MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ರಾಜ್ಯದಲ್ಲಿ ಮಿತಿ ಮೀರಿದ ಭಯೋತ್ಪಾದನಾ ಚಟುವಟಿಕೆ; ಹಿಂದೂಗಳ ಮೇಲೆ ಹಲ್ಲೆ: ಆರ್ ಅಶೋಕ್

ರಾಜ್ಯದಲ್ಲಿ ಮಿತಿ ಮೀರಿದ ಭಯೋತ್ಪಾದನಾ ಚಟುವಟಿಕೆ; ಹಿಂದೂಗಳ ಮೇಲೆ ಹಲ್ಲೆ: ಆರ್ ಅಶೋಕ್

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದ್ದು, ಮೂಲಭೂತವಾದಿಗಳಿಂದ ಹಿಂದೂಗಳ ಮೇಲೆ ನಿರಂತರ ಹಲ್ಲೆ ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದರು.

3 Min read
Ravi Janekal
Published : Apr 18 2024, 05:17 PM IST| Updated : Apr 18 2024, 05:19 PM IST
Share this Photo Gallery
  • FB
  • TW
  • Linkdin
  • Whatsapp
18

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಅದರಲ್ಲೂ ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.

28

ಇಂದು ಬೆಂಗಳೂರಿನ ಜಿ.ಎಂ. ರಿಜಾಯ್ಸನ್ ಹೋಟೆಲ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. 

38

ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ “ಜೈ ಶ್ರೀರಾಮ್” ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ “ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ನಾವು ಹಿಂದೂಸ್ತಾನದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಸಂದೇಹ ಕಾಡುವಂತಾಗಿದೆ ಎಂದು ನುಡಿದರು.
 

48

ಸಿದ್ದರಾಮಯ್ಯ(Siddaramaiah)ನವರು ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಕರ್ನಾಟಕವನ್ನು ಧಾರೆ ಎರೆದು ಕೊಟ್ಟಿದ್ದಾರಾ ಎಂದು ಭೀತಿ ವ್ಯಕ್ತಪಡಿಸಿದ ಅವರು, ಲಕ್ಷ್ಮಣ ಸವದಿಯವರು ಸಾರ್ವಜನಿಕ ಸಭೆಯಲ್ಲಿ ಕೈಮುಗಿದು ವಿನಮ್ರವಾಗಿ ‘ನಾನು ಭಾರತ್ ಮಾತಾ ಕೀ ಜೈ ಅನ್ನಬಹುದೇ ಖರ್ಗೆ ಸಾಬೇಬರೇ’ ಎಂದು ಪ್ರಶ್ನಿಸಿದ್ದಾರೆ. ಖರ್ಗೆಯವರು ಅನುಮತಿ ಕೊಟ್ಟಿದ್ದಾರೆ. 
 

58

ಡಿ.ಕೆ.ಸುರೇಶ್ ಅವರು ರಾಮ ದೇವರಲ್ಲ, ನಾವು ಮನೆಯಲ್ಲಿ ಅವರ ಫೋಟೊ ಇಟ್ಟಿಲ್ಲ ಎನ್ನುತ್ತಾರೆ. ಡಿ.ಕೆ.ಸುರೇಶ್ ಅವರೇ, ನೀವು ಕಲ್ಲುಬಂಡೆ ವ್ಯಾಪಾರ ಮಾಡುವವರಲ್ಲವೇ? ಕಲ್ಲು ಬಂಡೆ ಇಟ್ಟುಕೊಳ್ಳಿ. ರಾಮನ ಫೋಟೊ ಯಾಕೆ ಇಡಬೇಕು ಎಂದು ಕೇಳಿದರು. ಇಡೀ ದೇಶದಲ್ಲಿ ರಾಮಭಕ್ತ ಆಂಜನೇಯನ ದೇವಸ್ಥಾನಗಳಿವೆ. ಇದು ನಿಮಗೆ ಕಣ್ಣಿಗೆ ಕಾಣಿಸುವುದಿಲ್ಲವೇ ಎಂದು ಡಿ.ಕೆ.ಸುರೇಶ್ ಅವರನ್ನು ಪ್ರಶ್ನಿಸಿದರು.

ಹಿಂದೂಗಳನ್ನು ಈ ಥರ ಬೈದು ಬೈದು ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆಗಳು ಜಾಸ್ತಿಯಾಗಿವೆ. ಶ್ರೀರಾಮ ಮಂದಿರಕ್ಕೆ ಹೋಗುವ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗುತ್ತಿದೆ. ಮಂಡ್ಯದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಕಿತ್ತು ಹಾಕಿದ್ದೀರಿ. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಹಿಂದೂಗಳು ಭಯದಿಂದ ಬದುಕುವಂಥ ವಾತಾವರಣವನ್ನು ಸಿದ್ದರಾಮಯ್ಯ ಆಂಡ್ ಗ್ಯಾಂಗ್ ಮಾಡುವುದನ್ನು ಖಂಡಿಸುವುದಾಗಿ ಹೇಳಿದರು.
 

68

ಚಿಕ್ಕಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದನ್ನು ವಿರೋಧಿಸಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಮಾಡಿ ಹೊಡೆದು ದರೋಡೆ ಮಾಡಿದ್ದಾರೆ. ಕಾಂಗ್ರೆಸ್ ಸರಕಾರ ಪರೋಕ್ಷವಾಗಿ ಗೂಂಡಾಗಿರಿಗೆ ಬೆಂಬಲ ಕೊಡುತ್ತಿದೆ ಎಂದು ಆಕ್ಷೇಪಿಸಿದರು. ಮತ ಹಾಕಿದರೆ ಅವರನ್ನು ರಕ್ಷಿಸುವ ಸಂದೇಶವನ್ನು ಮೂಲಭೂತವಾದಿಗಳಿಗೆ ಕಾಂಗ್ರೆಸ್ ಪಕ್ಷ ನೀಡಿದೆ ಎಂದು ಟೀಕಿಸಿದರು.
 

78

ಬಹುಸಂಖ್ಯಾತ ಹಿಂದೂಗಳನ್ನು ಈ ಸರಕಾರ ಕಡೆಗಣಿಸುತ್ತಿದೆ. ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸಿದ್ದರಾಮಯ್ಯನವರು ಗೂಂಡಾ ಕಾಯ್ದೆ, ದೇಶದ್ರೋಹದ ಕೇಸು ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ಅರೆಸ್ಟ್ ಮಾಡಿದ್ದೀರಿ. ಬಿರಿಯಾನಿ ಕೊಟ್ಟು ಕಳಿಸುತ್ತೀರಿ ಎಂದು ಆಕ್ಷೇಪಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಉಪ ಮುಖ್ಯಮಂತ್ರಿಯವರ ಸಹೋದರ ದೇಶ ಇಬ್ಭಾಗ ಮಾಡಬೇಕು ಎನ್ನುತ್ತಾರೆ. ಈ ಥರದ ಹೇಳಿಕೆಗಳಿಂದ ಅಲ್ಪಸಂಖ್ಯಾತ ಮೂಲಭೂತವಾದಿಗಳಿಗೆ ಹುರುಪು ಬಂದಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನವರು ಫಿಟ್ಟಿಂಗ್ ಮಾಸ್ಟರ್‍ಗಳು. ರಾಮೇಶ್ವರಂ ಕೆಫೆ ಬಾಂಬ್ ಹೊಗೆ ಏಳುತ್ತಿರುವಾಗಲೇ ಅದು ಹೋಟೆಲ್ ರೈವಲ್ರಿ ಎಂದಿದ್ದರು ಎಂದು ಟೀಕಿಸಿದರು.

88

ಇಂಥ ಘಟನೆಗಳಿಗೆ ಕಾರಣವಾದ ಈ ಸರಕಾರ ಬಹಳ ದಿನ ಉಳಿಯುವುದಿಲ್ಲ. ಇದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ಸರಕಾರ ಎಂದು ಬ್ರಾಂಡ್ ಆಗಿದೆ. ಇದು ಜನಕ್ಕೆ ಗೊತ್ತಾಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರು ಇವರಿಗೆ ಪಾಠ ಕಲಿಸುತ್ತಾರೆ ಎಂದರು. ನಿಮ್ಮ ಏಕೈಕ ಎಂಪಿ, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಂಸತ್ತಿನಲ್ಲಿ ಏನು ಮಾಡಿದ್ದಾರೆ? ಕರ್ನಾಟಕದ ಪರವಾಗಿ ಬಾಯಿ ಬಿಟ್ಟೇ ಇಲ್ಲ; ನೀವೇನು ಮಾಡಿದ್ದೀರಿ ಎಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದು ತಿಳಿಸಿದರು.

ಹಿಂದೂಗಳ ರಕ್ಷಣೆ ಬಗ್ಗೆ ಆತಂಕ ಉಂಟಾಗಿದೆ. ದರಿದ್ರ ಸರಕಾರ ಇದು. ನಯಾಪೈಸೆ ಹಣ ಇಲ್ಲ. ಮೇ ಜೂನ್ ನಂತರ ಸಂಬಳ ಕೊಡಲು ದುಡ್ಡಿಲ್ಲ ಎಂಬ ಸ್ಥಿತಿ ಬಂದಿದೆ. ಪಿಂಚಣಿ, ಸ್ಕಾಲರ್‍ಶಿಪ್ ಕೊಟ್ಟಿಲ್ಲ. ಇದರ ಜೊತೆಗೆ ಕರ್ನಾಟಕದ ಶಾಂತಿಯ ತೋಟವನ್ನು ಮತಕ್ಕಾಗಿ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದರ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದು ಎಚ್ಚರಿಸಿದರು. ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಹಾಜರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಬೆಂಗಳೂರು
ಆರ್. ಅಶೋಕ್
ಸಿದ್ದರಾಮಯ್ಯ

Latest Videos
Recommended Stories
Recommended image1
ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ
Recommended image2
ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ
Recommended image3
ಕಾಂಗ್ರೆಸ್‌ನ ಕಟ್ಟಾಳು ಶಾಮನೂರು ಶಿವಶಂಕರಪ್ಪ: ದಾವಣಗೆರೆಯ ಅಜೇಯ ರಾಜಕೀಯ ದಂತಕಥೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved