ಸೋನಿಯಾ ಗಾಂಧಿ ಸೂಚನೆ ಮೇರೆಗೆ ಅಖಾಡಕ್ಕಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಖಡಕ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಖಾಡಕ್ಕಿಳಿಸಿದ್ದು, ಫುಲ್ ಆಕ್ಟಿವ್ ಆಗಿದ್ದಾರೆ. ಅಷ್ಟಕ್ಕೂ ಸೋನಿಯಾ ಗಾಂಧಿ ಕೊಟ್ಟ ಸೂಚನೆ ಏನು? ಎನ್ನುವುದನ್ನಿ ಚಿತ್ರಗಳಲ್ಲಿ ನೋಡಿ.
ದೇಶದಲ್ಲಿ ರೌದ್ರಾವತಾರ ತಾಳಿರುವ ಕೊರೋನಾ ಪರಿಸ್ಥಿತಿ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳ ಜತೆ ಶುಕ್ರವಾರ ನಡೆಸಿದ ವಿಡಿಯೋ ಕಾನ್ಫರೇನ್ಸ್ ನಡೆಸಿ ಜನರ ನೆರವಿಗೆ ನಿಲ್ಲಿ ಎಂದು ಸೂಚಿಸಿದರು.
ಸೋನಿಯಾ ಗಾಂಧಿ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊರೋನಾ ವಿರುದ್ಧ ಅಖಾಡಕ್ಕಿಳಿದಿದ್ದಾರೆ.
ಬಡವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯದಲ್ಲಿ ಡಿಕೆ ಶಿವಕುಮಾರ್ ತೊಡಗಿದ್ದಾರೆ.
ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರಿಗೆ ಆಹಾರ ಕಿಟ್ ವಿತರಿಸಿದರು.
ಸೋನಿಯಾ ಆದೇಶದ ಮೇರೆ ಕಾಂಗ್ರೆಸ್ ವತಿಯಿಂದ ಬಡವರಿಗೆ ಸಹಾಯ
ರಾಜ್ಯದೆಲ್ಲೆಡೆ ಬಡ ಜನರಿಗಾಗಿ ಅಗತ್ಯ ವಸ್ತುಗಳ ಪೂರೈಕೆಗೆ ತೀರ್ಮಾನ
ಬಡ ಮತ್ತು ನಿರ್ಗತಿಕರ ಸಹಾಯಕ ನಿಲ್ಲಿ ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೂ ಸೂಚಿಸಿದ ಡಿಕೆಶಿ
ಕೋವಿಡ್ 19 ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ವಾರ್ ರೂಮ್ ತೆರೆಯಲಾಗಿದೆ.