮಾಡಿರುವ ರೋಡ್‌ ಶೋ ದಾಖಲೆ ಎನಿಸಿಕೊಂಡಿದೆ.

1416

ದಾರಿಯುದ್ಧಕ್ಕೂ ಕಲಾಪ್ರಕಾರಗಳ ಮೆರುಗು, ಪುಷ್ಪವೃಷ್ಟಿಯೊಂದಿಗೆ ಪ್ರಧಾನಿ ನರೇಂದ್ರ  ಮೋದಿ ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಯಿತು.
 

1516

ನಿನ್ನೆ ಮೋದಿ ರೋಡ್ ಮಿಸ್ ಆದ ಹಿನ್ನೆಲೆ. ಬೆಳಗ್ಗೆಯೇ ಕುಟುಂಬ ಸಮೇತ ಇಂದಿರಾನಗರ ಚಿನ್ಮಯ ಜಂಕ್ಷನ್ ಗೆ ಬಂದು ಮೋದಿ ಅಭಿಮಾನಿಗಳು ಕಣ್ತುಂಬಿಕೊಂಡರು.

1616

ಆರೂವರೆ ಕಿಲೋಮೀಟರ್ ನಡೆದ ರೋಡ್​ ಶೋ. ಒಂದು ಗಂಟೆ 30 ನಿಮಿಷ  ನಡೆಯಿತು.  ಟ್ರಿನಿಟ್ ಸರ್ಕಲ್​ನಲ್ಲಿ ರೋಡ್ ಶೋ ಮುಕ್ತಾಯವಾಯ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ಚುನಾವಣೆ

Latest Videos
Recommended Stories
Recommended image1
Now Playing
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Recommended image2
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Recommended image3
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved