MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಲೋಕಸಭಾ ಚುನಾವಣೆ 2024: ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ ಅಭ್ಯರ್ಥಿಗಳು

ಲೋಕಸಭಾ ಚುನಾವಣೆ 2024: ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ ಅಭ್ಯರ್ಥಿಗಳು

ಬೆಂಗಳೂರು(ಏ.25):  ಲೋಕಸಭಾ ಚುವಾವಣೆಗೆ ರಾಜ್ಯದಲ್ಲಿ ಇಂದು(ಏ.26) ಬೆಳಗ್ಗೆಯಿಂದಲೇ ಮತದಾನ ನಡೆಯುತ್ತಿದೆ. ರಾಜ್ಯದ ದಕ್ಷಿಣ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಜನರು ಬಹಳ ಉತ್ಸಾಹದಿಂದ ಬಂದು ಮತ ಹಾಕುವ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು 14 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳೂ ಕೂಡ ಮತದಾನ ಮಾಡಿದ್ದಾರೆ. ಯಾರ್ಯಾರು ಎಲ್ಲಿ ಮತ ಹಾಕಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

2 Min read
Author : Girish Goudar
Published : Apr 26 2024, 01:11 PM IST
Share this Photo Gallery
  • FB
  • TW
  • Linkdin
  • Whatsapp
111

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಮತದಾನ ಮಾಡಿದ್ದಾರೆ. ಪರಿವಾರ ಸಮೇತ ಆಗಮಿಸಿದ ಮತದಾನ ಮಾಡಿದ್ದಾರೆ. 

211

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರು ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ಬೆಳಗ್ಗೆ ಜಯನಗರದ ಎನ್.ಎಮ್.ಕೆ.ಆರ್.ವಿ ಕಾಲೇಜಿನ ಮತಗಟ್ಟೆಯಲ್ಲಿ  ಮತ ಚಲಾಯಿಸಿದೆ. ಬದಲಾವಣೆಗೆ, ಸಂವಿಧಾನದ ರಕ್ಷಣೆಗೆ ಮತ್ತು ದೇಶದ ಅಭ್ಯುದಯಕ್ಕೆ ನನ್ನ ಹಕ್ಕನ್ನು ಚಲಾಯಿಸಿದ್ದೇನೆ‌. ನೀವೂ ಕೂಡಾ ತಪ್ಪದೆ ನಿಮ್ಮ ಹಕ್ಕನ್ನು ಚಲಾಯಿಸಿ, ಬದಲಾವಣೆಗೆ ನಾಂದಿ ಹಾಡಿ ಎಂದು ಹೇಳಿದ್ದಾರೆ. 

311

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌(ಎನ್‌ಡಿಎ) ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದ ಸಖೀ ಮತಗಟ್ಟೆಯಲ್ಲಿ (ಪಿಂಕ್ ಬೂತ್) ನನ್ನ ಕುಟುಂಬ ಸಮೇತವಾಗಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದ ಹಕ್ಕು ಚಲಾಯಿಸಿದ್ದು ನನಗೆ ಬಹಳ ಸಂತೋಷ ತಂದಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎನ್ನುವುದು ನನ್ನ ಕಳಕಳಿ ಎಂದು ಮನವಿ ಮಾಡಿಕೊಂಡಿದ್ದಾರೆ. 

411

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಷ್‌ ಚೌಟ ಅವರು ಮತಗಟ್ಟೆಗೆ ತೆರಳಿ ಮತ ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು, ಎಲ್ಲರೂ ತಪ್ಪದೆ ಮತ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ. 

511

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌(ಎನ್‌ಡಿಎ) ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಕೂಡ ಮತ ಹಾಕಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಅಗಮಿಸಿ ಮತದಾನ ಮಾಡಿದ್ದಾರೆ. 

611

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಕೂಡು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.

711

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ಪತ್ನಿ ಜೊತೆ ಆಗಮಿಸಿದ ಮತದಾನ ಮಾಡಿದ್ದಾರೆ. 

811

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜೀವ್‌ ಗೌಡ ಅವರು ಮತ ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು, ಆತ್ಮೀಯ ಮತಬಾಂಧವರೇ, ನಾನು ನನ್ನ ಮತವನ್ನು ಕರ್ನಾಟಕದ ಅಭಿವೃದ್ಧಿಗಾಗಿ ಜನತೆಯ ಹಿತಕ್ಕಾಗಿ ಚಲಾಯಿಸಿದ್ದೇನೆ. ನೀವೂ ಕೂಡ; ಅಭಿವೃದ್ಧಿ ಶೂನ್ಯ ಹತ್ತು ವರ್ಷಗಳ ಅವಧಿಯ ಆಡಳಿತದ ಬದಲಾವಣೆಗಾಗಿ ಮತ ಚಲಾಯಿಸಿರಿ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಚಲಾಯಿಸಿರಿ  ಸುಂದರ, ಸ್ವಚ್ಛ, ಸಮೃದ್ಧ, ಸೌಹಾರ್ದ ಬೆಂಗಳೂರಿಗೆ ಮತ ಚಲಾಯಿಸಿರಿ. ಸ್ವಾಭಿಮಾನಿ ಕನ್ನಡಿಗರ ಕರ್ನಾಟಕದ ಆರ್ಥಿಕ ನ್ಯಾಯಕ್ಕಾಗಿ ಮತ ಚಲಾಯಿಸಿರಿ. ಗ್ಯಾರಂಟಿ ಯೋಜನೆಗಳ ಉತ್ತಮ ಅನುಷ್ಠಾನಕ್ಕಾಗಿ ಮತ ಚಲಾಯಿಸಿರಿ ಎಂದು ಹೇಳಿದ್ದಾರೆ. 

911

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರು ಮತದಾನ ಮಾಡಿದ್ದಾರೆ. ತಮ್ಮ ಪತ್ನಿ ಸಮೇತ ಮತಗಟ್ಟೆಗೆ ಆಗಮಿಸಿ ಮತ ಹಾಕಿದ್ದಾರೆ. 

1011

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ.  ಬಳಿಕ ಮಾತನಾಡಿದ ಅವರು, ಇದು ಸಂವಿಧಾನದ ಹಬ್ಬವಾಗಿದ್ದು, ನಾನು ನನ್ನ ಹಕ್ಕನ್ನು ಚಲಾಯಿಸಿದೆ, ನೀವೂ ಕೂಡ ತಪ್ಪದೇ ಮತದಾನ ಮಾಡಿ, ನಿಮ್ಮ ಹಕ್ಕನ್ನು ಚಲಾಯಿಸಿ. ದೇಶದ ಭದ್ರತೆಗೆ, ಧರ್ಮದ ರಕ್ಷಣೆಗೆ, ಅಭಿವೃದ್ಧಿಗಾಗಿ ಮತ ನೀಡಿ ಎಂದು ಹೇಳಿದ್ದಾರೆ. 

1111

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ತಮ್ಮ ಪತ್ನಿ ಜತೆ ಆಗಮಿಸಿ ಮತ ಚಲಾಯಿಸುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GG
Girish Goudar
ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಮ್‌ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಎಲೆಕ್ಟ್ರಾನಿಕ್‌ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್‌, ವೇ ಟು ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್‌ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.

Latest Videos
Recommended Stories
Recommended image1
ರಾಹುಲ್ ಗಾಂಧಿ ನೆಗೆಟಿವ್ ಪಾಲಿಟಿಕ್ಸ್‌ನ ಪೋಸ್ಟರ್ ಬಾಯ್, ವಿದೇಶಿ ಶಕ್ತಿಗಳ ಕೈಗೊಂಬೆ, ಪಿಯೂಷ್ ಗೋಯಲ್ ಗಂಭೀರ ಆರೋಪ!
Recommended image2
Now Playing
ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
Recommended image3
Shirtless Protest: ಶರ್ಟ್ ಬಿಚ್ಚಿ ಪ್ರತಿಭಟನೆ: ಇದೊಂದು ನಾಚಿಕೆಗೇಡು, ಕಾಂಗ್ರೆಸ್ ವಿರುದ್ಧ ನಿರ್ಮಲಾ ಗರಂ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved