ಸಿದ್ದು ಆರೋಗ್ಯ ವಿಚಾರಿಸಿದ ವಿವಿಧ ಮಠಾಧೀಶರು: ಮತ್ತೊಂದೆಡೆ ವಿಶೇಷ ಪೂಜೆ
ಹೃದಯ ಸಂಬಂಧಿ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದತೆ ರಾಜಕೀಯ ಮುಖಂಡರು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಇನ್ನೊಂದು ಕಡೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು [ಶುಕ್ರವಾರ] 2ನೇ ದಿನ ಟೀಂ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಹಾಗೂ ವಿವಿಧ ಸಮುದಾಯದ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯನವರ ಯೋಗಕ್ಷೆಮ ವಿಚಾರಿಸಿ ಬೇಗ ಗುಣಮುಖರಾಗಲೆಂದು ಆಶೀರ್ವಾದಿಸಿದರು. ಅಷ್ಟೇ ಅಲ್ಲದೇ ತಾತನನ್ನು ಮಾತನಾಡಿಸಲು ದಿವಂಗತ ರಾಕೇಶ್ ಸಿದ್ದರಾಮಯ್ಯ ಪುತ್ರ ಸಹ ಓಡೋಡಿ ಆಸ್ಪತ್ರೆಗೆ ಬಂದಿದ್ದಾನೆ. ಯಾರೆಲ್ಲ ಬಂದಿದ್ದರು ಎನ್ನುವುದನ್ನು ಚಿತ್ರಗಳಲ್ಲಿ ನೋಡಿ..
110

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶ್ರೀ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ.
ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶ್ರೀ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ.
Add Asianetnews Kannada as a Preferred Source

210
ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.
ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.
310
ಸಿದ್ದರಾಮಯ್ಯನವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು
ಸಿದ್ದರಾಮಯ್ಯನವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು
410
ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಯೋಗ ಕ್ಷೇಮ ವಿಚಾರಿಸಿದ ವಿವಿಧ ಮಠಾಧೀಶರು
ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಯೋಗ ಕ್ಷೇಮ ವಿಚಾರಿಸಿದ ವಿವಿಧ ಮಠಾಧೀಶರು
510
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಹೊಸದುರ್ಗ ಶಾಖೆ ಕನಕ ಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಂಗಳೂರಿನ ರಾಮಾನುಜ ಮಠದ ಶ್ರೀ ತ್ರಿದಂಡಿ ವೆಂಕಟ ರಾಮಾನುಜ ಜಿಯರ್ ಸ್ವಾಮೀಜಿ, ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದರು.
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಹೊಸದುರ್ಗ ಶಾಖೆ ಕನಕ ಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಂಗಳೂರಿನ ರಾಮಾನುಜ ಮಠದ ಶ್ರೀ ತ್ರಿದಂಡಿ ವೆಂಕಟ ರಾಮಾನುಜ ಜಿಯರ್ ಸ್ವಾಮೀಜಿ, ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದರು.
610
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡರು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡರು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು
710
ಮಾಜಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.
ಮಾಜಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.
810
ಕಾಂಗ್ರೆಸ್ ತೊರೆದು ಹಿರೇಕೆರೂರು ಬೈ ಎಲೆಕ್ಷನ್ ನಲ್ಲಿ ಬಿಜೆಪಿಯಿಂದ ಗೆದ್ದ ಬಿ.ಸಿ.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿದರು.
ಕಾಂಗ್ರೆಸ್ ತೊರೆದು ಹಿರೇಕೆರೂರು ಬೈ ಎಲೆಕ್ಷನ್ ನಲ್ಲಿ ಬಿಜೆಪಿಯಿಂದ ಗೆದ್ದ ಬಿ.ಸಿ.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿದರು.
910
ಒಂದು ಕಡೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ನಾಯಕರ ದಂಡೆ ಹರಿದುಬಂದ್ರೆ, ಇನ್ನೊಂದು ಕಡೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಒಂದು ಕಡೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ನಾಯಕರ ದಂಡೆ ಹರಿದುಬಂದ್ರೆ, ಇನ್ನೊಂದು ಕಡೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
1010
ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲೆಂದು ಸ್ವಕ್ಷೇತ್ರದ ಅವರ ಅಭಿಮಾನಿಗಳು ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀರ್ಘದಂಡ ನಮಸ್ಕಾರ ಹಾಕಿದ್ರು.
ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲೆಂದು ಸ್ವಕ್ಷೇತ್ರದ ಅವರ ಅಭಿಮಾನಿಗಳು ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀರ್ಘದಂಡ ನಮಸ್ಕಾರ ಹಾಕಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos